<p>ಕುಡತಿನಿ (<strong>ಸಂಡೂರು</strong>): ಪಟ್ಟಣದ ಕಂಪ್ಲಿ ರಸ್ತೆಯಲ್ಲಿನ 11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವಿದ್ಯುತ್ ಪರಿವರ್ತಕದಲ್ಲಿ ಶನಿವಾರ ಬೆಳಿಗ್ಗೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಸಮಸ್ಯೆಯುಂಟಾಗಿ ಜನರು ನೀರಿಗಾಗಿ ಪರದಾಡಿದರು.</p>.<p>ಕುಡತಿನಿ, ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ವಿದ್ಯುತ್ ಸಮಸ್ಯೆಯಿಂದ ಶನಿವಾರ ರಾತ್ರಿ ಕತ್ತಲಲ್ಲೇ ಕಾಲ ಕಳೆದರು.</p>.<p>ಕುಡಿಯುವ ನೀರಿಗಾಗಿ ತೋರಣಗಲ್ಲು ಗ್ರಾಮದಿಂದ ಬಂದ ಖಾಸಗಿ ವಾಹನಗಳ ಶುದ್ಧ ಕುಡಿಯುವ ನೀರಿನ ಟ್ಯಾಂಕರ್ಗಳಿಗೆ ಜನರು ಮುಗಿಬಿದ್ದು ಒಂದು ಕೊಡಕ್ಕೆ ₹10, ಒಂದು ಕ್ಯಾನ್ಗೆ ₹20 ನೀಡಿ ನೀರು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.</p>.<p>‘ಪಟ್ಟಣದ ಎಲ್ಲ ವಾರ್ಡ್ಗಳಿಗೆ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸಬೇಕು ಎಂದು ಸಾರ್ವಜನಿಕರು, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪಟ್ಟಣದ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸಿಲ್ಲ’ ಎಂದು ಕುಡತಿನಿಯ ಕರವೇ ಗ್ರಾಮ ಘಟಕದ ಅಧ್ಯಕ್ಷ ಕಮ್ಮತಿಮ್ಮಪ್ಪ ಬೇಸರ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೆಲ ಜನರು ದೂರದ ಬಿಟಿಪಿಎಸ್ ಕಾರ್ಖಾನೆಯ ಶುದ್ಧ ಕುಡಿಯುವ ನೀರಿನ ಘಟಕ, ಏಳುಬೆಂಚಿ, ಸಿದ್ಧಮ್ಮನಹಳ್ಳಿ ಗ್ರಾಮಗಳ ಬಳಿಯಲ್ಲಿನ ಎಚ್ಎಲ್ಸಿ ಕಾಲುವೆಗೆ ತೆರಳಿ, ಬೈಕ್, ಸೈಕಲ್, ಆಟೋ, ಇತರೆ ವಾಹನಗಳ ಮೂಲಕ ಬಿಂದಿಗೆ, ಕ್ಯಾನ್ಗಳ ಮೂಲಕ ನೀರು ತರುವುದು ಸಾಮಾನ್ಯವಾಗಿತ್ತು.</p>.<p><strong>ಕುಡತಿನಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿನ ನಿರಂತರ ವಿದ್ಯುತ್ ಸಮಸ್ಯೆ ಬಗ್ಗೆ ಮಾಹಿತಿ ಇಲ್ಲ. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜೆಸ್ಕಾಂ ಇಲಾಖೆ ಅಧಿಕಾರಿಗಳ ಬಳಿ ಚರ್ಚಿಸಿ ಕೂಡಲೇ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮವಹಿಸಲಾಗುವುದು </strong></p><p><strong>-ಟಿ.ರೇಖಾ ತಹಶೀಲ್ದಾರ್ ಬಳ್ಳಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಡತಿನಿ (<strong>ಸಂಡೂರು</strong>): ಪಟ್ಟಣದ ಕಂಪ್ಲಿ ರಸ್ತೆಯಲ್ಲಿನ 11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವಿದ್ಯುತ್ ಪರಿವರ್ತಕದಲ್ಲಿ ಶನಿವಾರ ಬೆಳಿಗ್ಗೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಸಮಸ್ಯೆಯುಂಟಾಗಿ ಜನರು ನೀರಿಗಾಗಿ ಪರದಾಡಿದರು.</p>.<p>ಕುಡತಿನಿ, ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ವಿದ್ಯುತ್ ಸಮಸ್ಯೆಯಿಂದ ಶನಿವಾರ ರಾತ್ರಿ ಕತ್ತಲಲ್ಲೇ ಕಾಲ ಕಳೆದರು.</p>.<p>ಕುಡಿಯುವ ನೀರಿಗಾಗಿ ತೋರಣಗಲ್ಲು ಗ್ರಾಮದಿಂದ ಬಂದ ಖಾಸಗಿ ವಾಹನಗಳ ಶುದ್ಧ ಕುಡಿಯುವ ನೀರಿನ ಟ್ಯಾಂಕರ್ಗಳಿಗೆ ಜನರು ಮುಗಿಬಿದ್ದು ಒಂದು ಕೊಡಕ್ಕೆ ₹10, ಒಂದು ಕ್ಯಾನ್ಗೆ ₹20 ನೀಡಿ ನೀರು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.</p>.<p>‘ಪಟ್ಟಣದ ಎಲ್ಲ ವಾರ್ಡ್ಗಳಿಗೆ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸಬೇಕು ಎಂದು ಸಾರ್ವಜನಿಕರು, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪಟ್ಟಣದ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸಿಲ್ಲ’ ಎಂದು ಕುಡತಿನಿಯ ಕರವೇ ಗ್ರಾಮ ಘಟಕದ ಅಧ್ಯಕ್ಷ ಕಮ್ಮತಿಮ್ಮಪ್ಪ ಬೇಸರ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೆಲ ಜನರು ದೂರದ ಬಿಟಿಪಿಎಸ್ ಕಾರ್ಖಾನೆಯ ಶುದ್ಧ ಕುಡಿಯುವ ನೀರಿನ ಘಟಕ, ಏಳುಬೆಂಚಿ, ಸಿದ್ಧಮ್ಮನಹಳ್ಳಿ ಗ್ರಾಮಗಳ ಬಳಿಯಲ್ಲಿನ ಎಚ್ಎಲ್ಸಿ ಕಾಲುವೆಗೆ ತೆರಳಿ, ಬೈಕ್, ಸೈಕಲ್, ಆಟೋ, ಇತರೆ ವಾಹನಗಳ ಮೂಲಕ ಬಿಂದಿಗೆ, ಕ್ಯಾನ್ಗಳ ಮೂಲಕ ನೀರು ತರುವುದು ಸಾಮಾನ್ಯವಾಗಿತ್ತು.</p>.<p><strong>ಕುಡತಿನಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿನ ನಿರಂತರ ವಿದ್ಯುತ್ ಸಮಸ್ಯೆ ಬಗ್ಗೆ ಮಾಹಿತಿ ಇಲ್ಲ. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜೆಸ್ಕಾಂ ಇಲಾಖೆ ಅಧಿಕಾರಿಗಳ ಬಳಿ ಚರ್ಚಿಸಿ ಕೂಡಲೇ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮವಹಿಸಲಾಗುವುದು </strong></p><p><strong>-ಟಿ.ರೇಖಾ ತಹಶೀಲ್ದಾರ್ ಬಳ್ಳಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>