<p><strong>ಬಳ್ಳಾರಿ: </strong>‘ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಸಕಾಲಕ್ಕೆ ಪಿಂಚಣಿ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಆಗಸ್ಟ್ 23ರಂದು ನಡೆಯಲಿರುವ ಪಿಂಚಣಿ ಅದಾಲತ್ಗೆ ಸಂಬಂಧಿಸಿ ನಗರದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ನಿವೃತ್ತರಾಗುವ ನೌಕರರಿಗೆ ಸಂಬಂಧಿಸಿದ ಪಿಂಚಣಿ ಪ್ರಸ್ತಾವಿತ ದಾಖಲಾತಿಗಳನ್ನು 3 ತಿಂಗಳ ಮುಂಚೆಯೇ ಸಿದ್ಧಪಡಿಸಿ ಪಿಂಚಣಿ ಸಕಾಲದಲ್ಲಿ ಸಿಗುವಂತೆ ಮಾಡಬೇಕು. ಈ ಕುರಿತು ಇಲಾಖೆಗಳಿಗೆ ಸೂಚನೆ ನೀಡಲಾಗುವುದು’ ಎಂದರು.</p>.<p>‘ನಿವೃತ್ತ ನೌಕರರ ಸೇವಾವಹಿಗಳನ್ನು ಸಮರ್ಪಕವಾಗಿ ನಿರ್ವಹಣೆ ನಡೆಯುತ್ತಿಲ್ಲ’ ಎಂಬ ನಿವೃತ್ತ ನೌಕರರ ದೂರಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಿಗೆ ಸೂಚನೆ ನೀಡಲಾಗುವುದು’ ಎಂದರು.</p>.<p>‘ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿವೃತ್ತ ನೌಕರರಿಗೆ ಸಂಬಂಧಿಸಿದ ಪಿಂಚಣಿ ಕಡತಗಳನ್ನು ಸಮರ್ಪಕವಾಗಿ ಕಳುಹಿಸಿಕೊಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕು. ಚೆಕ್ಲಿಸ್ಟ್ ಅನುಸಾರವೇ ಕಳುಹಿಸಿಕೊಡಬೇಕು. ಇತ್ತೀಚೆಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದ್ದು ಅವರ ಸೇವಾವಹಿಗಳನ್ನು ಚಾಲನೆಗೊಳಿಸಿ’ ಎಂದು ಸ್ಪಷ್ಟಪಡಿಸಿದರು.</p>.<p>ಆರೋಗ್ಯ ಸೇವೆ ವಿಸ್ತರಿಸಿ: ‘ಕಾರ್ಯನಿರತ ಸರ್ಕಾರಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಸೇವೆಗಳನ್ನು ನಿವೃತ್ತರಿಗೂ ವಿಸ್ತರಿಸಬೇಕು’ ಎಂದು ಇದೇ ಸಂದರ್ಭದಲ್ಲಿ ನಿವೃತ್ತ ನೌಕರ ವೀರಯ್ಯ ಕೂಡ್ಲಿಗಿ ಮನವಿ ಮಾಡಿದರು.</p>.<p>‘ಬಸ್ ಪ್ರಯಾಣ ಮಾಡುವವರಿಗೆ ಟಿಕೆಟ್ ದರದಲ್ಲಿ ಶೇ.50ರಷ್ಟು ರಿಯಾಯ್ತಿ ಕಲ್ಪಿಸಬೇಕು. ಪಿಂಚಣಿ ಪಡೆಯುವವರಿಗಾಗಿಯೇ ತಿಂಗಳ ಮೊದಲ ವಾರ ಬ್ಯಾಂಕ್ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಬೇಕು. ನಿವೃತ್ತರಿಗಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿವೇಶನ ಒದಗಿಸಬೇಕು’ ಎಂದು ಇದೇ ಸಂದರ್ಭದಲ್ಲಿ ಎಂದು ನೌಕರರು ಮನವಿ ಮಾಡಿದರು.</p>.<p>ಪಿಂಚಣಿಯನ್ನು ಸಕಾಲಕ್ಕೆ ದೊರಕಿಸಲು ಅಗತ್ಯ ಸಹಕಾರ ನೀಡಲಾಗುವುದು’ ಎಂದು ಜಿಲ್ಲಾ ಖಜಾನಾಧಿಕಾರಿ ರವಿ ಹಕಾರಿ ತಿಳಿಸಿದರು. ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಸಹಾಯಕ ನಿರ್ದೇಶಕಿ ಸಾವಿತ್ರಿ, ಪಿಂಚಣಿ ಅದಾಲತ್ ಉದ್ದೇಶಗಳ ಕುರಿತು ವಿವರಿಸಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>‘ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಸಕಾಲಕ್ಕೆ ಪಿಂಚಣಿ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ಆಗಸ್ಟ್ 23ರಂದು ನಡೆಯಲಿರುವ ಪಿಂಚಣಿ ಅದಾಲತ್ಗೆ ಸಂಬಂಧಿಸಿ ನಗರದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ನಿವೃತ್ತರಾಗುವ ನೌಕರರಿಗೆ ಸಂಬಂಧಿಸಿದ ಪಿಂಚಣಿ ಪ್ರಸ್ತಾವಿತ ದಾಖಲಾತಿಗಳನ್ನು 3 ತಿಂಗಳ ಮುಂಚೆಯೇ ಸಿದ್ಧಪಡಿಸಿ ಪಿಂಚಣಿ ಸಕಾಲದಲ್ಲಿ ಸಿಗುವಂತೆ ಮಾಡಬೇಕು. ಈ ಕುರಿತು ಇಲಾಖೆಗಳಿಗೆ ಸೂಚನೆ ನೀಡಲಾಗುವುದು’ ಎಂದರು.</p>.<p>‘ನಿವೃತ್ತ ನೌಕರರ ಸೇವಾವಹಿಗಳನ್ನು ಸಮರ್ಪಕವಾಗಿ ನಿರ್ವಹಣೆ ನಡೆಯುತ್ತಿಲ್ಲ’ ಎಂಬ ನಿವೃತ್ತ ನೌಕರರ ದೂರಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಿಗೆ ಸೂಚನೆ ನೀಡಲಾಗುವುದು’ ಎಂದರು.</p>.<p>‘ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿವೃತ್ತ ನೌಕರರಿಗೆ ಸಂಬಂಧಿಸಿದ ಪಿಂಚಣಿ ಕಡತಗಳನ್ನು ಸಮರ್ಪಕವಾಗಿ ಕಳುಹಿಸಿಕೊಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕು. ಚೆಕ್ಲಿಸ್ಟ್ ಅನುಸಾರವೇ ಕಳುಹಿಸಿಕೊಡಬೇಕು. ಇತ್ತೀಚೆಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದ್ದು ಅವರ ಸೇವಾವಹಿಗಳನ್ನು ಚಾಲನೆಗೊಳಿಸಿ’ ಎಂದು ಸ್ಪಷ್ಟಪಡಿಸಿದರು.</p>.<p>ಆರೋಗ್ಯ ಸೇವೆ ವಿಸ್ತರಿಸಿ: ‘ಕಾರ್ಯನಿರತ ಸರ್ಕಾರಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಸೇವೆಗಳನ್ನು ನಿವೃತ್ತರಿಗೂ ವಿಸ್ತರಿಸಬೇಕು’ ಎಂದು ಇದೇ ಸಂದರ್ಭದಲ್ಲಿ ನಿವೃತ್ತ ನೌಕರ ವೀರಯ್ಯ ಕೂಡ್ಲಿಗಿ ಮನವಿ ಮಾಡಿದರು.</p>.<p>‘ಬಸ್ ಪ್ರಯಾಣ ಮಾಡುವವರಿಗೆ ಟಿಕೆಟ್ ದರದಲ್ಲಿ ಶೇ.50ರಷ್ಟು ರಿಯಾಯ್ತಿ ಕಲ್ಪಿಸಬೇಕು. ಪಿಂಚಣಿ ಪಡೆಯುವವರಿಗಾಗಿಯೇ ತಿಂಗಳ ಮೊದಲ ವಾರ ಬ್ಯಾಂಕ್ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಬೇಕು. ನಿವೃತ್ತರಿಗಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿವೇಶನ ಒದಗಿಸಬೇಕು’ ಎಂದು ಇದೇ ಸಂದರ್ಭದಲ್ಲಿ ಎಂದು ನೌಕರರು ಮನವಿ ಮಾಡಿದರು.</p>.<p>ಪಿಂಚಣಿಯನ್ನು ಸಕಾಲಕ್ಕೆ ದೊರಕಿಸಲು ಅಗತ್ಯ ಸಹಕಾರ ನೀಡಲಾಗುವುದು’ ಎಂದು ಜಿಲ್ಲಾ ಖಜಾನಾಧಿಕಾರಿ ರವಿ ಹಕಾರಿ ತಿಳಿಸಿದರು. ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಸಹಾಯಕ ನಿರ್ದೇಶಕಿ ಸಾವಿತ್ರಿ, ಪಿಂಚಣಿ ಅದಾಲತ್ ಉದ್ದೇಶಗಳ ಕುರಿತು ವಿವರಿಸಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>