<p><strong>ಹೊಸಪೇಟೆ</strong>: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸಲು ಭಾನುವಾರ ನಗರದಲ್ಲಿ ಬೆಳ್ಳಿ ರಥದ ಮೆರವಣಿಗೆ ಮಾಡಲಾಯಿತು.</p>.<p>ಎಂ.ಜೆ. ನಗರದ ಬಾಲಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಂಸದ ವೈ.ದೇವೇಂದ್ರಪ್ಪನವರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹೂವಿನಿಂದ ಅಲಂಕರಿಸಿದ ಬೆಳ್ಳಿ ರಥದಲ್ಲಿನ ರಾಮ–ಲಕ್ಷ್ಮಣ–ಸೀತೆ, ಹನುಮಂತನ ಉತ್ಸವಮೂರ್ತಿಗೆ ಪುಷ್ಪ ಗೌರವ ಸಲ್ಲಿಸಿದರು.</p>.<p>ನಂತರ ಬಡಾವಣೆಯಲ್ಲಿ ಸಾರ್ವಜನಿಕರಿಂದ ಮಂದಿರ ನಿರ್ಮಾಣಕ್ಕೆ ಸಾಂಕೇತಿಕವಾಗಿ ದೇಣಿಗೆ ಸಂಗ್ರಹಿಸಿ ಚಾಲನೆ ನೀಡಿದರು. ಬಳಿಕ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ರಥದ ಮೆರವಣಿಗೆ ನಡೆಯಿತು. ಎಲ್ಲ ರಸ್ತೆಗಳಲ್ಲಿ ರಂಗೋಲಿ ಹಾಕಿ ಅಲಂಕರಿಸಲಾಗಿತ್ತು. ರಥ ಬರುತ್ತಿದ್ದಂತೆ ಮಹಿಳೆಯರು ಹೂಮಳೆಗರೆದು, ಆರತಿ ಬೆಳಗಿ ನಮಿಸಿದರು.</p>.<p>ಚಿಣ್ಣರು ರಾಮ–ಲಕ್ಷ್ಮಣ–ಸೀತೆ ಹಾಗೂ ಹನುಮಂತ ವೇಷಧಾರಿಗಳಾಗಿ ಗಮನ ಸೆಳೆದರು. ಮಹಿಳೆಯರು ಭಕ್ತಿಭಾವದಿಂದ ಕೋಲಾಟ ಆಡಿದರು.</p>.<p>ವಿಜಯನಗರ ರಾಜವಂಶಸ್ಥ ಕೃಷ್ಣದೇವರಾಯ, ಹುಡಾ ಅಧ್ಯಕ್ಷ ಅಶೋಕ ಜೀರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ರೇವಣಸಿದ್ದಪ್ಪ, ಬಿಜೆಪಿ ಮುಖಂಡರಾದ ಚಂದ್ರಕಾಂತ ಕಾಮತ್, ಸಾಲಿ ಸಿದ್ದಯ್ಯ ಸ್ವಾಮಿ, ಕವಿತಾ ಈಶ್ವರ್ ಸಿಂಗ್, ಸಿದ್ದಾರ್ಥ ಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸಲು ಭಾನುವಾರ ನಗರದಲ್ಲಿ ಬೆಳ್ಳಿ ರಥದ ಮೆರವಣಿಗೆ ಮಾಡಲಾಯಿತು.</p>.<p>ಎಂ.ಜೆ. ನಗರದ ಬಾಲಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಂಸದ ವೈ.ದೇವೇಂದ್ರಪ್ಪನವರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹೂವಿನಿಂದ ಅಲಂಕರಿಸಿದ ಬೆಳ್ಳಿ ರಥದಲ್ಲಿನ ರಾಮ–ಲಕ್ಷ್ಮಣ–ಸೀತೆ, ಹನುಮಂತನ ಉತ್ಸವಮೂರ್ತಿಗೆ ಪುಷ್ಪ ಗೌರವ ಸಲ್ಲಿಸಿದರು.</p>.<p>ನಂತರ ಬಡಾವಣೆಯಲ್ಲಿ ಸಾರ್ವಜನಿಕರಿಂದ ಮಂದಿರ ನಿರ್ಮಾಣಕ್ಕೆ ಸಾಂಕೇತಿಕವಾಗಿ ದೇಣಿಗೆ ಸಂಗ್ರಹಿಸಿ ಚಾಲನೆ ನೀಡಿದರು. ಬಳಿಕ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ರಥದ ಮೆರವಣಿಗೆ ನಡೆಯಿತು. ಎಲ್ಲ ರಸ್ತೆಗಳಲ್ಲಿ ರಂಗೋಲಿ ಹಾಕಿ ಅಲಂಕರಿಸಲಾಗಿತ್ತು. ರಥ ಬರುತ್ತಿದ್ದಂತೆ ಮಹಿಳೆಯರು ಹೂಮಳೆಗರೆದು, ಆರತಿ ಬೆಳಗಿ ನಮಿಸಿದರು.</p>.<p>ಚಿಣ್ಣರು ರಾಮ–ಲಕ್ಷ್ಮಣ–ಸೀತೆ ಹಾಗೂ ಹನುಮಂತ ವೇಷಧಾರಿಗಳಾಗಿ ಗಮನ ಸೆಳೆದರು. ಮಹಿಳೆಯರು ಭಕ್ತಿಭಾವದಿಂದ ಕೋಲಾಟ ಆಡಿದರು.</p>.<p>ವಿಜಯನಗರ ರಾಜವಂಶಸ್ಥ ಕೃಷ್ಣದೇವರಾಯ, ಹುಡಾ ಅಧ್ಯಕ್ಷ ಅಶೋಕ ಜೀರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ರೇವಣಸಿದ್ದಪ್ಪ, ಬಿಜೆಪಿ ಮುಖಂಡರಾದ ಚಂದ್ರಕಾಂತ ಕಾಮತ್, ಸಾಲಿ ಸಿದ್ದಯ್ಯ ಸ್ವಾಮಿ, ಕವಿತಾ ಈಶ್ವರ್ ಸಿಂಗ್, ಸಿದ್ದಾರ್ಥ ಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>