<p><strong>ಸಿರುಗುಪ್ಪ</strong>: ತಾಲ್ಲೂಕಿನ ರಾರಾವಿ ಗ್ರಾಮದ ವ್ಯಾಪ್ತಿಯಲ್ಲಿ ಕಸದ ರಾಶಿಗಳು ಹೆಚ್ಚಾಗಿದ್ದು, ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯ, ಸ್ವಚ್ಛತಾ ಸಿಬ್ಬಂದಿ ಮತ್ತು ಕಸ ವಿಲೇವಾರಿ ಘಟಕಗಳ ಕೊರತೆಯಿಂದಾಗಿ ಈ ಸಮಸ್ಯೆ ಜಟಿಲವಾಗಿದೆ.</p>.<p>ರಸ್ತೆ ಬದಿಗಳಲ್ಲಿ ಕಸ ಸುರಿಯುತ್ತಿರುವುದರಿಂದ ಕಸದ ರಾಶಿ ಕೊಳೆತು ಗಬ್ಬೆದ್ದು ನಾರುತ್ತಿದೆ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಹಂದಿಗಳ ಹಾವಳಿಯಿಂದ ಸಾಂಕ್ರಾಮಿಕ ರೋಗಗಳ ಹರಡುವ ಭೀತಿಯಲ್ಲಿ ಗ್ರಾಮಸ್ಥರು ದಿನ ಕಳೆಯುತ್ತಿದ್ದಾರೆ.</p>.<p>ಈ ರಸ್ತೆಯ ಪಕ್ಕದಲ್ಲಿಯೇ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಇದೆ. ಗ್ರಾಮ ಪಂಚಾಯತಿ ಆಡಳಿತ ಈ ರಸ್ತೆಯ ಸ್ವಚ್ಛತೆ ಮುಂದಾಗದಿದ್ದರಿಂದ ಕಸ ಸೇರಿ ಅಲ್ಲಿಯೇ ಮಹಿಳೆಯರು ಸೇರಿದಂತೆ ಪುರುಷರು ಸಹ ರಾತ್ರಿ ಸಮಯದಲ್ಲಿ ಮಲ-ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದಾಗಿ ದುರ್ವಾಸನೆಯಲ್ಲಿ ನಿತ್ಯ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಅಸ್ವಚ್ಛತೆ, ಕಸದ ರಾಶಿಯಿಂದಾಗಿ ಹಂದಿಗಳ ಹಾವಳಿ ವಿಪರೀತವಾಗಿದೆ. ಸದಾ ಅಲ್ಲಿಯೇ ಹಂದಿಗಳು ವಾಸವಾಗಿದ್ದರಿಂದ ಮತ್ತಷ್ಟು ಗಲೀಜು ಉಂಟಾಗಿ ಮೂಗು ಮುಚ್ಚಿಕೊಂಡು ಸಂಚರಿಸುವಂತಾಗಿದೆ. ಪಕ್ಕದಲ್ಲಿರುವ ಶಾಲೆಯ ಮಕ್ಕಳು ಸಾಂಕ್ರಾಮಿಕ ರೋಗಗಳ ಭೀತಿಗೆ ಒಳಗಾಗುವಂತಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.</p>.<p>ಈ ರಸ್ತೆಯನ್ನು ಸ್ವಚ್ಛಗೊಳಿಸಿ ಅಲ್ಲಿ ಮಲ-ಮೂತ್ರ ವಿಸರ್ಜನೆ ಮಾಡದಂತೆ ಹಾಗೂ ಕಸ ಹಾಕದಂತೆ ಸೂಕ್ತ ಕ್ರಮಕೈಗೊಳ್ಳಲು ಇತ್ತ ಗಮನಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.</p>.<p><strong>ತಕ್ಷಣ ಕಸ ತೆರವುಗೊಳಿಸಿ</strong></p><p> ‘ಹುತ್ತಿನ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಹಲವಾರು ತಿಂಗಳಿಂದ ಅಸ್ವಚ್ಛತೆ ಮಲ-ಮೂತ್ರ ವಿಸರ್ಜನೆ ಮಾಡುವುದರಿಂದ ಆ ರಸ್ತೆ ಮೂಲಕ ಸಂಚರಿಸುವುದು ಕಷ್ಟವಾಗಿದ್ದಲ್ಲದೇ ಸುತ್ತಮುತ್ತಲಿನ ಜನ ಹಾಗೂ ಶಾಲಾ ವಿದ್ಯಾರ್ಥಿಗಳು ದುರ್ನಾತದಲ್ಲಿ ಬದುಕಬೇಕಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತಿ ಆಡಳಿತಕ್ಕೆ ತಿಳಿಸಿದರೂ ಪ್ರಯೋಜನವಾಗಿಲ್ಲ ತಕ್ಷಣವೇ ಸ್ವಚ್ಛತಾ ಕಾರ್ಯ ಕೈಗೊಂಡು ಕಸ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು’ ಎಂದು ಗ್ರಾಮಸ್ಥರಾದ ನಾಗಪ್ಪ ಸೋಮಪ್ಪ ಹರಿಕೃಷ್ಣ ಮಹೇಶ ಆಗ್ರಹಿಸಿದರು.</p>.<div><blockquote>ಎರಡು ತಿಂಗಳ ಹಿಂದೆ ಸ್ವಚ್ಚಗೊಳಿಸಿದ್ದೇವೆ ಸ್ವಚ್ಚತೆಯ ಜಾಗೃತಿ ಮೂಡಿಸಿದರೂ ಪ್ರಯೋಜನವಾಗಿಲ್ಲ ಕಸ ಹಾಕಬಾರೆಂದು ದೇವರ ಪೋಟೊ ಇಟ್ಟರು ನಿಯಂತ್ರಣಕ್ಕೆ ಬಂದಿಲ್ಲ. </blockquote><span class="attribution">ಶಾಕೀರ್, ಪಿ.ಡಿ.ಒ., ರಾರಾವಿ ಪಂಚಾಯಿತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ತಾಲ್ಲೂಕಿನ ರಾರಾವಿ ಗ್ರಾಮದ ವ್ಯಾಪ್ತಿಯಲ್ಲಿ ಕಸದ ರಾಶಿಗಳು ಹೆಚ್ಚಾಗಿದ್ದು, ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯ, ಸ್ವಚ್ಛತಾ ಸಿಬ್ಬಂದಿ ಮತ್ತು ಕಸ ವಿಲೇವಾರಿ ಘಟಕಗಳ ಕೊರತೆಯಿಂದಾಗಿ ಈ ಸಮಸ್ಯೆ ಜಟಿಲವಾಗಿದೆ.</p>.<p>ರಸ್ತೆ ಬದಿಗಳಲ್ಲಿ ಕಸ ಸುರಿಯುತ್ತಿರುವುದರಿಂದ ಕಸದ ರಾಶಿ ಕೊಳೆತು ಗಬ್ಬೆದ್ದು ನಾರುತ್ತಿದೆ, ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಹಂದಿಗಳ ಹಾವಳಿಯಿಂದ ಸಾಂಕ್ರಾಮಿಕ ರೋಗಗಳ ಹರಡುವ ಭೀತಿಯಲ್ಲಿ ಗ್ರಾಮಸ್ಥರು ದಿನ ಕಳೆಯುತ್ತಿದ್ದಾರೆ.</p>.<p>ಈ ರಸ್ತೆಯ ಪಕ್ಕದಲ್ಲಿಯೇ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಇದೆ. ಗ್ರಾಮ ಪಂಚಾಯತಿ ಆಡಳಿತ ಈ ರಸ್ತೆಯ ಸ್ವಚ್ಛತೆ ಮುಂದಾಗದಿದ್ದರಿಂದ ಕಸ ಸೇರಿ ಅಲ್ಲಿಯೇ ಮಹಿಳೆಯರು ಸೇರಿದಂತೆ ಪುರುಷರು ಸಹ ರಾತ್ರಿ ಸಮಯದಲ್ಲಿ ಮಲ-ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದಾಗಿ ದುರ್ವಾಸನೆಯಲ್ಲಿ ನಿತ್ಯ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಅಸ್ವಚ್ಛತೆ, ಕಸದ ರಾಶಿಯಿಂದಾಗಿ ಹಂದಿಗಳ ಹಾವಳಿ ವಿಪರೀತವಾಗಿದೆ. ಸದಾ ಅಲ್ಲಿಯೇ ಹಂದಿಗಳು ವಾಸವಾಗಿದ್ದರಿಂದ ಮತ್ತಷ್ಟು ಗಲೀಜು ಉಂಟಾಗಿ ಮೂಗು ಮುಚ್ಚಿಕೊಂಡು ಸಂಚರಿಸುವಂತಾಗಿದೆ. ಪಕ್ಕದಲ್ಲಿರುವ ಶಾಲೆಯ ಮಕ್ಕಳು ಸಾಂಕ್ರಾಮಿಕ ರೋಗಗಳ ಭೀತಿಗೆ ಒಳಗಾಗುವಂತಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.</p>.<p>ಈ ರಸ್ತೆಯನ್ನು ಸ್ವಚ್ಛಗೊಳಿಸಿ ಅಲ್ಲಿ ಮಲ-ಮೂತ್ರ ವಿಸರ್ಜನೆ ಮಾಡದಂತೆ ಹಾಗೂ ಕಸ ಹಾಕದಂತೆ ಸೂಕ್ತ ಕ್ರಮಕೈಗೊಳ್ಳಲು ಇತ್ತ ಗಮನಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.</p>.<p><strong>ತಕ್ಷಣ ಕಸ ತೆರವುಗೊಳಿಸಿ</strong></p><p> ‘ಹುತ್ತಿನ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಹಲವಾರು ತಿಂಗಳಿಂದ ಅಸ್ವಚ್ಛತೆ ಮಲ-ಮೂತ್ರ ವಿಸರ್ಜನೆ ಮಾಡುವುದರಿಂದ ಆ ರಸ್ತೆ ಮೂಲಕ ಸಂಚರಿಸುವುದು ಕಷ್ಟವಾಗಿದ್ದಲ್ಲದೇ ಸುತ್ತಮುತ್ತಲಿನ ಜನ ಹಾಗೂ ಶಾಲಾ ವಿದ್ಯಾರ್ಥಿಗಳು ದುರ್ನಾತದಲ್ಲಿ ಬದುಕಬೇಕಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತಿ ಆಡಳಿತಕ್ಕೆ ತಿಳಿಸಿದರೂ ಪ್ರಯೋಜನವಾಗಿಲ್ಲ ತಕ್ಷಣವೇ ಸ್ವಚ್ಛತಾ ಕಾರ್ಯ ಕೈಗೊಂಡು ಕಸ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು’ ಎಂದು ಗ್ರಾಮಸ್ಥರಾದ ನಾಗಪ್ಪ ಸೋಮಪ್ಪ ಹರಿಕೃಷ್ಣ ಮಹೇಶ ಆಗ್ರಹಿಸಿದರು.</p>.<div><blockquote>ಎರಡು ತಿಂಗಳ ಹಿಂದೆ ಸ್ವಚ್ಚಗೊಳಿಸಿದ್ದೇವೆ ಸ್ವಚ್ಚತೆಯ ಜಾಗೃತಿ ಮೂಡಿಸಿದರೂ ಪ್ರಯೋಜನವಾಗಿಲ್ಲ ಕಸ ಹಾಕಬಾರೆಂದು ದೇವರ ಪೋಟೊ ಇಟ್ಟರು ನಿಯಂತ್ರಣಕ್ಕೆ ಬಂದಿಲ್ಲ. </blockquote><span class="attribution">ಶಾಕೀರ್, ಪಿ.ಡಿ.ಒ., ರಾರಾವಿ ಪಂಚಾಯಿತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>