<p><strong>ಬಳ್ಳಾರಿ</strong>: ಜಗತ್ತಿನಲ್ಲಿ ಎಲ್ಲೂ ಕಾಣದ ‘ಕ್ರೋಟಲೇರಿಯಾ ಸಂಡೂರೆನ್ಸಿಸ್’ ಎಂಬ ಗಿಡ ಸಂಡೂರಿನ ರಾಮಗಡ ಶ್ರೇಣಿಯಲ್ಲಿ ಪತ್ತೆಯಾಗಿದೆ.</p>.<p>‘ಸಮುದ್ರಮಟ್ಟದಿಂದ ಒಂದು ಸಾವಿರ ಮೀಟರ್ ಎತ್ತರದಲ್ಲಿ ಮಾತ್ರ ಬೆಳೆಯುವ ಈ ಗಿಡಗಳನ್ನು 1912ರಲ್ಲಿ ಜೆ.ಎಸ್.ಗ್ಯಾಂಬೆಲ್ ಎಂಬ ಯೂರೋಪಿನ ಸಸ್ಯಶಾಸ್ತ್ರಜ್ಞ ರಾಮಗಡದ ಪರ್ವತದಲ್ಲಿ ಮೊದಲ ಬಾರಿಗೆ ಪತ್ತೆ ಮಾಡಿದ್ದರು. ನಂತರ ಈ ಸಸ್ಯವನ್ನು ಇತರೆ ಸೆಣಬು ಸಸ್ಯಗಳೊಂದಿಗೆ ಹೋಲಿಸಿದಾಗ ಈ ಪ್ರಬೇಧ ರಾಮಗಡ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಮಾತ್ರ ಸೀಮಿತ ಎಂದು ನಿರ್ಧರಿಸಿ ಇದಕ್ಕೆ ‘ಕ್ರೋಟಲೇರಿಯಾ ಸಂಡೂರೆನ್ಸಿಸ್’ ಎಂದು ನಾಮಕರಣ ಮಾಡಿದ್ದರು. 1980ರಲ್ಲಿ ಜೈನ್ ಎಂಬ ಭಾರತೀಯ ಸಸ್ಯಶಾಸ್ತ್ರಜ್ಞ ಇದರ ಅಧ್ಯಯನ ಮಾಡಿದ್ದರು’ ಎಂದು ವನ್ಯಜೀವಿ ಸಂಶೋಧಕ ಸಮದ್ ಕೊಟ್ಟೂರು ತಿಳಿಸಿದ್ದಾರೆ. </p>.<p>‘ಹೊಳಪಿನ ಸೂಕ್ಷ್ಮ ರೋಮಗಳಿಂದ ಕೂಡಿದ ಎಲೆ, ಹಳದಿ ಹೂವು, ಬುರುಡೆಯಂತೆ ಇರುವ ಕಾಯಿ, ಹುರುಳಿಯಾಕಾರದ ಬೀಜಗಳನ್ನು ಬಿಡುವ ಈ ಸಸ್ಯ ಸೆಣಬಿನ ವರ್ಗಕ್ಕೆ ಸೇರಿದೆ. ಇದಕ್ಕೆ ಕನ್ನಡದಲ್ಲಿ ಹೆಸರಿಲ್ಲ. ರಾಮಗಡದಲ್ಲಿ ಮಾತ್ರ ಸಿಗುವ ಕಾರಣ ಇದನ್ನು ‘ರಾಮ ಸೆಣಬು’ ಎಂದು ನಾಮಕರಣ ಮಾಡಿರುವೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಈ ಸಸ್ಯದ ಬೀಜಗಳನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಕಾಡಿನಲ್ಲಿ ಬೆಳೆಸುವ ಪ್ರಯೋಗ ಮಾಡಿದರೂ ಅಲ್ಲಿ ಬೆಳೆಯಲಿಲ್ಲ. ಇದಕ್ಕೆ ಸಮುದ್ರ ಮಟ್ಟದಿಂದ ಎತ್ತರ ಹಾಗೂ ಕಬ್ಬಿಣ-ಮ್ಯಾಂಗನೀಸ್ ಅದಿರು ಇರುವ ಮಣ್ಣು ಕಾರಣ ಇರಬಹುದು. ಹೀಗಾಗಿ ಈ ಸಸ್ಯ ಕೇವಲ ರಾಮಗಡದಲ್ಲಿ ಹೆಚ್ಚಾಗಿ ಕಾಣಸಿಗುತ್ತಿದೆ. ಆದರೆ ಗಣಿಗಾರಿಕೆಯಿಂದ ಈ ಅಪರೂಪದ ಸಸ್ಯದ ಅಸ್ತಿತ್ವಕ್ಕೆ ಧಕ್ಕೆ ಎದುರಾಗಿದೆ. ಆದ್ದರಿಂದ ಈ ಸಸ್ಯದ ಕುರಿತ ಅಧ್ಯಯನ ಅಗತ್ಯವಿದೆ’ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಜಗತ್ತಿನಲ್ಲಿ ಎಲ್ಲೂ ಕಾಣದ ‘ಕ್ರೋಟಲೇರಿಯಾ ಸಂಡೂರೆನ್ಸಿಸ್’ ಎಂಬ ಗಿಡ ಸಂಡೂರಿನ ರಾಮಗಡ ಶ್ರೇಣಿಯಲ್ಲಿ ಪತ್ತೆಯಾಗಿದೆ.</p>.<p>‘ಸಮುದ್ರಮಟ್ಟದಿಂದ ಒಂದು ಸಾವಿರ ಮೀಟರ್ ಎತ್ತರದಲ್ಲಿ ಮಾತ್ರ ಬೆಳೆಯುವ ಈ ಗಿಡಗಳನ್ನು 1912ರಲ್ಲಿ ಜೆ.ಎಸ್.ಗ್ಯಾಂಬೆಲ್ ಎಂಬ ಯೂರೋಪಿನ ಸಸ್ಯಶಾಸ್ತ್ರಜ್ಞ ರಾಮಗಡದ ಪರ್ವತದಲ್ಲಿ ಮೊದಲ ಬಾರಿಗೆ ಪತ್ತೆ ಮಾಡಿದ್ದರು. ನಂತರ ಈ ಸಸ್ಯವನ್ನು ಇತರೆ ಸೆಣಬು ಸಸ್ಯಗಳೊಂದಿಗೆ ಹೋಲಿಸಿದಾಗ ಈ ಪ್ರಬೇಧ ರಾಮಗಡ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಮಾತ್ರ ಸೀಮಿತ ಎಂದು ನಿರ್ಧರಿಸಿ ಇದಕ್ಕೆ ‘ಕ್ರೋಟಲೇರಿಯಾ ಸಂಡೂರೆನ್ಸಿಸ್’ ಎಂದು ನಾಮಕರಣ ಮಾಡಿದ್ದರು. 1980ರಲ್ಲಿ ಜೈನ್ ಎಂಬ ಭಾರತೀಯ ಸಸ್ಯಶಾಸ್ತ್ರಜ್ಞ ಇದರ ಅಧ್ಯಯನ ಮಾಡಿದ್ದರು’ ಎಂದು ವನ್ಯಜೀವಿ ಸಂಶೋಧಕ ಸಮದ್ ಕೊಟ್ಟೂರು ತಿಳಿಸಿದ್ದಾರೆ. </p>.<p>‘ಹೊಳಪಿನ ಸೂಕ್ಷ್ಮ ರೋಮಗಳಿಂದ ಕೂಡಿದ ಎಲೆ, ಹಳದಿ ಹೂವು, ಬುರುಡೆಯಂತೆ ಇರುವ ಕಾಯಿ, ಹುರುಳಿಯಾಕಾರದ ಬೀಜಗಳನ್ನು ಬಿಡುವ ಈ ಸಸ್ಯ ಸೆಣಬಿನ ವರ್ಗಕ್ಕೆ ಸೇರಿದೆ. ಇದಕ್ಕೆ ಕನ್ನಡದಲ್ಲಿ ಹೆಸರಿಲ್ಲ. ರಾಮಗಡದಲ್ಲಿ ಮಾತ್ರ ಸಿಗುವ ಕಾರಣ ಇದನ್ನು ‘ರಾಮ ಸೆಣಬು’ ಎಂದು ನಾಮಕರಣ ಮಾಡಿರುವೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಈ ಸಸ್ಯದ ಬೀಜಗಳನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಕಾಡಿನಲ್ಲಿ ಬೆಳೆಸುವ ಪ್ರಯೋಗ ಮಾಡಿದರೂ ಅಲ್ಲಿ ಬೆಳೆಯಲಿಲ್ಲ. ಇದಕ್ಕೆ ಸಮುದ್ರ ಮಟ್ಟದಿಂದ ಎತ್ತರ ಹಾಗೂ ಕಬ್ಬಿಣ-ಮ್ಯಾಂಗನೀಸ್ ಅದಿರು ಇರುವ ಮಣ್ಣು ಕಾರಣ ಇರಬಹುದು. ಹೀಗಾಗಿ ಈ ಸಸ್ಯ ಕೇವಲ ರಾಮಗಡದಲ್ಲಿ ಹೆಚ್ಚಾಗಿ ಕಾಣಸಿಗುತ್ತಿದೆ. ಆದರೆ ಗಣಿಗಾರಿಕೆಯಿಂದ ಈ ಅಪರೂಪದ ಸಸ್ಯದ ಅಸ್ತಿತ್ವಕ್ಕೆ ಧಕ್ಕೆ ಎದುರಾಗಿದೆ. ಆದ್ದರಿಂದ ಈ ಸಸ್ಯದ ಕುರಿತ ಅಧ್ಯಯನ ಅಗತ್ಯವಿದೆ’ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>