<p><strong>ಕಂಪ್ಲಿ</strong>: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಂಗಳವಾರ ರಾತ್ರಿ 1.76ಸೆಂ.ಮೀ ಮಳೆಯಾಗಿದ್ದು, ತಾಲ್ಲೂಕಿನ ಮೆಟ್ರಿ ಗ್ರಾಮದ ಜಿ.ಅನ್ನಪೂರ್ಣಮ್ಮ ಜಲಂಧರಗೌಡ ಅವರಿಗೆ ಸೇರಿದ ಮಣ್ಣಿನ ಮನೆ ಚಾವಣಿ ಕುಸಿದಿದೆ.</p>.<p>ಕುಟುಂಬದವರು ಮುಂಜಾಗ್ರತೆಯಾಗಿ ಸ್ಥಳಾಂತರಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಹಶೀಲ್ದಾರ್ ಶಿವರಾಜ ತಿಳಿಸಿದರು.</p>.<p>ಬುಧವಾರ ಇಡೀ ದಿನ ಬಿಟ್ಟೂಬಿಡದೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿದ್ಯುತ್ ಕಣ್ಣಾಮುಚ್ಚಾಲೆ ಸಾಮಾನ್ಯವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ದೊರೆಯದೆ ಜನರ ಪರದಾಟ ಮುಂದುವರಿದಿತ್ತು.</p>.<p>ಗೋಕಟ್ಟೆ, ಹಳ್ಳಗಳು ತುಂಬಿ ಹರಿಯುತ್ತಿದ್ದವು. ತಗ್ಗು ಪ್ರದೇಶದಲ್ಲಿ ನೀರು ನಿಂತಿರುವುದು ಮತ್ತು ರಸ್ತೆಗಳು ಕೆಸರಮಯ ಆಗಿರುವುದರಿಂದ ಜನರ ಸಂಚಾರಕ್ಕೆ ಅಡಚಣೆಯಾಗಿತ್ತು. ಮಳೆಯಿಂದ ಪಟ್ಟಣದ ವಿವಿಧ ಮಾರುಕಟ್ಟೆಯಲ್ಲಿ ಸಾರ್ವಜನಿಕರ ಸಂಚಾರವು ವಿರಳವಾಗಿತ್ತು.</p>.<p>ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಕಾಲುವೆ ನೀರು ಆಧಾರಿತ ಹೊಲ ಗದ್ದೆಗಳಲ್ಲಿ ಮುಂಗಾರು ಪೂರ್ವ ಕೃಷಿ ಚಟುವಟಿಕೆಗೆ ತೊಂದರೆಯಾಗಿದೆ ಎಂದು ರೈತರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಂಗಳವಾರ ರಾತ್ರಿ 1.76ಸೆಂ.ಮೀ ಮಳೆಯಾಗಿದ್ದು, ತಾಲ್ಲೂಕಿನ ಮೆಟ್ರಿ ಗ್ರಾಮದ ಜಿ.ಅನ್ನಪೂರ್ಣಮ್ಮ ಜಲಂಧರಗೌಡ ಅವರಿಗೆ ಸೇರಿದ ಮಣ್ಣಿನ ಮನೆ ಚಾವಣಿ ಕುಸಿದಿದೆ.</p>.<p>ಕುಟುಂಬದವರು ಮುಂಜಾಗ್ರತೆಯಾಗಿ ಸ್ಥಳಾಂತರಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಹಶೀಲ್ದಾರ್ ಶಿವರಾಜ ತಿಳಿಸಿದರು.</p>.<p>ಬುಧವಾರ ಇಡೀ ದಿನ ಬಿಟ್ಟೂಬಿಡದೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿದ್ಯುತ್ ಕಣ್ಣಾಮುಚ್ಚಾಲೆ ಸಾಮಾನ್ಯವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ದೊರೆಯದೆ ಜನರ ಪರದಾಟ ಮುಂದುವರಿದಿತ್ತು.</p>.<p>ಗೋಕಟ್ಟೆ, ಹಳ್ಳಗಳು ತುಂಬಿ ಹರಿಯುತ್ತಿದ್ದವು. ತಗ್ಗು ಪ್ರದೇಶದಲ್ಲಿ ನೀರು ನಿಂತಿರುವುದು ಮತ್ತು ರಸ್ತೆಗಳು ಕೆಸರಮಯ ಆಗಿರುವುದರಿಂದ ಜನರ ಸಂಚಾರಕ್ಕೆ ಅಡಚಣೆಯಾಗಿತ್ತು. ಮಳೆಯಿಂದ ಪಟ್ಟಣದ ವಿವಿಧ ಮಾರುಕಟ್ಟೆಯಲ್ಲಿ ಸಾರ್ವಜನಿಕರ ಸಂಚಾರವು ವಿರಳವಾಗಿತ್ತು.</p>.<p>ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಕಾಲುವೆ ನೀರು ಆಧಾರಿತ ಹೊಲ ಗದ್ದೆಗಳಲ್ಲಿ ಮುಂಗಾರು ಪೂರ್ವ ಕೃಷಿ ಚಟುವಟಿಕೆಗೆ ತೊಂದರೆಯಾಗಿದೆ ಎಂದು ರೈತರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>