<p><strong>ಹಗರಿಬೊಮ್ಮನಹಳ್ಳಿ</strong>: ‘ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಭಾರತೀಯ ಸಂಸ್ಕೃತಿ, ಆದರ್ಶ, ನೈತಿಕ ಮೌಲ್ಯ ಹಾಗೂ ಸಂಸ್ಕಾರ ಬೋಧಿಸುವಂತಹ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ’ ಎಂದು ವಕೀಲರಾದ ನಾಗರಾಜ್ ಗುತ್ತೇದಾರ್ ಹೇಳಿದರು.</p>.<p>ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಿಬಿಎಸ್ಇ ವಿಭಾಗದಿಂದ ಹಮ್ಮಿಕೊಂಡಿದ್ದ ಸಂಕಲ್ಪ ದಿವಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಶಿಕ್ಷಣ ಸಂಸ್ಥೆಗಳು ಕೇವಲ ಪುಸ್ತಕಕ್ಕೆ ಸಂಬಂಧಿತ ಶಿಕ್ಷಣ ನೀಡಬಾರದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಗಮನ ಹರಿಸಬೇಕು’ ಎಂದರು.</p>.<p>ಶಾಲೆಯ ಮುಖ್ಯ ಶಿಕ್ಷಕ ಎಚ್.ಎ. ರಂಗನಾಥ ಮಾತನಾಡಿದರು. ಈ ವೇಳೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಶಿಕ್ಷಕರಾದ ವಿನಾಯಕ ಭಟ್ಟ, ಮಧುಕರ್, ಶಿವಶಂಕ್ರಯ್ಯ, ರೇಣುಕಾ, ಭುವನೇಶ್ವರಿ, ಜ್ಯೋತಿ, ಚೈತ್ರಾ, ಬಿ.ಟಿ. ನಾಗರಾಜ, ಕೆ. ನಾಗರಾಜ, ಎಸ್. ಆಶಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ‘ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಭಾರತೀಯ ಸಂಸ್ಕೃತಿ, ಆದರ್ಶ, ನೈತಿಕ ಮೌಲ್ಯ ಹಾಗೂ ಸಂಸ್ಕಾರ ಬೋಧಿಸುವಂತಹ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ’ ಎಂದು ವಕೀಲರಾದ ನಾಗರಾಜ್ ಗುತ್ತೇದಾರ್ ಹೇಳಿದರು.</p>.<p>ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಿಬಿಎಸ್ಇ ವಿಭಾಗದಿಂದ ಹಮ್ಮಿಕೊಂಡಿದ್ದ ಸಂಕಲ್ಪ ದಿವಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಶಿಕ್ಷಣ ಸಂಸ್ಥೆಗಳು ಕೇವಲ ಪುಸ್ತಕಕ್ಕೆ ಸಂಬಂಧಿತ ಶಿಕ್ಷಣ ನೀಡಬಾರದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಗಮನ ಹರಿಸಬೇಕು’ ಎಂದರು.</p>.<p>ಶಾಲೆಯ ಮುಖ್ಯ ಶಿಕ್ಷಕ ಎಚ್.ಎ. ರಂಗನಾಥ ಮಾತನಾಡಿದರು. ಈ ವೇಳೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಶಿಕ್ಷಕರಾದ ವಿನಾಯಕ ಭಟ್ಟ, ಮಧುಕರ್, ಶಿವಶಂಕ್ರಯ್ಯ, ರೇಣುಕಾ, ಭುವನೇಶ್ವರಿ, ಜ್ಯೋತಿ, ಚೈತ್ರಾ, ಬಿ.ಟಿ. ನಾಗರಾಜ, ಕೆ. ನಾಗರಾಜ, ಎಸ್. ಆಶಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>