<figcaption>""</figcaption>.<p><strong>ಹೊಸಪೇಟೆ:</strong> ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ವಿಷಯ ತಿಳಿದು, ಅದರಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ರೈಲಿನಡಿ ಜಿಗಿದು ಮಂಗಳವಾರ ಪ್ರಾಣ ತ್ಯಜಿಸಿದ್ದಾಳೆ. ಗೆಳತಿಯನ್ನು ರಕ್ಷಿಸಲು ಹೋಗಿದ್ದ ಇನ್ನೊಬ್ಬ ಯುವತಿಗೂ ಗಾಯಗಳಾಗಿವೆ.</p>.<figcaption>ಶ್ರೇಯಾ ಎಸ್. ಕದಂ</figcaption>.<p>ನಗರದ ಕೆ.ಎಸ್.ಪಿ.ಎಲ್. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಶ್ರೇಯಾ ಎಸ್. ಕದಂ (18) ಆತ್ಮಹತ್ಯೆಗೆ ಶರಣಾದವರು. ರೂಪ ಮೇಟಿ (18) ಗಾಯಗೊಂಡವರು. ಶ್ರೇಯಾ ಮೂಲತಃ ಭದ್ರಾವತಿಯವರು, ಇಲ್ಲಿನ ಈಶ್ವರ ನಗರದಲ್ಲಿ ವಾಸವಾಗಿದ್ದರು. ಅವರ ತಂದೆ ಜೆ.ಎಸ್.ಡಬ್ಲ್ಯೂ ಉದ್ಯೋಗಿ. ರೂಪ ಅವರು ಹಳೆ ಮೇದಾರ ರಸ್ತೆ ನಿವಾಸಿ.</p>.<p>ರೈಲಿನಡಿ ಜಿಗಿದಿದ್ದ ಶ್ರೇಯಾ ಅವರ ಕೈ ಬೆರಳು ತುಂಡಾಗಿ. ತಲೆ ಹಾಗೂ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅವರಿಗೆ ನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಂಬುಲೆನ್ಸ್ನಲ್ಲಿ ಬಳ್ಳಾರಿಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಸಂಜೆ ಮೃತಪಟ್ಟಿದ್ದಾರೆ. ರೂಪ ಅವರ ಸೊಂಟ ಸೇರಿದಂತೆ ದೇಹದ ಬೇರೆ ಬೇರೆ ಭಾಗಗಳಿಗೆ ಬಲವಾದ ಒಳಪೆಟ್ಟುಗಳಾಗಿವೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ವಿದ್ಯಾರ್ಥಿನಿಯರು ಬೆಳಿಗ್ಗೆ ವೆಬ್ಸೈಟಿನಲ್ಲಿ ಫಲಿತಾಂಶ ನೋಡಿದ್ದಾರೆ. ಶ್ರೇಯಾ 187 ಅಂಕ ಪಡೆದು ಫೇಲಾಗಿದ್ದಾರೆ. ರೂಪ 383 ಅಂಕ ಗಳಿಸಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಅನುತ್ತೀರ್ಣಗೊಂಡ ಶ್ರೇಯಾ ತೀವ್ರ ಮನನೊಂದು ನಗರ ಹೊರವಲಯದ ಅನಂತಶಯನಗುಡಿ ಬಳಿಯಿರುವ ರೈಲ್ವೆ ಹಳಿಗೆ ಹೋಗಿದ್ದಾರೆ. ಜತೆಗಿದ್ದ ರೂಪ ಎಷ್ಟೇ ಮನವೊಲಿಸಿದರೂ ಅಲ್ಲಿಂದ ಕದಲಿಲ್ಲ. ಈ ವೇಳೆ ನಗರದಿಂದ ಜೆ.ಎಸ್.ಡಬ್ಲ್ಯೂ ಕಡೆಗೆ ಹೋಗುತ್ತಿದ್ದ ಸರಕು ಸಾಗಣೆ ರೈಲಿನಡಿ ಶ್ರೇಯಾ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದರು. ಶ್ರೇಯಾರನ್ನು ರಕ್ಷಿಸಲು ಹೋಗಿದ್ದ ರೂಪ ಅವರಿಗೂ ಗಾಯಗಳಾಗಿವೆ. ಇಬ್ಬರು ಗಾಯಗೊಂಡು ಕಿರುಚುತ್ತಿರುವ ಶಬ್ದ ಕೇಳಿ ಸ್ಥಳೀಯರು ದೌಡಾಯಿಸಿದ್ದಾರೆ. ಬಳಿಕ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಸಂಜೆ ಶ್ರೇಯಾ ಆಸ್ಪತ್ರೆಯಲ್ಲಿ ಜೀವ ಬಿಟ್ಟಿದ್ದಾರೆ’ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.</p>.<p>ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಹೊಸಪೇಟೆ:</strong> ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ವಿಷಯ ತಿಳಿದು, ಅದರಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ರೈಲಿನಡಿ ಜಿಗಿದು ಮಂಗಳವಾರ ಪ್ರಾಣ ತ್ಯಜಿಸಿದ್ದಾಳೆ. ಗೆಳತಿಯನ್ನು ರಕ್ಷಿಸಲು ಹೋಗಿದ್ದ ಇನ್ನೊಬ್ಬ ಯುವತಿಗೂ ಗಾಯಗಳಾಗಿವೆ.</p>.<figcaption>ಶ್ರೇಯಾ ಎಸ್. ಕದಂ</figcaption>.<p>ನಗರದ ಕೆ.ಎಸ್.ಪಿ.ಎಲ್. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಶ್ರೇಯಾ ಎಸ್. ಕದಂ (18) ಆತ್ಮಹತ್ಯೆಗೆ ಶರಣಾದವರು. ರೂಪ ಮೇಟಿ (18) ಗಾಯಗೊಂಡವರು. ಶ್ರೇಯಾ ಮೂಲತಃ ಭದ್ರಾವತಿಯವರು, ಇಲ್ಲಿನ ಈಶ್ವರ ನಗರದಲ್ಲಿ ವಾಸವಾಗಿದ್ದರು. ಅವರ ತಂದೆ ಜೆ.ಎಸ್.ಡಬ್ಲ್ಯೂ ಉದ್ಯೋಗಿ. ರೂಪ ಅವರು ಹಳೆ ಮೇದಾರ ರಸ್ತೆ ನಿವಾಸಿ.</p>.<p>ರೈಲಿನಡಿ ಜಿಗಿದಿದ್ದ ಶ್ರೇಯಾ ಅವರ ಕೈ ಬೆರಳು ತುಂಡಾಗಿ. ತಲೆ ಹಾಗೂ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅವರಿಗೆ ನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಂಬುಲೆನ್ಸ್ನಲ್ಲಿ ಬಳ್ಳಾರಿಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಸಂಜೆ ಮೃತಪಟ್ಟಿದ್ದಾರೆ. ರೂಪ ಅವರ ಸೊಂಟ ಸೇರಿದಂತೆ ದೇಹದ ಬೇರೆ ಬೇರೆ ಭಾಗಗಳಿಗೆ ಬಲವಾದ ಒಳಪೆಟ್ಟುಗಳಾಗಿವೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ವಿದ್ಯಾರ್ಥಿನಿಯರು ಬೆಳಿಗ್ಗೆ ವೆಬ್ಸೈಟಿನಲ್ಲಿ ಫಲಿತಾಂಶ ನೋಡಿದ್ದಾರೆ. ಶ್ರೇಯಾ 187 ಅಂಕ ಪಡೆದು ಫೇಲಾಗಿದ್ದಾರೆ. ರೂಪ 383 ಅಂಕ ಗಳಿಸಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಅನುತ್ತೀರ್ಣಗೊಂಡ ಶ್ರೇಯಾ ತೀವ್ರ ಮನನೊಂದು ನಗರ ಹೊರವಲಯದ ಅನಂತಶಯನಗುಡಿ ಬಳಿಯಿರುವ ರೈಲ್ವೆ ಹಳಿಗೆ ಹೋಗಿದ್ದಾರೆ. ಜತೆಗಿದ್ದ ರೂಪ ಎಷ್ಟೇ ಮನವೊಲಿಸಿದರೂ ಅಲ್ಲಿಂದ ಕದಲಿಲ್ಲ. ಈ ವೇಳೆ ನಗರದಿಂದ ಜೆ.ಎಸ್.ಡಬ್ಲ್ಯೂ ಕಡೆಗೆ ಹೋಗುತ್ತಿದ್ದ ಸರಕು ಸಾಗಣೆ ರೈಲಿನಡಿ ಶ್ರೇಯಾ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದರು. ಶ್ರೇಯಾರನ್ನು ರಕ್ಷಿಸಲು ಹೋಗಿದ್ದ ರೂಪ ಅವರಿಗೂ ಗಾಯಗಳಾಗಿವೆ. ಇಬ್ಬರು ಗಾಯಗೊಂಡು ಕಿರುಚುತ್ತಿರುವ ಶಬ್ದ ಕೇಳಿ ಸ್ಥಳೀಯರು ದೌಡಾಯಿಸಿದ್ದಾರೆ. ಬಳಿಕ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಸಂಜೆ ಶ್ರೇಯಾ ಆಸ್ಪತ್ರೆಯಲ್ಲಿ ಜೀವ ಬಿಟ್ಟಿದ್ದಾರೆ’ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.</p>.<p>ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>