<p>ಕಂಪ್ಲಿ: ಸರ್ಕಾರದ ವಿವಿಧ ವಸತಿ ಶಾಲೆಗಳ ಆಯ್ಕೆಗೆ ನಡೆಯುವ ಪ್ರವೇಶ ಪರೀಕ್ಷೆಯಲ್ಲಿ ತಾಲ್ಲೂಕಿನ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿದರೂ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು.</p>.<p>ಈ ಕುರಿತ ಮನವಿಪತ್ರವನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಾಗರಾಜ್ ಎಸ್.ನಾಗನದೊಡ್ಡಿ ಅವರಿಗೆ ಗುರುವಾರ ಸಲ್ಲಿಸಿ ಅವರು ಮಾತನಾಡಿದರು.</p>.<p>ಕಂಪ್ಲಿಯಲ್ಲಿ ವಸತಿ ಶಾಲೆಗಳು ಇಲ್ಲದ ಕಾರಣ ಬೇರೆ ತಾಲ್ಲೂಕಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಬೇಕಿದೆ. ಅಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 75ರಷ್ಟು ಮೀಸಲು ಇರುವುದರಿಂದ ಅವರು ಕಡಿಮೆ ಅಂಕಗಳಿಸಿದರೂ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.</p>.<p>ಆದರೆ, ಕಂಪ್ಲಿ ತಾಲ್ಲೂಕಿನ ವಿದ್ಯಾರ್ಥಿಗಳು ವಸತಿ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ಶೇ 60ಕ್ಕೂ ಅಧಿಕ ಅಂಕಗಳಿಸಿದರೂ ಆಯ್ಕೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನಲ್ಲಿ ಆರ್ಥಿಕವಾಗಿ ಹಿಂದುಳಿದ, ಕೂಲಿ ಕಾರ್ಮಿಕ, ಕೃಷಿಕ, ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು ಈ ಬಾರಿ ಹೆಚ್ಚು ಅಂಕ ಗಳಿಸಿದ್ದರೂ ವಸತಿ ಶಾಲೆಗಳ ಪ್ರವೇಶದಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ವಿಶೇಷವಾಗಿ ಗಮನಹರಿಸಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಕಂಪ್ಲಿ ಭಾಗದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.</p>.<p>ಈ ತಾಂತ್ರಿಕ ಸಮಸ್ಯೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಮರುಕಳಿಸದಿರಲು ತಾಲ್ಲೂಕಿನಲ್ಲಿ ಎರಡು ವಸತಿ ಶಾಲೆ ಆರಂಭಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಕೆ.ಬಿ. ಮಂಜುನಾಥ, ಪಿ.ಸಾಯಿಬಾಷ, ರಾಜ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ಸರ್ಕಾರದ ವಿವಿಧ ವಸತಿ ಶಾಲೆಗಳ ಆಯ್ಕೆಗೆ ನಡೆಯುವ ಪ್ರವೇಶ ಪರೀಕ್ಷೆಯಲ್ಲಿ ತಾಲ್ಲೂಕಿನ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿದರೂ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು.</p>.<p>ಈ ಕುರಿತ ಮನವಿಪತ್ರವನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಾಗರಾಜ್ ಎಸ್.ನಾಗನದೊಡ್ಡಿ ಅವರಿಗೆ ಗುರುವಾರ ಸಲ್ಲಿಸಿ ಅವರು ಮಾತನಾಡಿದರು.</p>.<p>ಕಂಪ್ಲಿಯಲ್ಲಿ ವಸತಿ ಶಾಲೆಗಳು ಇಲ್ಲದ ಕಾರಣ ಬೇರೆ ತಾಲ್ಲೂಕಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಬೇಕಿದೆ. ಅಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 75ರಷ್ಟು ಮೀಸಲು ಇರುವುದರಿಂದ ಅವರು ಕಡಿಮೆ ಅಂಕಗಳಿಸಿದರೂ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.</p>.<p>ಆದರೆ, ಕಂಪ್ಲಿ ತಾಲ್ಲೂಕಿನ ವಿದ್ಯಾರ್ಥಿಗಳು ವಸತಿ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ಶೇ 60ಕ್ಕೂ ಅಧಿಕ ಅಂಕಗಳಿಸಿದರೂ ಆಯ್ಕೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನಲ್ಲಿ ಆರ್ಥಿಕವಾಗಿ ಹಿಂದುಳಿದ, ಕೂಲಿ ಕಾರ್ಮಿಕ, ಕೃಷಿಕ, ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು ಈ ಬಾರಿ ಹೆಚ್ಚು ಅಂಕ ಗಳಿಸಿದ್ದರೂ ವಸತಿ ಶಾಲೆಗಳ ಪ್ರವೇಶದಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ವಿಶೇಷವಾಗಿ ಗಮನಹರಿಸಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಕಂಪ್ಲಿ ಭಾಗದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.</p>.<p>ಈ ತಾಂತ್ರಿಕ ಸಮಸ್ಯೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಮರುಕಳಿಸದಿರಲು ತಾಲ್ಲೂಕಿನಲ್ಲಿ ಎರಡು ವಸತಿ ಶಾಲೆ ಆರಂಭಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಕೆ.ಬಿ. ಮಂಜುನಾಥ, ಪಿ.ಸಾಯಿಬಾಷ, ರಾಜ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>