<p><strong>ಬಳ್ಳಾರಿ</strong>: ಬಳ್ಳಾರಿ ಹೊರವಲಯದ ಕೊಳಗಲ್ಲು ಬಳಿ ನಿರ್ಮಿಸಲು ಉದ್ದೇಶಿಸಿರುವ ಮೆಗಾ ಡೇರಿಗೆ ಹೆಚ್ಚುವರಿ ₹80 ಕೋಟಿ ಅನುದಾನ ಮಂಜೂರು ಮಾಡಲು ಕೆಎಂಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ರಾಬಕೊವಿ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್ ನೇತೃತ್ವದ ನಿಯೋಗವು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.</p>.<p>‘ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ಅವರನ್ನು ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ರಾಬಕೊವಿ) ನಿಯೋಗವು ಸೋಮವಾರ ಭೇಟಿಯಾಯಿತು.</p>.<p>ಕೊಪ್ಪಳದ ಬೂದಗುಂಪ ಡೇರಿಯಲ್ಲಿ ಬ್ಲಾಸ್ಟ್ ಚಿಲ್ಲಿಂಗ್ ಹಾಗೂ ಪನ್ನೀರ್ ತಯಾರಕಾ ಘಟಕ ನಿರ್ಮಾಣ ಕುರಿತು ಮಾತುಕತೆ ನಡೆಸಲಾಯಿತು. ಮೇಘಾ ಡೇರಿ ನಿರ್ಮಾಣಕ್ಕೆ ಕರ್ನಾಟಕ ಗಣಿಗಾರಿಕೆ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್ಸಿ) ಈಗಾಗಲೇ ₹80 ಕೋಟಿ ಅನುದಾನ ಮೀಸಲಿಟ್ಟಿದೆ. ಇನ್ನೂ ಹೆಚ್ಚುವರಿಯಾಗಿ ₹80 ಕೋಟಿ ಅನುದಾನ ಮಂಜೂರು ಮಾಡಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಕರ್ನಾಟಕ ಹಾಲು ಮಂಡಳಿ ವತಿಯಿಂದ ಪ್ರಸ್ತಾವನೆ ಸಲ್ಲಿಸಬೇಕು ಎಂದು ನಿಯೋಗ ಮನವಿ ಮಾಡಿತು. </p>.<p>ಮುಂದಿನ ಆರ್ಥಿಕ ವರ್ಷದಲ್ಲಿ ಕೊಪ್ಪಳದಲ್ಲಿ ಹಾಲು ಸಂಗ್ರಹಣಾ ಘಟಕ ಸ್ಥಾಪನೆ ಮಾಡಲು ರಾಬಕೊವಿ ಯೋಜನೆ ರೂಪಿಸಿದ್ದು, ಈ ಕುರಿತು ಚರ್ಚೆ ನಡೆದಿದೆ. ಹಾಲು ಉತ್ಪಾದಕರಿಗೆ ಪ್ರತಿ ತಿಂಗಳ ಅವಧಿಯೊಳಗೆ ಹಣ ಪಾವತಿ ಮಾಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬಳ್ಳಾರಿ ಹೊರವಲಯದ ಕೊಳಗಲ್ಲು ಬಳಿ ನಿರ್ಮಿಸಲು ಉದ್ದೇಶಿಸಿರುವ ಮೆಗಾ ಡೇರಿಗೆ ಹೆಚ್ಚುವರಿ ₹80 ಕೋಟಿ ಅನುದಾನ ಮಂಜೂರು ಮಾಡಲು ಕೆಎಂಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ರಾಬಕೊವಿ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್ ನೇತೃತ್ವದ ನಿಯೋಗವು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.</p>.<p>‘ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ಅವರನ್ನು ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ರಾಬಕೊವಿ) ನಿಯೋಗವು ಸೋಮವಾರ ಭೇಟಿಯಾಯಿತು.</p>.<p>ಕೊಪ್ಪಳದ ಬೂದಗುಂಪ ಡೇರಿಯಲ್ಲಿ ಬ್ಲಾಸ್ಟ್ ಚಿಲ್ಲಿಂಗ್ ಹಾಗೂ ಪನ್ನೀರ್ ತಯಾರಕಾ ಘಟಕ ನಿರ್ಮಾಣ ಕುರಿತು ಮಾತುಕತೆ ನಡೆಸಲಾಯಿತು. ಮೇಘಾ ಡೇರಿ ನಿರ್ಮಾಣಕ್ಕೆ ಕರ್ನಾಟಕ ಗಣಿಗಾರಿಕೆ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್ಸಿ) ಈಗಾಗಲೇ ₹80 ಕೋಟಿ ಅನುದಾನ ಮೀಸಲಿಟ್ಟಿದೆ. ಇನ್ನೂ ಹೆಚ್ಚುವರಿಯಾಗಿ ₹80 ಕೋಟಿ ಅನುದಾನ ಮಂಜೂರು ಮಾಡಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಕರ್ನಾಟಕ ಹಾಲು ಮಂಡಳಿ ವತಿಯಿಂದ ಪ್ರಸ್ತಾವನೆ ಸಲ್ಲಿಸಬೇಕು ಎಂದು ನಿಯೋಗ ಮನವಿ ಮಾಡಿತು. </p>.<p>ಮುಂದಿನ ಆರ್ಥಿಕ ವರ್ಷದಲ್ಲಿ ಕೊಪ್ಪಳದಲ್ಲಿ ಹಾಲು ಸಂಗ್ರಹಣಾ ಘಟಕ ಸ್ಥಾಪನೆ ಮಾಡಲು ರಾಬಕೊವಿ ಯೋಜನೆ ರೂಪಿಸಿದ್ದು, ಈ ಕುರಿತು ಚರ್ಚೆ ನಡೆದಿದೆ. ಹಾಲು ಉತ್ಪಾದಕರಿಗೆ ಪ್ರತಿ ತಿಂಗಳ ಅವಧಿಯೊಳಗೆ ಹಣ ಪಾವತಿ ಮಾಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>