<p class="rtejustify"><strong>ಕುರುಗೋಡು: </strong>ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ಖಂಡಿಸಿ ಸಿಪಿಎಂ ತಾಲ್ಲೂಕು ಘಟಕದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p class="rtejustify">ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ವಿ.ಎಸ್. ಶಿವಶಂಕರ್ ಮಾತನಾಡಿ, ‘ಚುನಾವಣೆ ಪೂರ್ವದಲ್ಲಿ ಜನಸಾಮಾನ್ಯರಿಗೆ ಕೈಗೆಟುಕುವ ರೀತಿಯಲ್ಲಿ ಅಗತ್ಯ ವಸ್ತುಗಳ ದರ ನಿಗದಿ ಮಾಡುವುದಾಗಿ ಅಧಿಕಾರಕ್ಕೆ ಬಂದ ಬಿಜೆಪಿಯ ನಿಜ ಬಣ್ಣಈಗ ಬಯಲಾಗಿದೆ’ ಎಂದು ಆರೋಪಿಸಿದರು.</p>.<p class="rtejustify">‘ಬಿತ್ತನೆ ಸಮಯದಲ್ಲಿ ಇಂಧನ ದರ ಏರಿಕೆ ಮಾಡಿರುವುದು ರೈತರಿಗೆ ನುಂಗಲಾರದ ತುತ್ತಾಗಿದೆ. ಕೂಡಲೆ ದರ ನಿಯಂತ್ರಿಸಬೇಕು’ ಎಂದು ಒತ್ತಾಯಿಸಿದರು.</p>.<p class="rtejustify">ಬಾದನಹಟ್ಟಿ ವರದಿ: ತಾಲ್ಲೂಕಿನ ಬಾದನಹಟ್ಟಿ ಸಿಪಿಎಂ ಗ್ರಾಮ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.</p>.<p class="rtejustify">ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಗಾಳಿ ಬಸವರಾಜ, ಎಚ್.ಯಂಕಮ್ಮ, ಎಚ್.ಮಲ್ಲಿಕಾರ್ಜುನ, ಮಮ್ಮದ್, ಹುಲೆಪ್ಪ, ಲಕ್ಷ್ಮಣ, ಚಂದ್ರಪ್ಪ, ಲಿಂಗಪ್ಪ, ಬೆಟ್ಟಪ್ಪ, ಪೊಂಪಣ್ಣ, ಕರಿಬಸಪ್ಪ, ಗುರುಬಸಪ್ಪ, ಮತ್ತು ಹಂಡಿಜೋಗಿ ಹನುಮಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಕುರುಗೋಡು: </strong>ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ಖಂಡಿಸಿ ಸಿಪಿಎಂ ತಾಲ್ಲೂಕು ಘಟಕದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p class="rtejustify">ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ವಿ.ಎಸ್. ಶಿವಶಂಕರ್ ಮಾತನಾಡಿ, ‘ಚುನಾವಣೆ ಪೂರ್ವದಲ್ಲಿ ಜನಸಾಮಾನ್ಯರಿಗೆ ಕೈಗೆಟುಕುವ ರೀತಿಯಲ್ಲಿ ಅಗತ್ಯ ವಸ್ತುಗಳ ದರ ನಿಗದಿ ಮಾಡುವುದಾಗಿ ಅಧಿಕಾರಕ್ಕೆ ಬಂದ ಬಿಜೆಪಿಯ ನಿಜ ಬಣ್ಣಈಗ ಬಯಲಾಗಿದೆ’ ಎಂದು ಆರೋಪಿಸಿದರು.</p>.<p class="rtejustify">‘ಬಿತ್ತನೆ ಸಮಯದಲ್ಲಿ ಇಂಧನ ದರ ಏರಿಕೆ ಮಾಡಿರುವುದು ರೈತರಿಗೆ ನುಂಗಲಾರದ ತುತ್ತಾಗಿದೆ. ಕೂಡಲೆ ದರ ನಿಯಂತ್ರಿಸಬೇಕು’ ಎಂದು ಒತ್ತಾಯಿಸಿದರು.</p>.<p class="rtejustify">ಬಾದನಹಟ್ಟಿ ವರದಿ: ತಾಲ್ಲೂಕಿನ ಬಾದನಹಟ್ಟಿ ಸಿಪಿಎಂ ಗ್ರಾಮ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.</p>.<p class="rtejustify">ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಗಾಳಿ ಬಸವರಾಜ, ಎಚ್.ಯಂಕಮ್ಮ, ಎಚ್.ಮಲ್ಲಿಕಾರ್ಜುನ, ಮಮ್ಮದ್, ಹುಲೆಪ್ಪ, ಲಕ್ಷ್ಮಣ, ಚಂದ್ರಪ್ಪ, ಲಿಂಗಪ್ಪ, ಬೆಟ್ಟಪ್ಪ, ಪೊಂಪಣ್ಣ, ಕರಿಬಸಪ್ಪ, ಗುರುಬಸಪ್ಪ, ಮತ್ತು ಹಂಡಿಜೋಗಿ ಹನುಮಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>