<p><strong>ಬಳ್ಳಾರಿ</strong>: ‘ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ನಡೆಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಹೇಳಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೈಯಲ್ಲಿ ‘ಚರಂಡಿ ಇಳಿಗುಂಡಿ’ (ಮ್ಯಾನ್ಹೋಲ್) ಸ್ವಚ್ಛತೆ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಎಲ್ಲಾ ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಇದೆಯೇ ಎಂಬ ಬಗ್ಗೆ ಸಮೀಕ್ಷೆ ಮಾಡಿ, ನಿವೇಶನ ರಹಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಬೇಕು. ಹಿಂದೆ ನಿವೇಶನ ಪಡೆದು ಕಾಮಗಾರಿ ನಡೆಸುತ್ತಿರುವ ಫಲಾನುಭವಿಗಳಿಗೆ ಬಾಕಿ ಕಂತಿನ ಹಣ ಬಿಡುಗಡೆಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಟ ವೇತನ ಮತ್ತು ಇ.ಎಸ್.ಐ, ಪಿ.ಎಫ್ ಪಾವತಿಯಾಗುತ್ತಿರುವ ಕುರಿತು ಪರಿಶೀಲಿಸಿದರು. ಸಕಾಲದಲ್ಲಿ ಇ.ಎಸ್.ಐ, ಪಿ.ಎಫ್ ಪಾವತಿಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ತೋರುವಂತಿಲ್ಲ ಎಂದರು.</p>.<p>ಜಿಲ್ಲೆಯಲ್ಲಿ ಮಂಜೂರಾದ ಸಮುದಾಯ ಸ್ಯಾನಿಟರಿ ಶೌಚಾಲಯಗಳ ಕಾಮಗಾರಿ ಪ್ರಾರಂಭಿಸಬೇಕು. ಅಪೂರ್ಣಗೊಂಡ ಕಾಮಗಾರಿಗಳನ್ನೂ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.</p>.<p>ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದರು.</p>.<p>ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಕೀನಾ ಸೇರಿದಂತೆ ನಗರಸಭೆ, ಪುರಸಭೆಯ ಅಧಿಕಾರಿಗಳು, ವಿವಿಧ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ನಡೆಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಹೇಳಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೈಯಲ್ಲಿ ‘ಚರಂಡಿ ಇಳಿಗುಂಡಿ’ (ಮ್ಯಾನ್ಹೋಲ್) ಸ್ವಚ್ಛತೆ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ಎಲ್ಲಾ ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಇದೆಯೇ ಎಂಬ ಬಗ್ಗೆ ಸಮೀಕ್ಷೆ ಮಾಡಿ, ನಿವೇಶನ ರಹಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಬೇಕು. ಹಿಂದೆ ನಿವೇಶನ ಪಡೆದು ಕಾಮಗಾರಿ ನಡೆಸುತ್ತಿರುವ ಫಲಾನುಭವಿಗಳಿಗೆ ಬಾಕಿ ಕಂತಿನ ಹಣ ಬಿಡುಗಡೆಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಟ ವೇತನ ಮತ್ತು ಇ.ಎಸ್.ಐ, ಪಿ.ಎಫ್ ಪಾವತಿಯಾಗುತ್ತಿರುವ ಕುರಿತು ಪರಿಶೀಲಿಸಿದರು. ಸಕಾಲದಲ್ಲಿ ಇ.ಎಸ್.ಐ, ಪಿ.ಎಫ್ ಪಾವತಿಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ತೋರುವಂತಿಲ್ಲ ಎಂದರು.</p>.<p>ಜಿಲ್ಲೆಯಲ್ಲಿ ಮಂಜೂರಾದ ಸಮುದಾಯ ಸ್ಯಾನಿಟರಿ ಶೌಚಾಲಯಗಳ ಕಾಮಗಾರಿ ಪ್ರಾರಂಭಿಸಬೇಕು. ಅಪೂರ್ಣಗೊಂಡ ಕಾಮಗಾರಿಗಳನ್ನೂ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.</p>.<p>ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದರು.</p>.<p>ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಕೀನಾ ಸೇರಿದಂತೆ ನಗರಸಭೆ, ಪುರಸಭೆಯ ಅಧಿಕಾರಿಗಳು, ವಿವಿಧ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>