<p><strong>ಬಳ್ಳಾರಿ:</strong> ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p><p>ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು.</p>.ಬಳ್ಳಾರಿ | ರಾಬಕೊವಿ ಗದ್ದುಗೆಗೆ ಚುನಾವಣೆ .ರಾಬಕೊವಿ ಒಕ್ಕೂಟಕ್ಕೆ ಶಾಸಕ ಹಿಟ್ನಾಳ ಅಧ್ಯಕ್ಷ?.<p>ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು.</p><p>ಇವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ, ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್ ಘೋಷಿಸಿದರು.</p><p>ಕೆಎಂಎಫ್ನ ಮಾಜಿ ಅಧ್ಯಕ್ಷ ಭೀಮ ನಾಯ್ಕ ಚುನಾವಣೆಯಿಂದ ದೂರ ಉಳಿದರು.</p><p>ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ ಹಿಟ್ನಾಳ್ 7 ಮತ್ತು ಭೀಮ ನಾಯ್ಕ 5 ನಿರ್ದೇಶಕರ ಬಲ ಹೊಂದಿದ್ದರು.</p><p>ಇದರ ಜತೆಗೆ ಸರ್ಕಾರ ಹಿಟ್ನಾಳ್ ಅವರನ್ನು ಒಕ್ಕೂಟಕ್ಕೆ ಎರಡು ದಿನಗಳ ಹಿಂದಷ್ಟೇ ನಾಮನಿರ್ದೇಶನ ಮಾಡಿತ್ತು. ಹೀಗಾಗಿ ಹಿಟ್ನಾಳ್ ಸಂಖ್ಯಾ ಬಲ 8ಕ್ಕೆ ಏರಿತ್ತು.</p><p>ಇದು ಮಾತ್ರವೇ ಅಲ್ಲದೇ ಹಿಟ್ನಾಳ್ಗೆ ಬಳ್ಳಾರಿಯ ಕೆಲ ಶಾಸಕರು ಮತ್ತು ಮುಖ್ಯಮಂತ್ರಿಯ ಬೆಂಬಲ ಇತ್ತು.</p><p>ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಹಿಟ್ನಾಳ್ ಬಣದ ನಿರ್ದೇಶಕರಿಗೆ ಆತಿಥ್ಯ ವಹಿಸಿದ್ದರು.</p>.ಸಿಎಂ ಅಂಗಳದಲ್ಲಿ ರಾಬಕೊವಿ ಪಟ್ಟ: ಮತಗಳ ಲೆಕ್ಕಾಚಾರದಲ್ಲಿ ಹಿಟ್ನಾಳ್ ಬಣದ ಮೇಲುಗೈ.ರಾಬಕೊವಿ: ಸಮಬಲದ ಫಲಿತಾಂಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p><p>ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಿಗದಿಯಾಗಿತ್ತು.</p>.ಬಳ್ಳಾರಿ | ರಾಬಕೊವಿ ಗದ್ದುಗೆಗೆ ಚುನಾವಣೆ .ರಾಬಕೊವಿ ಒಕ್ಕೂಟಕ್ಕೆ ಶಾಸಕ ಹಿಟ್ನಾಳ ಅಧ್ಯಕ್ಷ?.<p>ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸತ್ಯನಾರಾಯಣ ಮಾತ್ರವೇ ನಾಮಪತ್ರ ಸಲ್ಲಿಸಿದರು.</p><p>ಇವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ, ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್ ಘೋಷಿಸಿದರು.</p><p>ಕೆಎಂಎಫ್ನ ಮಾಜಿ ಅಧ್ಯಕ್ಷ ಭೀಮ ನಾಯ್ಕ ಚುನಾವಣೆಯಿಂದ ದೂರ ಉಳಿದರು.</p><p>ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ ಹಿಟ್ನಾಳ್ 7 ಮತ್ತು ಭೀಮ ನಾಯ್ಕ 5 ನಿರ್ದೇಶಕರ ಬಲ ಹೊಂದಿದ್ದರು.</p><p>ಇದರ ಜತೆಗೆ ಸರ್ಕಾರ ಹಿಟ್ನಾಳ್ ಅವರನ್ನು ಒಕ್ಕೂಟಕ್ಕೆ ಎರಡು ದಿನಗಳ ಹಿಂದಷ್ಟೇ ನಾಮನಿರ್ದೇಶನ ಮಾಡಿತ್ತು. ಹೀಗಾಗಿ ಹಿಟ್ನಾಳ್ ಸಂಖ್ಯಾ ಬಲ 8ಕ್ಕೆ ಏರಿತ್ತು.</p><p>ಇದು ಮಾತ್ರವೇ ಅಲ್ಲದೇ ಹಿಟ್ನಾಳ್ಗೆ ಬಳ್ಳಾರಿಯ ಕೆಲ ಶಾಸಕರು ಮತ್ತು ಮುಖ್ಯಮಂತ್ರಿಯ ಬೆಂಬಲ ಇತ್ತು.</p><p>ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಹಿಟ್ನಾಳ್ ಬಣದ ನಿರ್ದೇಶಕರಿಗೆ ಆತಿಥ್ಯ ವಹಿಸಿದ್ದರು.</p>.ಸಿಎಂ ಅಂಗಳದಲ್ಲಿ ರಾಬಕೊವಿ ಪಟ್ಟ: ಮತಗಳ ಲೆಕ್ಕಾಚಾರದಲ್ಲಿ ಹಿಟ್ನಾಳ್ ಬಣದ ಮೇಲುಗೈ.ರಾಬಕೊವಿ: ಸಮಬಲದ ಫಲಿತಾಂಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>