ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ಏಕಶಿಲಾ ಬೆಟ್ಟಕ್ಕೆ ರೋಪ್‌ ವೇ: ತಜ್ಞರಿಂದ ಡ್ರೋಣ್‌ ಸಮೀಕ್ಷೆ 

Published 7 ಫೆಬ್ರುವರಿ 2024, 14:01 IST
Last Updated 7 ಫೆಬ್ರುವರಿ 2024, 14:01 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿಯ ಏಕಶಿಲಾ ಬೆಟ್ಟಕ್ಕೆ ‘ರೋಪ್ ವೇ’ ಅಳವಡಿಸುವ ಸಂಬಂಧ ಮುಂಬೈ ಮೂಲದ ತಜ್ಞರ ತಂಡವೊಂದು ಇತ್ತೀಚೆಗೆ ಸಮೀಕ್ಷೆ ನಡೆಸಿ ಹೋಗಿದೆ. 

’ಟಿಪ್ಪು ಸುಲ್ತಾನ್‌ ಕೋಟೆ‘ಗೆ ಎಂದೂ ಕರೆಯಲಾಗುವ ಬೆಟ್ಟಕ್ಕೆ ರೋಪ್‌ವೇ ಅಳವಡಿಸುವ ಸಂಬಂಧ ಜಿಲ್ಲಾಡಳಿತ ಮತ್ತು ಬಳ್ಳಾರಿ ನಗರ ಶಾಸಕ ನಾರಾ ಭರತ್‌ ರೆಡ್ಡಿ ಅವರು ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆದಿದ್ದರು. ಜತೆಗೆ, ಕಳೆದ ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಶಾಸಕ ಭರತ್‌ ರೆಡ್ಡಿ ಈ ವಿಷಯವನ್ನು ಸದನದಲ್ಲಿಯೇ ಪ್ರಸ್ತಾಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಪ್ರವಾಸೋದ್ಯಮ ಸಚಿವರು ಅಧ್ಯಯನಕ್ಕಾಗಿ ಇಲಾಖೆಯಿಂದ ತಜ್ಞರ ತಂಡವನ್ನು ಕಳುಹಿಸುವುದಾಗಿ ತಿಳಿಸಿದ್ದರು. ಅದರಂತೆ ಅಧ್ಯಯನ ತಂಡವು ಫೆ.3ರಂದು ರಂದು ಬಳ್ಳಾರಿಗೆ ಭೇಟಿ ನೀಡಿದ್ದು, 2 ದಿನಗಳ ಕಾಲ ಅಧ್ಯಾಯನ ನಡೆಸಿದೆ. ಕೋಟೆಯ ಡ್ರೋಣ್ ವಿಡಿಯೊ ಮಾಡಿರುವ ತಂಡ, ಸ್ಥಿರ ಚಿತ್ರಗಳನ್ನೂ ಸಂಗ್ರಹಿಸಿಕೊಂಡಿದೆ. 

ಮುಂಬೈ ಮೂಲದ ಖಾಸಗಿ ಕಂಪನಿಯ ಭರತ್‌ ಜೈನ್‌ ಎಂಬುವವರ ನೇತೃತ್ವದಲ್ಲಿ ಸಮೀಕ್ಷೆ ನಡೆದಿದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT