ದೇಗುಲದ ಗರ್ಭಗುಡಿಯಲ್ಲಿ ಶ್ರೀರಾಮಚಂದ್ರ, ಸೀತೆ, ಲಕ್ಷ್ಮಣ ಹಾಗೂ ಆಂಜನೇಯನಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ, ಪೂಜೆ ನೆರವೇರಿಸಲಾಯಿತು. ಕೋವಿಡ್ ಕಾರಣದಿಂದ ಹೆಚ್ಚಿನ ಜನರನ್ನು ಸೇರಿಸದೆ ಸರಳವಾಗಿ ಧಾರ್ಮಿಕ ಕಾರ್ಯ ಪೂರ್ಣಗೊಳಿಸಲಾಯಿತು. ಬೆರಳೆಣಿಕೆಯ ಭಕ್ತರಷ್ಟೇ ಬಂದು ದೇವರ ದರ್ಶನ ಪಡೆದುಕೊಂಡು ಹಿಂತಿರುಗಿದರು. ದೇಗುಲದ ಹೊರಭಾಗದಲ್ಲಿ ಭಕ್ತರು, ಸಾರ್ವಜನಿಕರಿಗೆ ಪಾನಕ ವಿತರಿಸಲಾಯಿತು.