<p><strong>ಹಗರಿಬೊಮ್ಮನಹಳ್ಳಿ</strong>: ‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಮಗಾರಿಗಳು ಕಳಪೆಯಾಗಿದ್ದರೆ ಅಂಥಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಶಾಸಕ ಕೆ.ನೇಮರಾಜನಾಯ್ಕ ಎಚ್ಚರಿಸಿದರು.</p>.<p>ತಾಲ್ಲೂಕಿನ ಮಸಾರಿ ನೆಲ್ಕುದ್ರಿ, ಮಾಲವಿ, ಹರೇಗೊಂಡನಹಳ್ಳಿ, ಉಲುವತ್ತಿ, ವಟ್ಟಮ್ಮನಹಳ್ಳಿ, ಕನ್ನಿಹಳ್ಳಿ, ಕೃಷ್ಣಾಪುರ, ಬನ್ನಿಗೋಳ, ಶೀಗೇನಹಳ್ಳಿ, ತಂಬ್ರಹಳ್ಳಿ-ಉತ್ತರ ಗ್ರಾಮಗಳಲ್ಲಿ ಅಂದಾಜು ₹6.5ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.</p>.<p>ಮಸಾರಿ ನೆಲ್ಕುದ್ರಿ ಗ್ರಾಮದಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕುಡಿಯುವ ನೀರಿನ ಸ್ಥಾವರ ಬಳಕೆಯಾಗದೇ ಸೋರಿಕೆಯಾಗುತ್ತಿದೆ, ಈ ಕುರಿತು ಕ್ರಮ ಕೈಗೊಳ್ಳುವಂತೆ ಮುಖಂಡ ಕೆ.ರಾಜಶೇಖರಪ್ಪ ಒತ್ತಾಯಿಸಿದರು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಬಸವರೆಡ್ಡಿ ಅವರಿಗೆ ಕರೆಮಾಡಿ ಕಾಮಗಾರಿ ಕಳಪೆಯಾಗಿದ್ದರೆ ಗುತ್ತಿಗೆದಾರನ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಶಾಸಕರು ತಾಕೀತು ಮಾಡಿದರು.</p>.<p>‘ತಾಲ್ಲೂಕಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಚೆಕ್ಡ್ಯಾಂ ನಿರ್ಮಿಸುವುದಕ್ಕೆ ಕ್ರಿಯಾಯೋಜನೆ ರೂಪಿಸಲಾಗಿದೆ. ಅಂತರ್ಜಲ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಕಳೆದ 2 ವರ್ಷಗಳಲ್ಲಿ ಕ್ಷೇತ್ರದ ಎಲ್ಲ 254 ಬೂತ್ಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಮುಖಂಡರಾದ ಬಾದಾಮಿ ಮೃತ್ಯುಂಜಯ, ಕನ್ನಿಹಳ್ಳಿ ಚಂದ್ರಶೇಖರ್, ಬ್ಯಾಟಿ ನಾಗರಾಜ, ಫಕ್ಕೀರರೆಡ್ಡಿ, ನರೇಗಲ್ಲು ಕೊಟ್ರೇಶ್, ಕಾಳಿ ರೇವಣಸಿದ್ದಪ್ಪ, ಹೋಟೆಲ್ ಸಿದ್ದರಾಜು, ಮಹಾಂತೇಶ್ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಮಗಾರಿಗಳು ಕಳಪೆಯಾಗಿದ್ದರೆ ಅಂಥಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಶಾಸಕ ಕೆ.ನೇಮರಾಜನಾಯ್ಕ ಎಚ್ಚರಿಸಿದರು.</p>.<p>ತಾಲ್ಲೂಕಿನ ಮಸಾರಿ ನೆಲ್ಕುದ್ರಿ, ಮಾಲವಿ, ಹರೇಗೊಂಡನಹಳ್ಳಿ, ಉಲುವತ್ತಿ, ವಟ್ಟಮ್ಮನಹಳ್ಳಿ, ಕನ್ನಿಹಳ್ಳಿ, ಕೃಷ್ಣಾಪುರ, ಬನ್ನಿಗೋಳ, ಶೀಗೇನಹಳ್ಳಿ, ತಂಬ್ರಹಳ್ಳಿ-ಉತ್ತರ ಗ್ರಾಮಗಳಲ್ಲಿ ಅಂದಾಜು ₹6.5ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.</p>.<p>ಮಸಾರಿ ನೆಲ್ಕುದ್ರಿ ಗ್ರಾಮದಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕುಡಿಯುವ ನೀರಿನ ಸ್ಥಾವರ ಬಳಕೆಯಾಗದೇ ಸೋರಿಕೆಯಾಗುತ್ತಿದೆ, ಈ ಕುರಿತು ಕ್ರಮ ಕೈಗೊಳ್ಳುವಂತೆ ಮುಖಂಡ ಕೆ.ರಾಜಶೇಖರಪ್ಪ ಒತ್ತಾಯಿಸಿದರು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಬಸವರೆಡ್ಡಿ ಅವರಿಗೆ ಕರೆಮಾಡಿ ಕಾಮಗಾರಿ ಕಳಪೆಯಾಗಿದ್ದರೆ ಗುತ್ತಿಗೆದಾರನ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಶಾಸಕರು ತಾಕೀತು ಮಾಡಿದರು.</p>.<p>‘ತಾಲ್ಲೂಕಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಚೆಕ್ಡ್ಯಾಂ ನಿರ್ಮಿಸುವುದಕ್ಕೆ ಕ್ರಿಯಾಯೋಜನೆ ರೂಪಿಸಲಾಗಿದೆ. ಅಂತರ್ಜಲ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಕಳೆದ 2 ವರ್ಷಗಳಲ್ಲಿ ಕ್ಷೇತ್ರದ ಎಲ್ಲ 254 ಬೂತ್ಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಮುಖಂಡರಾದ ಬಾದಾಮಿ ಮೃತ್ಯುಂಜಯ, ಕನ್ನಿಹಳ್ಳಿ ಚಂದ್ರಶೇಖರ್, ಬ್ಯಾಟಿ ನಾಗರಾಜ, ಫಕ್ಕೀರರೆಡ್ಡಿ, ನರೇಗಲ್ಲು ಕೊಟ್ರೇಶ್, ಕಾಳಿ ರೇವಣಸಿದ್ದಪ್ಪ, ಹೋಟೆಲ್ ಸಿದ್ದರಾಜು, ಮಹಾಂತೇಶ್ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>