<p><strong>ಬಳ್ಳಾರಿ:</strong> ನಗರದ ತೋಟಗಾರಿಕೆ ಕಚೇರಿ ಮುಂಭಾಗ ಸೋಮವಾರ ರೈತರು ಮೆಣಸಿಕಾಯಿ ಬೀಜ ಖರೀದಿಗೆ ಬಂದಿದ್ದ ಸಂದರ್ಭದಲ್ಲಿ ಏಕಾಏಕಿ ನೂಕು ನುಗ್ಗಲು ಉಂಟಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು.</p>.<p>ಜಿಲ್ಲಾಡಳಿತ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಸಿಜೆಂಟಾ ಕಂಪನಿ ವಿತರಕರು 5531 ತಳಿಯ ಮೆಣಸಿನಕಾಯಿ ಬೀಜ ರೈತರಿಗೆ ವಿತರಿಸುತ್ತಿದ್ದಾಗ ಪ್ರಸ್ತುತ ಘಟನೆ ನಡೆದಿದೆ.</p>.<p>ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವುದರಿಂದ ಮೆಣಸಿಕಾಯಿ ಬೀಜಕ್ಕಾಗಿ ನೂರಾರು ರೈತರು ಬಂದಿದ್ದರು. ಆದರೆ, ಕೆಲವೇ ರೈತರಿಗೆ ಬೀಜ ವಿತರಿಸಿ ಕೌಂಟರ್ ಬಂದ್ ಮಾಡಿದ್ದರಿಂದ ಹಳ್ಳಿ ಭಾಗದಿಂದ ಬಂದ ಇತರೆ ರೈತರು ಆಕ್ರೋಶ ವ್ಯಕ್ತಪಡಿಸಿದರು.<br />ವಿಷಯ ಅರಿತ ಉಪ ವಿಭಾಗಾಧಿಕಾರಿರಮೇಶ್ ಕೋನರೆಡ್ಡಿ, ತಹಶೀಲ್ದಾರ್ ರೆಹಮಾನ್ ಪಾಷ, ಕೃಷಿ ಇಲಾಖೆ ಅಧಿಕಾರಿ ಶರಣಪ್ಪ ಮುದಗಲ್ ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ಸಮಾಧಾನಪಡಿಸಿದರು.</p>.<p>ಪ್ರತಿ ರೈತರಿಗೆ 100ಗ್ರಾಂ ಮೆಣಸಿನಬೀಜ ವಿತರಿಸಲಾಗುವುದು. ಅದಕ್ಕಾಗಿ ರೈತರುಪಹಣಿ ಮತ್ತು ಆಧಾರ್ ಕಾರ್ಡ್ ಜಿರಾಕ್ಸ್ ಪ್ರತಿ ಕೊಡಬೇಕು ಎಂದು ಅಧಿಕಾರಿಗಳು ಸೂಚಿಸಿದ್ದರು. ಆದರೆ, ಈ ಮಾಹಿತಿ ನಮಗೆ ತಿಳಿದಿಲ್ಲ ಎಂದು ಕೆಲ ರೈತರು ಹಿಡಿಶಾಪ ಹಾಕಿ ಬೀಜ ದೊರೆಯದೆ ಬರಿಗೈಯಿಂದ ಮನೆಗೆ ಮರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ನಗರದ ತೋಟಗಾರಿಕೆ ಕಚೇರಿ ಮುಂಭಾಗ ಸೋಮವಾರ ರೈತರು ಮೆಣಸಿಕಾಯಿ ಬೀಜ ಖರೀದಿಗೆ ಬಂದಿದ್ದ ಸಂದರ್ಭದಲ್ಲಿ ಏಕಾಏಕಿ ನೂಕು ನುಗ್ಗಲು ಉಂಟಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು.</p>.<p>ಜಿಲ್ಲಾಡಳಿತ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಸಿಜೆಂಟಾ ಕಂಪನಿ ವಿತರಕರು 5531 ತಳಿಯ ಮೆಣಸಿನಕಾಯಿ ಬೀಜ ರೈತರಿಗೆ ವಿತರಿಸುತ್ತಿದ್ದಾಗ ಪ್ರಸ್ತುತ ಘಟನೆ ನಡೆದಿದೆ.</p>.<p>ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವುದರಿಂದ ಮೆಣಸಿಕಾಯಿ ಬೀಜಕ್ಕಾಗಿ ನೂರಾರು ರೈತರು ಬಂದಿದ್ದರು. ಆದರೆ, ಕೆಲವೇ ರೈತರಿಗೆ ಬೀಜ ವಿತರಿಸಿ ಕೌಂಟರ್ ಬಂದ್ ಮಾಡಿದ್ದರಿಂದ ಹಳ್ಳಿ ಭಾಗದಿಂದ ಬಂದ ಇತರೆ ರೈತರು ಆಕ್ರೋಶ ವ್ಯಕ್ತಪಡಿಸಿದರು.<br />ವಿಷಯ ಅರಿತ ಉಪ ವಿಭಾಗಾಧಿಕಾರಿರಮೇಶ್ ಕೋನರೆಡ್ಡಿ, ತಹಶೀಲ್ದಾರ್ ರೆಹಮಾನ್ ಪಾಷ, ಕೃಷಿ ಇಲಾಖೆ ಅಧಿಕಾರಿ ಶರಣಪ್ಪ ಮುದಗಲ್ ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ಸಮಾಧಾನಪಡಿಸಿದರು.</p>.<p>ಪ್ರತಿ ರೈತರಿಗೆ 100ಗ್ರಾಂ ಮೆಣಸಿನಬೀಜ ವಿತರಿಸಲಾಗುವುದು. ಅದಕ್ಕಾಗಿ ರೈತರುಪಹಣಿ ಮತ್ತು ಆಧಾರ್ ಕಾರ್ಡ್ ಜಿರಾಕ್ಸ್ ಪ್ರತಿ ಕೊಡಬೇಕು ಎಂದು ಅಧಿಕಾರಿಗಳು ಸೂಚಿಸಿದ್ದರು. ಆದರೆ, ಈ ಮಾಹಿತಿ ನಮಗೆ ತಿಳಿದಿಲ್ಲ ಎಂದು ಕೆಲ ರೈತರು ಹಿಡಿಶಾಪ ಹಾಕಿ ಬೀಜ ದೊರೆಯದೆ ಬರಿಗೈಯಿಂದ ಮನೆಗೆ ಮರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>