<p><strong>ಹರಪನಹಳ್ಳಿ:</strong> ‘ದೇಶದಲ್ಲಿ ಒಂದು ಬಾವುಟ, ಒಂದು ಸಂವಿಧಾನ ಇರಬೇಕು ಎಂದು ಜನ ಸಂಘದ ಸಂಸ್ಥಾಪಕ ಶಾಮ ಪ್ರಸಾದ್ ಮುಖರ್ಜಿ ಅವರು ಪ್ರತಿಪಾದಿಸಿದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಂತಹ ಮಹನೀಯರನ್ನು ನಾವೆಲ್ಲ ಸ್ಮರಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.</p>.<p>ಪಟ್ಟಣದ ತೆಲುಗರ ಓಣಿ ಬಿಜೆಪಿ ಕಚೇರಿಯಲ್ಲಿ ಭಾನುವಾರ ತಾಲ್ಲೂಕು ಮಂಡಲ ಆಯೋಜಿಸಿದ್ದ ಶಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಹೊರಗಿನಿಂದ ಬಂದು ಹರಪನಹಳ್ಳಿ ಕ್ಷೇತ್ರದ ಚುನಾವಣೆ ಸೋತವರು ತಮ್ಮ ಪೆಟ್ಟಿಗೆ ಮುಚ್ಚಿಕೊಂಡು ಹೋಗುತ್ತಾರೆ ಎಂದು ಇಲ್ಲಿಯ ಮುಖಂಡರು ತಿಳಿಸಿದರು. ನಿಮ್ಮಲ್ಲಿಯೇ ಉತ್ತಮ ನಾಯಕರನ್ನು ಸೃಷ್ಟಿಸಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಂಡು, ಅವರಿವರ ಬಳಿ ಹೋಗುವುದನ್ನು ನಿಲ್ಲಿಸಿ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಕೆ. ಲಕ್ಷ್ಮಣ್, ಮುಖಂಡರಾದ ಜಿ.ನಂಜನಗೌಡ್ರು, ಆರುಂಡಿನಾಗರಾಜ್, ಬಾಗಳಿ ಕೊಟ್ರೇಶಪ್ಪ, ಕಣಿವಿಹಳ್ಳಿ ಮಂಜುನಾಥ, ಓಂಕಾರ ಗೌಡ, ಎಂ.ಪಿ.ನಾಯ್ಕ, ಮಂಜನಾಯ್ಕ, ಮೈದೂರು ಮಲ್ಲಿಕಾರ್ಜುನ್, ಕೆ.ಲಿಂಗಾನಂದ, ರವಿ ಬಾರಿಕರ, ಕಡೆಮನಿ ಸಂಗಮೇಶ, ಸಪ್ನ, ಪದ್ಮಾವತಿ, ಬಾಗಳಿ ಜಗದೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ‘ದೇಶದಲ್ಲಿ ಒಂದು ಬಾವುಟ, ಒಂದು ಸಂವಿಧಾನ ಇರಬೇಕು ಎಂದು ಜನ ಸಂಘದ ಸಂಸ್ಥಾಪಕ ಶಾಮ ಪ್ರಸಾದ್ ಮುಖರ್ಜಿ ಅವರು ಪ್ರತಿಪಾದಿಸಿದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಂತಹ ಮಹನೀಯರನ್ನು ನಾವೆಲ್ಲ ಸ್ಮರಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.</p>.<p>ಪಟ್ಟಣದ ತೆಲುಗರ ಓಣಿ ಬಿಜೆಪಿ ಕಚೇರಿಯಲ್ಲಿ ಭಾನುವಾರ ತಾಲ್ಲೂಕು ಮಂಡಲ ಆಯೋಜಿಸಿದ್ದ ಶಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಹೊರಗಿನಿಂದ ಬಂದು ಹರಪನಹಳ್ಳಿ ಕ್ಷೇತ್ರದ ಚುನಾವಣೆ ಸೋತವರು ತಮ್ಮ ಪೆಟ್ಟಿಗೆ ಮುಚ್ಚಿಕೊಂಡು ಹೋಗುತ್ತಾರೆ ಎಂದು ಇಲ್ಲಿಯ ಮುಖಂಡರು ತಿಳಿಸಿದರು. ನಿಮ್ಮಲ್ಲಿಯೇ ಉತ್ತಮ ನಾಯಕರನ್ನು ಸೃಷ್ಟಿಸಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಂಡು, ಅವರಿವರ ಬಳಿ ಹೋಗುವುದನ್ನು ನಿಲ್ಲಿಸಿ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಕೆ. ಲಕ್ಷ್ಮಣ್, ಮುಖಂಡರಾದ ಜಿ.ನಂಜನಗೌಡ್ರು, ಆರುಂಡಿನಾಗರಾಜ್, ಬಾಗಳಿ ಕೊಟ್ರೇಶಪ್ಪ, ಕಣಿವಿಹಳ್ಳಿ ಮಂಜುನಾಥ, ಓಂಕಾರ ಗೌಡ, ಎಂ.ಪಿ.ನಾಯ್ಕ, ಮಂಜನಾಯ್ಕ, ಮೈದೂರು ಮಲ್ಲಿಕಾರ್ಜುನ್, ಕೆ.ಲಿಂಗಾನಂದ, ರವಿ ಬಾರಿಕರ, ಕಡೆಮನಿ ಸಂಗಮೇಶ, ಸಪ್ನ, ಪದ್ಮಾವತಿ, ಬಾಗಳಿ ಜಗದೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>