<p><strong>ಬಳ್ಳಾರಿ: </strong>'ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆಯುಳ್ಳ ಬಣಜಿಗ ಸಮುದಾಯದ ಬಡವರಿಗೆ ಮನೆ ಸೌಕರ್ಯ ಕೊಡಬೇಕು’ ಎಂದು ಶಾಸಕ ಅಲ್ಲಂ ವೀರಭದ್ರಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಬಸವಭವನದಲ್ಲಿ ಭಾನುವಾರ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ವ್ಯಾಪಾರ ಚಟುವಟಿಕೆಯನ್ನೇ ನೆಚ್ಚಿಕೊಂಡಿರುವ ಬಣಜಿಗ ಸಮುದಾಯದ ಕ್ಷೇಮಾಭಿವೃದ್ಧಿ ಸಂಘವು ಈ ನಿಟ್ಟಿನಲ್ಲಿ ಪ್ರಯತ್ನವನ್ನು ಆರಂಭಿಸಬೇಕು’ ಎಂದರು.</p>.<p>‘ನಗರದಲ್ಲಿ ಒಂದು ನಿವೇಶನ ಖರೀದಿಗೆ ಹಳ್ಳಿಯಲ್ಲಿ ಒಂದು ಎಕರೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಇಲ್ಲಿ ಜೀವನ ನಡೆಸುವುದು ದುಬಾರಿಯಾಗಿರುವುದರಿಂದ ಗ್ರಾಮಾಂತರ ಪ್ರದೇಶದ ಬಡಜನರಿಗೆ ಮನೆ ಕಟ್ಟಿಕೊಳ್ಳಲು ಸಹಕಾರ ನೀಡಬೇಕು. ಆಗ ಕ್ಷೇಮಾಭಿವೃದ್ಧಿ ಸಂಘದ ಹೆಸರು ಸಾರ್ಥಕವಾಗುತ್ತದೆ’ ಎಂದರು.</p>.<p>ಮುಖಂಡ ಮೃತ್ಯುಂಜಯ ಜಿನಗ ಮಾತನಾಡಿ, ‘ಸಹಕಾರ ಸಂಘದ ಜವಾಬ್ದಾರಿ ಹೊತ್ತವರು ನಿಸ್ವಾರ್ಥ ಕಾರ್ಯ ಮಾಡಿದರೆ ಸಮಾಜದ ಬೆಳವಣಿಗೆಯಾಗುತ್ತದೆ. ಉನ್ನತ ವ್ಯಾಸಂಗಕ್ಕೋಸ್ಕರ ಪರಿತಪಿಸುತ್ತಿರುವ ಬಡ ವಿದ್ಯಾರ್ಥಿಗಳಿಗೆ ಸಹಕಾರ ನೀಡಿ’ ಎಂದು ಹೇಳಿದರು.</p>.<p>ಎಡೆಯೂರು ಸಿದ್ದಲಿಂಗೇಶ್ವರ ಗೃಹ ನಿರ್ಮಾಣ ಸಹಕಾರ ಸಂಘವನ್ನು ಇದೇ ಸಂದರ್ಭದಲ್ಲಿ ಹಾಸನದ ಬಸವಾಪಟ್ಟಣದ ತೋಂಟದಾರ್ಯ ಮಠದ ಬಸವಲಿಂಗ ಶಿವಯೋಗಿ ಸ್ವಾಮಿ ಉದ್ಘಾಟಿಸಿದರು.</p>.<p>ಸಂಡೂರಿನ ವಿರಕ್ತ ಮಠದ ಪ್ರಭುಸ್ವಾಮಿ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಮೃತ್ಯುಂಜಯ ಜಿನಗ, ಮಹಾಂತೇಶ್, ಬಸವರಾಜ್, ನಾಗರಾಜ್, ಕೆ.ಜಗದೀಶ್ ಇದ್ದರು.</p>.<p>ಇದಕ್ಕೂ ಮುನ್ನ ಕನಕದುರ್ಗಮ್ಮ ದೇವಸ್ಥಾನದಿಂದ ನಡೆದ ಬಸವಾದಿ ಶರಣರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯ್ತಿ ಸದಸ್ಯ ಅಲ್ಲಂ ಪ್ರಶಾಂತ್ ಚಾಲನೆ ನೀಡಿದರು.</p>.<p>ಸಂಜೆ ಅಭಿನಯ ಕಲಾಕೇಂದ್ರದವರು ‘ಎಡೆಯೂರು ಸಿದ್ಧಲಿಂಗೇಶ್ವರ; ನಾಟಕವನ್ನು ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>'ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆಯುಳ್ಳ ಬಣಜಿಗ ಸಮುದಾಯದ ಬಡವರಿಗೆ ಮನೆ ಸೌಕರ್ಯ ಕೊಡಬೇಕು’ ಎಂದು ಶಾಸಕ ಅಲ್ಲಂ ವೀರಭದ್ರಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಬಸವಭವನದಲ್ಲಿ ಭಾನುವಾರ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ವ್ಯಾಪಾರ ಚಟುವಟಿಕೆಯನ್ನೇ ನೆಚ್ಚಿಕೊಂಡಿರುವ ಬಣಜಿಗ ಸಮುದಾಯದ ಕ್ಷೇಮಾಭಿವೃದ್ಧಿ ಸಂಘವು ಈ ನಿಟ್ಟಿನಲ್ಲಿ ಪ್ರಯತ್ನವನ್ನು ಆರಂಭಿಸಬೇಕು’ ಎಂದರು.</p>.<p>‘ನಗರದಲ್ಲಿ ಒಂದು ನಿವೇಶನ ಖರೀದಿಗೆ ಹಳ್ಳಿಯಲ್ಲಿ ಒಂದು ಎಕರೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಇಲ್ಲಿ ಜೀವನ ನಡೆಸುವುದು ದುಬಾರಿಯಾಗಿರುವುದರಿಂದ ಗ್ರಾಮಾಂತರ ಪ್ರದೇಶದ ಬಡಜನರಿಗೆ ಮನೆ ಕಟ್ಟಿಕೊಳ್ಳಲು ಸಹಕಾರ ನೀಡಬೇಕು. ಆಗ ಕ್ಷೇಮಾಭಿವೃದ್ಧಿ ಸಂಘದ ಹೆಸರು ಸಾರ್ಥಕವಾಗುತ್ತದೆ’ ಎಂದರು.</p>.<p>ಮುಖಂಡ ಮೃತ್ಯುಂಜಯ ಜಿನಗ ಮಾತನಾಡಿ, ‘ಸಹಕಾರ ಸಂಘದ ಜವಾಬ್ದಾರಿ ಹೊತ್ತವರು ನಿಸ್ವಾರ್ಥ ಕಾರ್ಯ ಮಾಡಿದರೆ ಸಮಾಜದ ಬೆಳವಣಿಗೆಯಾಗುತ್ತದೆ. ಉನ್ನತ ವ್ಯಾಸಂಗಕ್ಕೋಸ್ಕರ ಪರಿತಪಿಸುತ್ತಿರುವ ಬಡ ವಿದ್ಯಾರ್ಥಿಗಳಿಗೆ ಸಹಕಾರ ನೀಡಿ’ ಎಂದು ಹೇಳಿದರು.</p>.<p>ಎಡೆಯೂರು ಸಿದ್ದಲಿಂಗೇಶ್ವರ ಗೃಹ ನಿರ್ಮಾಣ ಸಹಕಾರ ಸಂಘವನ್ನು ಇದೇ ಸಂದರ್ಭದಲ್ಲಿ ಹಾಸನದ ಬಸವಾಪಟ್ಟಣದ ತೋಂಟದಾರ್ಯ ಮಠದ ಬಸವಲಿಂಗ ಶಿವಯೋಗಿ ಸ್ವಾಮಿ ಉದ್ಘಾಟಿಸಿದರು.</p>.<p>ಸಂಡೂರಿನ ವಿರಕ್ತ ಮಠದ ಪ್ರಭುಸ್ವಾಮಿ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಮೃತ್ಯುಂಜಯ ಜಿನಗ, ಮಹಾಂತೇಶ್, ಬಸವರಾಜ್, ನಾಗರಾಜ್, ಕೆ.ಜಗದೀಶ್ ಇದ್ದರು.</p>.<p>ಇದಕ್ಕೂ ಮುನ್ನ ಕನಕದುರ್ಗಮ್ಮ ದೇವಸ್ಥಾನದಿಂದ ನಡೆದ ಬಸವಾದಿ ಶರಣರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯ್ತಿ ಸದಸ್ಯ ಅಲ್ಲಂ ಪ್ರಶಾಂತ್ ಚಾಲನೆ ನೀಡಿದರು.</p>.<p>ಸಂಜೆ ಅಭಿನಯ ಕಲಾಕೇಂದ್ರದವರು ‘ಎಡೆಯೂರು ಸಿದ್ಧಲಿಂಗೇಶ್ವರ; ನಾಟಕವನ್ನು ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>