<p><strong>ಬಳ್ಳಾರಿ:</strong> ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯ ಮತದಾನ ಪ್ರಕ್ರಿಯೆ ನಗರದ ಒಕ್ಕೂಟದ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆಯಿತು.</p>.<p>ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ನಂತರ ಮತ ಎಣಿಕೆ ನಡೆಯಲಿದೆ.ಆದರೆ ಫಲಿತಾಂಶ ಘೋಷಿಸಬಾರದು ಎಂದು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ ಎಂದು ಚುನಾವಣಾಧಿಕಾರಿ ರಮೇಶ ಪಿ. ಕೋನರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಹರಪನಹಳ್ಳಿಯ ಐದು ಹಾಲು ಉತ್ಪಾದಕ ಸಹಕಾರ ಸಂಘಗಳು ಈ ಮೊದಲು ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಸೇರಿದ್ದು, ಈಗ ಬಳ್ಳಾರಿ ಗೆ ಸೇರಿರುವುದರಿಂದ ಇಲ್ಲಿನ ಒಕ್ಕೂಟದ ಚುನಾವಣೆ ಯಲ್ಲೂ ಮತದಾನದ ಅವಕಾಶ ನೀಡಲಾಗಿದೆ.ಈ ವಿವಾದ ಬಗೆಹರಿಯುವವರೆಗೂ ಫಲಿತಾಂಶ ಘೋಷಿಸುವುದಿಲ್ಲ ಎಂದರು.</p>.<p>ಕೊಪ್ಪಳದಲ್ಲಿ 75 ಮತದಾರರರಿದ್ದು, 3 ಸಾಮಾನ್ಯ ಕ್ಷೇತ್ರಕ್ಕೆ 6 ಮಂದಿ, ಮಹಿಳೆ ಮೀಸಲು ಕ್ಷೇತ್ರಕ್ಕೆ ಇಬ್ಬರು ಸ್ಪರ್ಧಿಸಿದ್ದಾರೆ.</p>.<p>ರಾಯಚೂರು ಜಿಲ್ಲೆಯಲ್ಲಿ 31 ಮತದಾರರು ಇದ್ದು,3 ಸಾಮಾನ್ಯ- ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ, ಮಹಿಳೆ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಬಳ್ಳಾರಿಯಲ್ಲಿ 133 ಮತದಾರರು ಇದ್ದು, ಮೂರು ಸಾಮಾನ್ಯ ಸ್ಥಾನಗಳಿಗೆ 6 ಮಂದಿ ಸ್ಪರ್ಧಿಸಿದ್ದಾರೆ.ಮಹಿಳೆ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ ಎಂದರು.22 ಮತಗಟ್ಟೆ ಸಿಬ್ಬಂದಿ ಹಾಗೂ 46 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯ ಮತದಾನ ಪ್ರಕ್ರಿಯೆ ನಗರದ ಒಕ್ಕೂಟದ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆಯಿತು.</p>.<p>ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ನಂತರ ಮತ ಎಣಿಕೆ ನಡೆಯಲಿದೆ.ಆದರೆ ಫಲಿತಾಂಶ ಘೋಷಿಸಬಾರದು ಎಂದು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ ಎಂದು ಚುನಾವಣಾಧಿಕಾರಿ ರಮೇಶ ಪಿ. ಕೋನರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.</p>.<p>ಹರಪನಹಳ್ಳಿಯ ಐದು ಹಾಲು ಉತ್ಪಾದಕ ಸಹಕಾರ ಸಂಘಗಳು ಈ ಮೊದಲು ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಸೇರಿದ್ದು, ಈಗ ಬಳ್ಳಾರಿ ಗೆ ಸೇರಿರುವುದರಿಂದ ಇಲ್ಲಿನ ಒಕ್ಕೂಟದ ಚುನಾವಣೆ ಯಲ್ಲೂ ಮತದಾನದ ಅವಕಾಶ ನೀಡಲಾಗಿದೆ.ಈ ವಿವಾದ ಬಗೆಹರಿಯುವವರೆಗೂ ಫಲಿತಾಂಶ ಘೋಷಿಸುವುದಿಲ್ಲ ಎಂದರು.</p>.<p>ಕೊಪ್ಪಳದಲ್ಲಿ 75 ಮತದಾರರರಿದ್ದು, 3 ಸಾಮಾನ್ಯ ಕ್ಷೇತ್ರಕ್ಕೆ 6 ಮಂದಿ, ಮಹಿಳೆ ಮೀಸಲು ಕ್ಷೇತ್ರಕ್ಕೆ ಇಬ್ಬರು ಸ್ಪರ್ಧಿಸಿದ್ದಾರೆ.</p>.<p>ರಾಯಚೂರು ಜಿಲ್ಲೆಯಲ್ಲಿ 31 ಮತದಾರರು ಇದ್ದು,3 ಸಾಮಾನ್ಯ- ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ, ಮಹಿಳೆ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಬಳ್ಳಾರಿಯಲ್ಲಿ 133 ಮತದಾರರು ಇದ್ದು, ಮೂರು ಸಾಮಾನ್ಯ ಸ್ಥಾನಗಳಿಗೆ 6 ಮಂದಿ ಸ್ಪರ್ಧಿಸಿದ್ದಾರೆ.ಮಹಿಳೆ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ ಎಂದರು.22 ಮತಗಟ್ಟೆ ಸಿಬ್ಬಂದಿ ಹಾಗೂ 46 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>