<p>ಸಿರುಗುಪ್ಪ/ ತೆಕ್ಕಲಕೋಟೆ : ಸಿರುಗುಪ್ಪ ತಾಲ್ಲೂಕಿನ ಬಗ್ಗೂರು ಗ್ರಾಮದಲ್ಲಿನ ರಸ್ತೆ ಕಾಮಗಾರಿ ಅರೆಬರೆಯಾಗಿರುವ ಕುರಿತು ‘ಪ್ರಜಾವಾಣಿ’ ವರದಿ ಈಚೆಗೆ ವರದಿ ಪ್ರಕಟಿಸಿದ್ದಕ್ಕೆ ಮುಖ್ಯಮಂತ್ರಿ ಕಚೇರಿ ಸ್ಪಂದಿಸಿದೆ.</p>.<p>ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ‘ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>‘ಈ ರಸ್ತೆಯು ಬಗ್ಗೂರು ಕ್ರಾಸ್ನಿಂದ ಅರಳಿಗನೂರು ಗ್ರಾಮದವರೆಗೆ 5.24 ಕಿ.ಮೀ ಉದ್ದವಿದೆ. ಆರಂಭದ ಸರಪಳಿಯಿಂದ 0.30 ಕಿ.ಮೀ ವರೆಗೆ ರಸ್ತೆಯನ್ನು ಈ ಹಿಂದೆ ಮಾಡಲಾಗಿದೆ. ಉಳಿದ ರಸ್ತೆ ಮಾರ್ಗದಲ್ಲಿ ಸಮಸ್ಯೆಯಿದ್ದು, ಖಾಸಗಿ ಜಮೀನಿನಲ್ಲಿ ಹಾದು ಹೋಗುವ ಕಾರಣ ಕಾಮಗಾರಿಯನ್ನು ಕೈಗೊಳ್ಳದಂತೆ ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿ ಮರು ಪರಿಶೀಲನೆ ನಡೆಸಲಾಗಿದ್ದು, ಈ ಭಾಗದ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಈಚೆಗೆ ಸರ್ವೆ ಮಾಡಲಾಗಿದೆ. ಉಳಿದಂತೆ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಬಳ್ಳಾರಿ ಯೋಜನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರುಗುಪ್ಪ/ ತೆಕ್ಕಲಕೋಟೆ : ಸಿರುಗುಪ್ಪ ತಾಲ್ಲೂಕಿನ ಬಗ್ಗೂರು ಗ್ರಾಮದಲ್ಲಿನ ರಸ್ತೆ ಕಾಮಗಾರಿ ಅರೆಬರೆಯಾಗಿರುವ ಕುರಿತು ‘ಪ್ರಜಾವಾಣಿ’ ವರದಿ ಈಚೆಗೆ ವರದಿ ಪ್ರಕಟಿಸಿದ್ದಕ್ಕೆ ಮುಖ್ಯಮಂತ್ರಿ ಕಚೇರಿ ಸ್ಪಂದಿಸಿದೆ.</p>.<p>ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ‘ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>‘ಈ ರಸ್ತೆಯು ಬಗ್ಗೂರು ಕ್ರಾಸ್ನಿಂದ ಅರಳಿಗನೂರು ಗ್ರಾಮದವರೆಗೆ 5.24 ಕಿ.ಮೀ ಉದ್ದವಿದೆ. ಆರಂಭದ ಸರಪಳಿಯಿಂದ 0.30 ಕಿ.ಮೀ ವರೆಗೆ ರಸ್ತೆಯನ್ನು ಈ ಹಿಂದೆ ಮಾಡಲಾಗಿದೆ. ಉಳಿದ ರಸ್ತೆ ಮಾರ್ಗದಲ್ಲಿ ಸಮಸ್ಯೆಯಿದ್ದು, ಖಾಸಗಿ ಜಮೀನಿನಲ್ಲಿ ಹಾದು ಹೋಗುವ ಕಾರಣ ಕಾಮಗಾರಿಯನ್ನು ಕೈಗೊಳ್ಳದಂತೆ ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿ ಮರು ಪರಿಶೀಲನೆ ನಡೆಸಲಾಗಿದ್ದು, ಈ ಭಾಗದ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಈಚೆಗೆ ಸರ್ವೆ ಮಾಡಲಾಗಿದೆ. ಉಳಿದಂತೆ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಬಳ್ಳಾರಿ ಯೋಜನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>