<p><strong>ಬಳ್ಳಾರಿ</strong>: ‘ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ’ಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವ ಪ್ರಮೇಯವೇ ಇಲ್ಲ ಎಂದು ಸಹಕಾರ ಸಚಿವ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. </p>.<p>ಸಂಸ್ಥೆಯ ಆಡಳಿತ ಮಂಡಳಿ ಅಧಿಕಾರ ಮುಗಿದಿರುವುದರಿಂದ ಮೆಗಾ ಡೇರಿಗೆ ಜಾಗ ಖರೀದಿ ಮಾಡಲು ಹಣ ನೀಡಲು ಆಗುತ್ತಿಲ್ಲ. ರೈತರಿಗೆ ಬಿಲ್ಲು, ಸಹಾಯಧನ ನೀಡಲು ಸಮಸ್ಯೆಯಾಗುತ್ತಿದೆ. ಕೂಡಲೇ ರಾಬಕೊವಿಗೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಸರ್ಕಾರಕ್ಕೆ ಮನವಿ ಮಾಡಿದ್ದರು. </p>.<p>ಇದಕ್ಕೆ ಉತ್ತರಿಸಿರುವ ಸಹಕಾರ ಸಚಿವ ರಾಜಣ್ಣ, ರಾಬಕೊವಿ ಹಾಲು ಒಕ್ಕೂಟದ ಮೆಗಾಡೈರಿಗಾಗಿ ಕೊಳಗಲ್ಲು ಗ್ರಾಮದಲ್ಲಿ 15 ಎಕರೆ ಜಮೀನನ್ನು ಬಳ್ಳಾರಿ ಜಿಲ್ಲಾಧಿಕಾರಿ 2024ರ ಜೂನ್ 29ರಂದು ಮಂಜೂರು ಮಾಡಿದ್ದು, ₹2,92,01,070 ಮೊತ್ತ ಪಾವತಿಸಲು ತಿಳಿಸಿದ್ದಾರೆ. ಆ.29ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಜಮೀನಿನ ದರವನ್ನು ಕಡಿಮೆಗೊಳಿಸುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ಸಭಾಧ್ಯಕ್ಷರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. </p>.<p>ಆಡಳಿತ ಮಂಡಳಿಗಳಿಗೆ ಚುನಾವಣೆ ನಡೆದು ಹೊಸ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸುವವರೆಗೆ ಹಾಲಿ ಇರುವ ಆಡಳಿತ ಮಂಡಳಿಯೇ ಮುಂದುವರೆಯತಕ್ಕದ್ದು ಎಂದು ಸರ್ಕಾರ ಆದೇಶಿಸಿದೆ. ಹೀಗಾಗಿ ರಾಬಕೊವಿ ಹಾಲು ಒಕ್ಕೂಟಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ’ಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವ ಪ್ರಮೇಯವೇ ಇಲ್ಲ ಎಂದು ಸಹಕಾರ ಸಚಿವ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. </p>.<p>ಸಂಸ್ಥೆಯ ಆಡಳಿತ ಮಂಡಳಿ ಅಧಿಕಾರ ಮುಗಿದಿರುವುದರಿಂದ ಮೆಗಾ ಡೇರಿಗೆ ಜಾಗ ಖರೀದಿ ಮಾಡಲು ಹಣ ನೀಡಲು ಆಗುತ್ತಿಲ್ಲ. ರೈತರಿಗೆ ಬಿಲ್ಲು, ಸಹಾಯಧನ ನೀಡಲು ಸಮಸ್ಯೆಯಾಗುತ್ತಿದೆ. ಕೂಡಲೇ ರಾಬಕೊವಿಗೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಸರ್ಕಾರಕ್ಕೆ ಮನವಿ ಮಾಡಿದ್ದರು. </p>.<p>ಇದಕ್ಕೆ ಉತ್ತರಿಸಿರುವ ಸಹಕಾರ ಸಚಿವ ರಾಜಣ್ಣ, ರಾಬಕೊವಿ ಹಾಲು ಒಕ್ಕೂಟದ ಮೆಗಾಡೈರಿಗಾಗಿ ಕೊಳಗಲ್ಲು ಗ್ರಾಮದಲ್ಲಿ 15 ಎಕರೆ ಜಮೀನನ್ನು ಬಳ್ಳಾರಿ ಜಿಲ್ಲಾಧಿಕಾರಿ 2024ರ ಜೂನ್ 29ರಂದು ಮಂಜೂರು ಮಾಡಿದ್ದು, ₹2,92,01,070 ಮೊತ್ತ ಪಾವತಿಸಲು ತಿಳಿಸಿದ್ದಾರೆ. ಆ.29ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಜಮೀನಿನ ದರವನ್ನು ಕಡಿಮೆಗೊಳಿಸುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ಸಭಾಧ್ಯಕ್ಷರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. </p>.<p>ಆಡಳಿತ ಮಂಡಳಿಗಳಿಗೆ ಚುನಾವಣೆ ನಡೆದು ಹೊಸ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸುವವರೆಗೆ ಹಾಲಿ ಇರುವ ಆಡಳಿತ ಮಂಡಳಿಯೇ ಮುಂದುವರೆಯತಕ್ಕದ್ದು ಎಂದು ಸರ್ಕಾರ ಆದೇಶಿಸಿದೆ. ಹೀಗಾಗಿ ರಾಬಕೊವಿ ಹಾಲು ಒಕ್ಕೂಟಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>