<p><strong>ಬಳ್ಳಾರಿ:</strong>ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಿ.ಕಾಂ ಪದವಿಯ 6ನೇ ಸೆಮಿಸ್ಟರ್ನ ‘ಮ್ಯಾನೇಜ್ಮೆಂಟ್ ಅಕೌಂಟಿಂಗ್’ ಪ್ರಶ್ನೆ ಪತ್ರಿಕೆ ಸೋರಿಕೆಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಮಂಡಳಿ ಅಧ್ಯಕ್ಷರು ಹಾಗೂ ಐವರು ಸದಸ್ಯರಿಗೆ ತಲಾ ₹ 1 ಲಕ್ಷ ದಂಡ ವಿಧಿಸಲಾಗಿದೆ.</p>.<p>ಹಗರಣದ ವಿಚಾರಣೆ ನಡೆಸಿದ್ದ ಸಿಂಡಿಕೇಟ್ ಸದಸ್ಯರಾದ ಪದ್ಮಾ ವಿಠಲ್ ನೇತೃತ್ವದ ಉಪ ಸಮಿತಿ ವರದಿಯನ್ನು ಸಿಂಡಿಕೇಟ್ ಸಭೆ ಅಂಗೀಕರಿಸಿದೆ. ಪರೀಕ್ಷಾ ಮಂಡಳಿ ಅಧ್ಯಕ್ಷ ಹಾಗೂ ಸದಸ್ಯರನ್ನು ಕಪ್ಪುಪಟ್ಟಿಗೆ ಸೇರಿಸಿದ್ದು, ತಲಾ ₹ 1 ಲಕ್ಷ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಿಂಗಳ ಗಡುವು ನೀಡಿ ನೋಟಿಸ್ ನೀಡಿದ್ದು, ಗಡುವು ಮುಗಿದಿದೆ ಎಂದು ವಿ.ವಿ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p>‘ಪರೀಕ್ಷಾ ಮಂಡಳಿ ಸದಸ್ಯರಾಗಿದ್ದ ಸಿರುಗುಪ್ಪ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಸವರಾಜ ಅವರಿಗೆ ದಂಡದಿಂದ ವಿನಾಯಿತಿ ನೀಡಲಾಗಿದೆ. ಪುತ್ರ ಬಿ.ಕಾಂ, ಪರೀಕ್ಷೆ ಬರೆಯುತ್ತಿದ್ದು, ಮಂಡಳಿ ಸದಸ್ಯರಾಗಿ ಮುಂದುವರಿಯುವುದು ಸರಿಯಲ್ಲ’ ಎಂದು ಅವರು ವಿ.ವಿಗೆಪತ್ರ ಬರೆದಿದ್ದಾಗಿ ಮೂಲಗಳು ಸ್ಪಷ್ಟಪಡಿಸಿವೆ.</p>.<p>ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವಾಣಿಜ್ಯಶಾಸ್ತ್ರ ವಿಭಾಗದ ಮೂರು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈ ಪರೀಕ್ಷೆಗಳನ್ನು ನಡೆಸಲು ಮಾಡಿದ್ದ ಒಟ್ಟಾರೆ ವೆಚ್ಚವನ್ನು ಪರೀಕ್ಷಾ ಮಂಡಳಿ ಅಧ್ಯಕ್ಷರು, ಸದಸ್ಯರಿಂದ ವಸೂಲು ಮಾಡಲು ಉಪ ಸಮಿತಿ ಶಿಫಾರಸು ಮಾಡಿತ್ತು. ಪರೀಕ್ಷೆ ಒಟ್ಟಾರೆ ವೆಚ್ಚ ಲೆಕ್ಕಹಾಕಿ ತಲಾ ₹ 1 ಲಕ್ಷ ದಂಡ ಹಾಕಲಾಗಿದೆ. </p>.<p>‘ಯಾವ ಹಂತದಲ್ಲಿ ಮತ್ತು ಹೇಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ’ ಎಂಬುದನ್ನು ಪತ್ತೆ ಹಚ್ಚಲು ಸೈಬರ್ ಕ್ರೈಂಪೊಲೀಸರಿಗೆ ದೂರು ಕೊಡುವುದಕ್ಕೂ ಸಿಂಡಿಕೇಟ್ ಅನುಮೋದನೆ ನೀಡಿತ್ತು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮ್ಯಾನೇಜ್ಮೆಂಟ್ ಅಕೌಂಟಿಂಗ್ ಜತೆ ಉಳಿದೆರಡು ವಿಷಯಗಳ ಮರು ಪರೀಕ್ಷೆ ನಡೆಸಲಾಗಿತ್ತು.</p>.<p>ಸಿಂಡಿಕೇಟ್ ಸದಸ್ಯರಾದ ಜಯಪ್ರಕಾಶ್, ಮರ್ಚೇಡ್ ಮಲ್ಲಿಕಾರ್ಜುನಗೌಡ, ನರಸಿಂಹ ರಾಯಚೂರು, ಎಂಬಿಎ ವಿಭಾಗದ ಚೇರ್ಮನ್ ಭೀಮನಗೌಡ ಹಾಗೂ ವಿವಿ ಸಹಾಯಕ ರಿಜಿಸ್ಟ್ರಾರ್ ತಿಪ್ಪೇಸ್ವಾಮಿ ಅವರನ್ನೊಳಗೊಂಡ ಉಪ ಸಮಿತಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಕುರಿತು ವಿಚಾರಣೆ ನಡೆಸಿ ವರದಿಸಲ್ಲಿಸಿತ್ತು.</p>.<p><strong>ಕಾಲೇಜು ಶಿಕ್ಷಣ ಆಯುಕ್ತರಿಗೂ ಪತ್ರ</strong></p>.<p>‘ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ಮೂಲಕ ಪರೀಕ್ಷಾ ಮಂಡಳಿ ಅಧ್ಯಕ್ಷರು, ಸದಸ್ಯರು ಅಕ್ಷಮ್ಯ ಅಪರಾಧ ಎಸಗಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೂ ಪತ್ರ ಬರೆಯಲಾಗಿದೆ.</p>.<p>ಇನ್ನು ಮುಂದೆ ಇಂಥ ಪ್ರಕರಣಗಳು ಮರುಕಳಿಸಿದಂತೆ, ಪ್ರಶ್ನೆಪತ್ರಿಕೆ ಸಿದ್ಧತೆ ಹಾಗೂ ಗೌಪ್ಯತೆ ಕಾಪಾಡುವ ಉದ್ದೇಶದಿಂದ ನಿಯಮಾವಳಿ ರೂಪಿಸಲು ಸಮಿತಿ ರಚಿಸುವಂತೆಯೂ ಸಿಂಡಿಕೇಟ್ ಉಪ ಸಮಿತಿ ಶಿಫಾರಸು ಮಾಡಿದೆ. ಆದರೆ, ಇನ್ನೂ ಸಮಿತಿ ರಚನೆಯಾಗಿಲ್ಲ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong>ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಿ.ಕಾಂ ಪದವಿಯ 6ನೇ ಸೆಮಿಸ್ಟರ್ನ ‘ಮ್ಯಾನೇಜ್ಮೆಂಟ್ ಅಕೌಂಟಿಂಗ್’ ಪ್ರಶ್ನೆ ಪತ್ರಿಕೆ ಸೋರಿಕೆಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಮಂಡಳಿ ಅಧ್ಯಕ್ಷರು ಹಾಗೂ ಐವರು ಸದಸ್ಯರಿಗೆ ತಲಾ ₹ 1 ಲಕ್ಷ ದಂಡ ವಿಧಿಸಲಾಗಿದೆ.</p>.<p>ಹಗರಣದ ವಿಚಾರಣೆ ನಡೆಸಿದ್ದ ಸಿಂಡಿಕೇಟ್ ಸದಸ್ಯರಾದ ಪದ್ಮಾ ವಿಠಲ್ ನೇತೃತ್ವದ ಉಪ ಸಮಿತಿ ವರದಿಯನ್ನು ಸಿಂಡಿಕೇಟ್ ಸಭೆ ಅಂಗೀಕರಿಸಿದೆ. ಪರೀಕ್ಷಾ ಮಂಡಳಿ ಅಧ್ಯಕ್ಷ ಹಾಗೂ ಸದಸ್ಯರನ್ನು ಕಪ್ಪುಪಟ್ಟಿಗೆ ಸೇರಿಸಿದ್ದು, ತಲಾ ₹ 1 ಲಕ್ಷ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಿಂಗಳ ಗಡುವು ನೀಡಿ ನೋಟಿಸ್ ನೀಡಿದ್ದು, ಗಡುವು ಮುಗಿದಿದೆ ಎಂದು ವಿ.ವಿ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p>‘ಪರೀಕ್ಷಾ ಮಂಡಳಿ ಸದಸ್ಯರಾಗಿದ್ದ ಸಿರುಗುಪ್ಪ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಸವರಾಜ ಅವರಿಗೆ ದಂಡದಿಂದ ವಿನಾಯಿತಿ ನೀಡಲಾಗಿದೆ. ಪುತ್ರ ಬಿ.ಕಾಂ, ಪರೀಕ್ಷೆ ಬರೆಯುತ್ತಿದ್ದು, ಮಂಡಳಿ ಸದಸ್ಯರಾಗಿ ಮುಂದುವರಿಯುವುದು ಸರಿಯಲ್ಲ’ ಎಂದು ಅವರು ವಿ.ವಿಗೆಪತ್ರ ಬರೆದಿದ್ದಾಗಿ ಮೂಲಗಳು ಸ್ಪಷ್ಟಪಡಿಸಿವೆ.</p>.<p>ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವಾಣಿಜ್ಯಶಾಸ್ತ್ರ ವಿಭಾಗದ ಮೂರು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಈ ಪರೀಕ್ಷೆಗಳನ್ನು ನಡೆಸಲು ಮಾಡಿದ್ದ ಒಟ್ಟಾರೆ ವೆಚ್ಚವನ್ನು ಪರೀಕ್ಷಾ ಮಂಡಳಿ ಅಧ್ಯಕ್ಷರು, ಸದಸ್ಯರಿಂದ ವಸೂಲು ಮಾಡಲು ಉಪ ಸಮಿತಿ ಶಿಫಾರಸು ಮಾಡಿತ್ತು. ಪರೀಕ್ಷೆ ಒಟ್ಟಾರೆ ವೆಚ್ಚ ಲೆಕ್ಕಹಾಕಿ ತಲಾ ₹ 1 ಲಕ್ಷ ದಂಡ ಹಾಕಲಾಗಿದೆ. </p>.<p>‘ಯಾವ ಹಂತದಲ್ಲಿ ಮತ್ತು ಹೇಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ’ ಎಂಬುದನ್ನು ಪತ್ತೆ ಹಚ್ಚಲು ಸೈಬರ್ ಕ್ರೈಂಪೊಲೀಸರಿಗೆ ದೂರು ಕೊಡುವುದಕ್ಕೂ ಸಿಂಡಿಕೇಟ್ ಅನುಮೋದನೆ ನೀಡಿತ್ತು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮ್ಯಾನೇಜ್ಮೆಂಟ್ ಅಕೌಂಟಿಂಗ್ ಜತೆ ಉಳಿದೆರಡು ವಿಷಯಗಳ ಮರು ಪರೀಕ್ಷೆ ನಡೆಸಲಾಗಿತ್ತು.</p>.<p>ಸಿಂಡಿಕೇಟ್ ಸದಸ್ಯರಾದ ಜಯಪ್ರಕಾಶ್, ಮರ್ಚೇಡ್ ಮಲ್ಲಿಕಾರ್ಜುನಗೌಡ, ನರಸಿಂಹ ರಾಯಚೂರು, ಎಂಬಿಎ ವಿಭಾಗದ ಚೇರ್ಮನ್ ಭೀಮನಗೌಡ ಹಾಗೂ ವಿವಿ ಸಹಾಯಕ ರಿಜಿಸ್ಟ್ರಾರ್ ತಿಪ್ಪೇಸ್ವಾಮಿ ಅವರನ್ನೊಳಗೊಂಡ ಉಪ ಸಮಿತಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಕುರಿತು ವಿಚಾರಣೆ ನಡೆಸಿ ವರದಿಸಲ್ಲಿಸಿತ್ತು.</p>.<p><strong>ಕಾಲೇಜು ಶಿಕ್ಷಣ ಆಯುಕ್ತರಿಗೂ ಪತ್ರ</strong></p>.<p>‘ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ಮೂಲಕ ಪರೀಕ್ಷಾ ಮಂಡಳಿ ಅಧ್ಯಕ್ಷರು, ಸದಸ್ಯರು ಅಕ್ಷಮ್ಯ ಅಪರಾಧ ಎಸಗಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೂ ಪತ್ರ ಬರೆಯಲಾಗಿದೆ.</p>.<p>ಇನ್ನು ಮುಂದೆ ಇಂಥ ಪ್ರಕರಣಗಳು ಮರುಕಳಿಸಿದಂತೆ, ಪ್ರಶ್ನೆಪತ್ರಿಕೆ ಸಿದ್ಧತೆ ಹಾಗೂ ಗೌಪ್ಯತೆ ಕಾಪಾಡುವ ಉದ್ದೇಶದಿಂದ ನಿಯಮಾವಳಿ ರೂಪಿಸಲು ಸಮಿತಿ ರಚಿಸುವಂತೆಯೂ ಸಿಂಡಿಕೇಟ್ ಉಪ ಸಮಿತಿ ಶಿಫಾರಸು ಮಾಡಿದೆ. ಆದರೆ, ಇನ್ನೂ ಸಮಿತಿ ರಚನೆಯಾಗಿಲ್ಲ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>