<p><strong>ಹೊಸಪೇಟೆ: </strong>ಸ್ವಚ್ಛ ಭಾರತ ಆಂದೋಲನದ ಯಶಸ್ವಿಗೆ ಎಲ್ಲ ಸರ್ಕಾರಿ ಕಚೇರಿಗಳು ಕೈಜೋಡಿಸಬೇಕೆಂದುಆದರ್ಶ ಮಹಿಳಾ ಸಂಘ ಮನವಿ ಮಾಡಿದೆ.</p>.<p>ಈ ಸಂಬಂಧ ಸಂಘದ ಸದಸ್ಯರು ಗುರುವಾರ ನಗರಸಭೆ ಪೌರಾಯುಕ್ತ ವಿ. ರಮೇಶ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಿದರು.</p>.<p>‘ಸ್ವಚ್ಛ ಭಾರತ ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿದರಷ್ಟೇ ಯಶಸ್ವಿಯಾಗಲು ಸಾಧ್ಯ. ಅದರಲ್ಲೂ ಸರ್ಕಾರಿ ಕಚೇರಿಗಳ ಪಾತ್ರ ಮಹತ್ವದ್ದಾಗಿದೆ. ದೈನಂದಿನ ಕೆಲಸಗಳ ಜತೆಗೆ ಸುತ್ತಮುತ್ತಲಿನ ಪರಿಸರ, ಜನಜೀವನದ ಸಮಗ್ರ ಅಭಿವೃದ್ಧಿಗೆ ಒತ್ತು ಕೊಡುವ ಕೆಲಸ ಸರ್ಕಾರಿ ಕಚೇರಿಗಳು ಮಾಡಬೇಕು’ ಎಂದು ಕೋರಿದರು.</p>.<p>ಸಂಘದ ಅಧ್ಯಕ್ಷೆ ಸುನೀತಾ, ಸದಸ್ಯರಾದ ಲಕ್ಷ್ಮಿ, ವಿಕಾಸ ಯುವಕ ಮಂಡಳ ಅಧ್ಯಕ್ಷ ಗೋಸಲ ಬಸವರಾಜ್, ಸದಸ್ಯರಾದ ನಾಗರಾಜ್, ರಿಯಾಜ್, ಪ್ರಶಾಂತ, ಸುರೇಶ್, ಪವನ್, ಅಕ್ಷಯ್, ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಸ್ವಚ್ಛ ಭಾರತ ಆಂದೋಲನದ ಯಶಸ್ವಿಗೆ ಎಲ್ಲ ಸರ್ಕಾರಿ ಕಚೇರಿಗಳು ಕೈಜೋಡಿಸಬೇಕೆಂದುಆದರ್ಶ ಮಹಿಳಾ ಸಂಘ ಮನವಿ ಮಾಡಿದೆ.</p>.<p>ಈ ಸಂಬಂಧ ಸಂಘದ ಸದಸ್ಯರು ಗುರುವಾರ ನಗರಸಭೆ ಪೌರಾಯುಕ್ತ ವಿ. ರಮೇಶ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಿದರು.</p>.<p>‘ಸ್ವಚ್ಛ ಭಾರತ ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿದರಷ್ಟೇ ಯಶಸ್ವಿಯಾಗಲು ಸಾಧ್ಯ. ಅದರಲ್ಲೂ ಸರ್ಕಾರಿ ಕಚೇರಿಗಳ ಪಾತ್ರ ಮಹತ್ವದ್ದಾಗಿದೆ. ದೈನಂದಿನ ಕೆಲಸಗಳ ಜತೆಗೆ ಸುತ್ತಮುತ್ತಲಿನ ಪರಿಸರ, ಜನಜೀವನದ ಸಮಗ್ರ ಅಭಿವೃದ್ಧಿಗೆ ಒತ್ತು ಕೊಡುವ ಕೆಲಸ ಸರ್ಕಾರಿ ಕಚೇರಿಗಳು ಮಾಡಬೇಕು’ ಎಂದು ಕೋರಿದರು.</p>.<p>ಸಂಘದ ಅಧ್ಯಕ್ಷೆ ಸುನೀತಾ, ಸದಸ್ಯರಾದ ಲಕ್ಷ್ಮಿ, ವಿಕಾಸ ಯುವಕ ಮಂಡಳ ಅಧ್ಯಕ್ಷ ಗೋಸಲ ಬಸವರಾಜ್, ಸದಸ್ಯರಾದ ನಾಗರಾಜ್, ರಿಯಾಜ್, ಪ್ರಶಾಂತ, ಸುರೇಶ್, ಪವನ್, ಅಕ್ಷಯ್, ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>