<p><strong>ಬಳ್ಳಾರಿ: 2</strong>024-25ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.</p>.<p>ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ ಫೋರ್ಸ್ ಸಮಿತಿ ತೀರ್ಮಾನಿಸಿದ್ದು, 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ‘ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ’ ನಿರ್ವಹಿಸಲಿದೆ.</p>.<p>ಹೈಬ್ರಿಡ್ ಜೋಳಕ್ಕೆ ₹3,371 ಮತ್ತು ಮಾಲ್ದಂಡಿ ಜೋಳಕ್ಕೆ ₹3,421 ನಿಗದಿ ಮಾಡಲಾಗಿದೆ. ನೋಂದಣಿ ಈಗಾಗಲೇ ಪ್ರಾರಂಭಗೊಂಡಿದ್ದು, ಮೇ 31ರ ವರೆಗೆ ಖರೀದಿಸಲಾಗುತ್ತದೆ. </p>.<p>ಖರೀದಿ ಕೇಂದ್ರಗಳು: ಬಳ್ಳಾರಿ ತಾಲ್ಲೂಕಿನ ಎಪಿಎಂಸಿ ಆವರಣ ಮತ್ತು ರೂಪನಗುಡಿ, ಸಿರುಗುಪ್ಪ ತಾಲ್ಲೂಕಿನ ಸಿರುಗುಪ್ಪ ಪಟ್ಟಣ, ಕರೂರು, ಉಪ್ಪಾರ ಹೊಸಳ್ಳಿ, ತಾಳೂರು ಮತ್ತು ಹಚ್ಚೋಳ್ಳಿ. ಕಂಪ್ಲಿ ತಾಲ್ಲೂಕಿನ ಕಂಪ್ಲಿ ಪಟ್ಟಣ, ಎಮ್ಮಿಗನೂರು. ಕುರುಗೋಡು ಮತ್ತು ಸಂಡೂರು ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. </p>.<p>ಪ್ರತಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಮೀರದಂತೆ ಜೋಳ ಖರೀದಿಸಲಾಗುತ್ತದೆ. </p>.<p>ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ, ಬಳ್ಳಾರಿ ಅಥವಾ ಸೈಯದ್ ವಸೀಮ್ ಪಾಷ (ಮೊ.9449864453) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಸಕೀನಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: 2</strong>024-25ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.</p>.<p>ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ ಫೋರ್ಸ್ ಸಮಿತಿ ತೀರ್ಮಾನಿಸಿದ್ದು, 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ‘ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ’ ನಿರ್ವಹಿಸಲಿದೆ.</p>.<p>ಹೈಬ್ರಿಡ್ ಜೋಳಕ್ಕೆ ₹3,371 ಮತ್ತು ಮಾಲ್ದಂಡಿ ಜೋಳಕ್ಕೆ ₹3,421 ನಿಗದಿ ಮಾಡಲಾಗಿದೆ. ನೋಂದಣಿ ಈಗಾಗಲೇ ಪ್ರಾರಂಭಗೊಂಡಿದ್ದು, ಮೇ 31ರ ವರೆಗೆ ಖರೀದಿಸಲಾಗುತ್ತದೆ. </p>.<p>ಖರೀದಿ ಕೇಂದ್ರಗಳು: ಬಳ್ಳಾರಿ ತಾಲ್ಲೂಕಿನ ಎಪಿಎಂಸಿ ಆವರಣ ಮತ್ತು ರೂಪನಗುಡಿ, ಸಿರುಗುಪ್ಪ ತಾಲ್ಲೂಕಿನ ಸಿರುಗುಪ್ಪ ಪಟ್ಟಣ, ಕರೂರು, ಉಪ್ಪಾರ ಹೊಸಳ್ಳಿ, ತಾಳೂರು ಮತ್ತು ಹಚ್ಚೋಳ್ಳಿ. ಕಂಪ್ಲಿ ತಾಲ್ಲೂಕಿನ ಕಂಪ್ಲಿ ಪಟ್ಟಣ, ಎಮ್ಮಿಗನೂರು. ಕುರುಗೋಡು ಮತ್ತು ಸಂಡೂರು ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ. </p>.<p>ಪ್ರತಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಮೀರದಂತೆ ಜೋಳ ಖರೀದಿಸಲಾಗುತ್ತದೆ. </p>.<p>ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ, ಬಳ್ಳಾರಿ ಅಥವಾ ಸೈಯದ್ ವಸೀಮ್ ಪಾಷ (ಮೊ.9449864453) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಸಕೀನಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>