<p><strong>ಸಿರುಗುಪ್ಪ:</strong> ಕೇಂದ್ರ ಸರ್ಕಾರದ ಕಾನೂನು ನೀತಿಯನ್ನು ವಿರೋಧಿಸಿ ನಗರದ ಸಿ.ಐ.ಟಿ.ಯು ತಾಲ್ಲೂಕು ಸಮಿತಿ ವತಿಯಿಂದ ಮಹಾತ್ಮ ಗಾಂಧಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.</p>.<p>ಸಿ.ಐ.ಟಿ.ಯು ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್. ತಿಪ್ಪಯ್ಯ ಮಾತನಾಡಿ, ‘ಕೇಂದ್ರ ಸರ್ಕಾರವು ಈ ಹಿಂದೆ ಇದ್ದ 44 ಕಾರ್ಮಿಕ ಕಾನೂನುಗಳನ್ನು ನಾಲ್ಕು ವಿಭಾಗಗಳಾಗಿ ಪರಿವರ್ತಿಸಿರುವುದು ಕಾರ್ಮಿಕರ ವಿರೋಧಿ ನೀತಿಯಾಗಿದೆ. ಹಳೆಯ ಕಾನೂನುಗಳನ್ನು ಹಾಗೆಯೇ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮಹಾತ್ಮ ಗಾಂಧಿ ವೃತ್ತದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾರ್ಮಿಕರ ನಾಲ್ಕು ಕಾನೂನು ವಿಭಾಗಗಳ ಪ್ರತಿಗಳಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.</p>.<p>ಸಿ.ಐ.ಟಿ.ಯು ಜಿಲ್ಲಾ ಸಹ ಕಾರ್ಯದರ್ಶಿ ಬಿ. ಸುರೇಶ, ಜಿಲ್ಲಾ ಖಜಾಂಚಿ ಬಿ. ಉಮಾದೇವಿ, ತಾಲ್ಲೂಕು ಸಂಚಾಲಕರಾದ ಎಚ್.ಬಿ. ಓಬಳೇಶಪ್ಪ, ಎಂ. ಲಕ್ಷ್ಮಣ, ಎಂ.ಹುಲೆಪ್ಪ, ಲತೀಫ್ ಖಾಜ, ಆರ್. ಮಲ್ಲಯ್ಯ ರಮೇಶ, ಖಾಜಾ ಬೀ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ಕೇಂದ್ರ ಸರ್ಕಾರದ ಕಾನೂನು ನೀತಿಯನ್ನು ವಿರೋಧಿಸಿ ನಗರದ ಸಿ.ಐ.ಟಿ.ಯು ತಾಲ್ಲೂಕು ಸಮಿತಿ ವತಿಯಿಂದ ಮಹಾತ್ಮ ಗಾಂಧಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.</p>.<p>ಸಿ.ಐ.ಟಿ.ಯು ಜಿಲ್ಲಾ ಘಟಕದ ಉಪಾಧ್ಯಕ್ಷ ಎಚ್. ತಿಪ್ಪಯ್ಯ ಮಾತನಾಡಿ, ‘ಕೇಂದ್ರ ಸರ್ಕಾರವು ಈ ಹಿಂದೆ ಇದ್ದ 44 ಕಾರ್ಮಿಕ ಕಾನೂನುಗಳನ್ನು ನಾಲ್ಕು ವಿಭಾಗಗಳಾಗಿ ಪರಿವರ್ತಿಸಿರುವುದು ಕಾರ್ಮಿಕರ ವಿರೋಧಿ ನೀತಿಯಾಗಿದೆ. ಹಳೆಯ ಕಾನೂನುಗಳನ್ನು ಹಾಗೆಯೇ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಮಹಾತ್ಮ ಗಾಂಧಿ ವೃತ್ತದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾರ್ಮಿಕರ ನಾಲ್ಕು ಕಾನೂನು ವಿಭಾಗಗಳ ಪ್ರತಿಗಳಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.</p>.<p>ಸಿ.ಐ.ಟಿ.ಯು ಜಿಲ್ಲಾ ಸಹ ಕಾರ್ಯದರ್ಶಿ ಬಿ. ಸುರೇಶ, ಜಿಲ್ಲಾ ಖಜಾಂಚಿ ಬಿ. ಉಮಾದೇವಿ, ತಾಲ್ಲೂಕು ಸಂಚಾಲಕರಾದ ಎಚ್.ಬಿ. ಓಬಳೇಶಪ್ಪ, ಎಂ. ಲಕ್ಷ್ಮಣ, ಎಂ.ಹುಲೆಪ್ಪ, ಲತೀಫ್ ಖಾಜ, ಆರ್. ಮಲ್ಲಯ್ಯ ರಮೇಶ, ಖಾಜಾ ಬೀ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>