ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ–ವಿಜಯನಗರ | ಕೆಲವೆಡೆ ಗಾಳಿ ಮಳೆ; ಸಿಡಿಲು ಬಡಿದು 4 ಹಸು ಸಾವು

Published 18 ಏಪ್ರಿಲ್ 2024, 13:17 IST
Last Updated 18 ಏಪ್ರಿಲ್ 2024, 13:17 IST
ಅಕ್ಷರ ಗಾತ್ರ

ಹೊಸಪೇಟೆ/ಬಳ್ಳಾರಿ: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವೆಡೆ ಗುರುವಾರ ಸಂಜೆ ಗಾಳಿಯಿಂದ ಕೂಡಿದ ಸಾಧಾರಣ ಮಳೆ ಸುರಿಯಿತು. ಕೆಲವೆಡೆ ಮರಗಳು ಧರೆಗೆ ಉರುಳಿದ್ದರೆ, ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಸಿಡಿಲಿಗೆ ಮೂರು ಹಸುಗಳು ಹಾಗೂ ಹರಪನಹಳ್ಳಿಯ ಕುಮಾರನಹಳ್ಳಿಯಲ್ಲಿ ಒಂದು ಹಸು ಸತ್ತಿದೆ.

ಹರಾಳು ಗ್ರಾಮದ ಕೃಷಿಕ ಅಂಬಳಿ ಪ್ರಕಾಶ್‌ಗೆ ಸೇರಿದ ಹಸುಗಳ ಮೌಲ್ಯ ₹1.50 ಲಕ್ಷ ಎಂದು ಅಂದಾಜಿಸಲಾಗಿದೆ. ಕುಮಾರನಹಳ್ಳಿಯ ಚಂದ್ರಪ್ಪ ಅವರಿಗೆ ಇನ್ನೊಂದು ಹಸು ಸೇರಿತ್ತು.

ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಹೂವಿನಹಡಗಲಿ, ಕೊಟ್ಟೂರು, ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ, ಗಾದಿಗನೂರು ಭಾಗಗಳಲ್ಲಿ ಭಾರಿ ಗಾಳಿ ಸಹಿತ ಸಾಧಾರಣ ಮಳೆ ಸುರಿಯಿತು. ಬಳ್ಳಾರಿ ನಗರದಲ್ಲಿ ಹತ್ತು ನಿಮಿಷ ತುಂತುರು ಮಳೆ ಸುರಿದರೆ, ಸಂಡೂರಿನಲ್ಲಿ ಭಾರಿ ಗಾಳಿ, ಗುಡುಗು, ಸಿಡಿಲಿನೊಂದಿಗೆ 40 ನಿಮಿಷ ಮಳೆ ಸುರಿಯಿತು. ತೋರಣಗಲ್‌, ಕಂಪ್ಲಿ ಭಾಗದಲ್ಲೂ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT