<p><strong>ಬಳ್ಳಾರಿ:</strong> ‘ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಕಾನೂನಾತ್ಮಕವಾಗಿ ಸಿಗಬೇಕಾದ ಎಲ್ಲ ಸೌಕರ್ಯ, ಸೌಲಭ್ಯಗಳನ್ನು ಪೂರೈಸುವುದು ಆಯಾ ನಗರ ಸ್ಥಳೀಯ- ಸಂಸ್ಥೆಗಳ ಮುಖ್ಯಾಧಿಕಾರಿಗಳ ಕರ್ತವ್ಯ’ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಹೇಳಿದರು.</p>.<p>ಶುಕ್ರವಾರ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ/ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ವಸತಿ ಮತ್ತು ಪುನರ್ವಸತಿ ಹಾಗೂ ಪೌರ ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳ ಜವಾಬ್ದಾರಿ’ ಎಂದು ತಿಳಿಸಿದರು.</p>.<p>‘ಮ್ಯಾನ್ಯುವೆಲ್ ಸ್ಯಾವೆಂಜರ್ಸ್ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತಹ ಪ್ರವೇಶ ಶುಲ್ಕ, ವಿದ್ಯಾರ್ಥಿ ವೇತನ, ಲ್ಯಾಪ್ ಟಾಪ್ ವಿತರಣೆ ಹಾಗೂ ಇತರೆ ಸೌಲಭ್ಯ ಒದಗಿಸಲು ಮುತುವರ್ಜಿ ವಹಿಸಬೇಕು’ ಎಂದರು.</p>.<p><strong>ಅರಿವು ಮೂಡಿಸಿ</strong>: ‘ಜಿಲ್ಲಾ ವ್ಯಾಪ್ತಿಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ಸುರಕ್ಷತೆಗಾಗಿ ಮತ್ತು ಆರೋಗ್ಯ ಹಿತದೃಷ್ಟಿಯಿಂದ ತಪ್ಪದೇ ಸುರಕ್ಷಾ ಪರಿಕರಗಳನ್ನು ಧರಿಸಿ ಕಾರ್ಯನಿರ್ವಹಿಸಲು ಸೂಚಿಸಬೇಕು. ಈ ಕುರಿತು ಪರಿಸರ ಎಂಜಿನಿಯರ್ ಮೇಲ್ವಿಚಾರಣೆ ನಡೆಸಬೇಕು’ ಎಂದು ಸೂಚಿಸಿದರು. </p>.<p>ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸದಸ್ಯ ಕಂದಕೂರ ರಾಮುಡು ಮಾತನಾಡಿ, ‘ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ರಹಿತ ಪೌರಕಾರ್ಮಿಕರಿಗೆ ಕಳೆದ 10 ವರ್ಷಗಳಿಂದ ಯಾವುದೇ ನಿವೇಶನ, ವಸತಿ ಸೌಲಭ್ಯ ನೀಡಿಲ್ಲ. ಆದರೆ ಅದೇ ಸ್ಥಾನದಲ್ಲಿರುವ ಅಧಿಕಾರಿಗಳು ಮಾತ್ರ ಮುಂಬಡ್ತಿ ಹೊಂದುತ್ತಿದ್ದಾರೆಯೇ ವಿನಃ ಪೌರಕಾರ್ಮಿಕರಿಗೆ ಮಾತ್ರ ಸೌಲಭ್ಯ ನೀಡಲಾಗುತ್ತಿಲ್ಲ’ ಎಂದು ಸಭೆಗೆ ತಿಳಿಸಿದರು.</p>.<p>ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಪ್ರತಿಕ್ರಿಯಿಸಿ, ‘ನಗರದಲ್ಲಿ ಪಾಲಿಕೆ ಒಡೆತನದ ಎಲ್ಲಾ ಜಾಗಗಳನ್ನು ಒತ್ತುವರಿ ಮಾಡಲಾಗುತ್ತಿದೆ. ಆದರೂ ಅವರಿಗೆ ನಿವೇಶನ ಸೌಲಭ್ಯ ಒದಗಿಸಲಾಗುತ್ತಿಲ್ಲ. ನಗರದಲ್ಲಿ ಖಾಲಿ ಜಾಗಗಳ ಮಾಹಿತಿಯನ್ನು ಕೂಡಲೇ ನೀಡಬೇಕು. ಜಿಲ್ಲೆಯ ವಿವಿಧ ನಗರ ಸ್ಥಳೀಯ-ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸೂರು ಕಲ್ಪಿಸುವ ಆದ್ಯತೆ ಅಧಿಕಾರಿಗಳದ್ದಾಗಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಮತ್ತು ಇತರ ಅಧಿಕಾರಿಗಳು ಇದ್ದರು.</p>.<h2>10 ತಿಂಗಳಿಂದ ವೇತನ ಇಲ್ಲ</h2><p> ‘ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 4 ಪೌರಕಾರ್ಮಿಕರಿಂದ ಕೆಲಸ ಮಾಡಿಸಿಕೊಂಡು ಕಳೆದ 10 ತಿಂಗಳಿಂದ ವೇತನ ಪಾವತಿ ನೀಡಿಲ್ಲ. ಬೆಳಗಿನ ಉಪಹಾರ ಸಹ ನೀಡಿಲ್ಲ ಮತ್ತು ಅವರಿಂದ ಹಣ ವಸೂಲಿ ಮಾಡಲಾಗಿದೆ’ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕಂದಕೂರು ರಾಮುಡು ಸಭೆಯ ಗಮನಕ್ಕೆ ತಂದರು. </p><p>ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿ ‘ಪೌರಕಾರ್ಮಿಕರು ಸಫಾಯಿ ಕರ್ಮಚಾರಿಗಳು ಲೋಡರ್ಸ್ ಕ್ಲೀನರ್ಸ್ ವಾಹನ ಚಾಲಕರಿಗೆ ನಿಗದಿತ ವೇಳೆಯೊಳಗೆ ವೇತನ ಪಾವತಿಸಿ ವೇತನ ಸ್ಲಿಪ್ ನೀಡಬೇಕು. ಪಿಎಫ್ ಮತ್ತು ಇಎಸ್ಐ ವಂತಿಕೆ ಸರಿಯಾಗಿ ಪಾವತಿಯಾಗುತ್ತಿರುವ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಮಾಸ್ಟರ್ ಆರೋಗ್ಯ ತಪಾಸಣೆ ಕಾಲ ಕಾಲಕ್ಕೆ ಮಾಡಿಸಬೇಕು’ ಎಂದು ತಿಳಿಸಿದರು. </p><p>‘ಮುಂದಿನ ಸಭೆಯಲ್ಲಿ ಸಮಿತಿಯ ಸದಸ್ಯರಾದ ವಿವಿಧ ಇಲಾಖೆಗಳ ಮುಖ್ಯಸ್ಥರೇ ಸಭೆಗೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಸೂಚನೆ ನೀಡಿದರು.</p>
<p><strong>ಬಳ್ಳಾರಿ:</strong> ‘ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಕಾನೂನಾತ್ಮಕವಾಗಿ ಸಿಗಬೇಕಾದ ಎಲ್ಲ ಸೌಕರ್ಯ, ಸೌಲಭ್ಯಗಳನ್ನು ಪೂರೈಸುವುದು ಆಯಾ ನಗರ ಸ್ಥಳೀಯ- ಸಂಸ್ಥೆಗಳ ಮುಖ್ಯಾಧಿಕಾರಿಗಳ ಕರ್ತವ್ಯ’ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಹೇಳಿದರು.</p>.<p>ಶುಕ್ರವಾರ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ/ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ವಸತಿ ಮತ್ತು ಪುನರ್ವಸತಿ ಹಾಗೂ ಪೌರ ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳ ಜವಾಬ್ದಾರಿ’ ಎಂದು ತಿಳಿಸಿದರು.</p>.<p>‘ಮ್ಯಾನ್ಯುವೆಲ್ ಸ್ಯಾವೆಂಜರ್ಸ್ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತಹ ಪ್ರವೇಶ ಶುಲ್ಕ, ವಿದ್ಯಾರ್ಥಿ ವೇತನ, ಲ್ಯಾಪ್ ಟಾಪ್ ವಿತರಣೆ ಹಾಗೂ ಇತರೆ ಸೌಲಭ್ಯ ಒದಗಿಸಲು ಮುತುವರ್ಜಿ ವಹಿಸಬೇಕು’ ಎಂದರು.</p>.<p><strong>ಅರಿವು ಮೂಡಿಸಿ</strong>: ‘ಜಿಲ್ಲಾ ವ್ಯಾಪ್ತಿಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ಸುರಕ್ಷತೆಗಾಗಿ ಮತ್ತು ಆರೋಗ್ಯ ಹಿತದೃಷ್ಟಿಯಿಂದ ತಪ್ಪದೇ ಸುರಕ್ಷಾ ಪರಿಕರಗಳನ್ನು ಧರಿಸಿ ಕಾರ್ಯನಿರ್ವಹಿಸಲು ಸೂಚಿಸಬೇಕು. ಈ ಕುರಿತು ಪರಿಸರ ಎಂಜಿನಿಯರ್ ಮೇಲ್ವಿಚಾರಣೆ ನಡೆಸಬೇಕು’ ಎಂದು ಸೂಚಿಸಿದರು. </p>.<p>ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸದಸ್ಯ ಕಂದಕೂರ ರಾಮುಡು ಮಾತನಾಡಿ, ‘ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ರಹಿತ ಪೌರಕಾರ್ಮಿಕರಿಗೆ ಕಳೆದ 10 ವರ್ಷಗಳಿಂದ ಯಾವುದೇ ನಿವೇಶನ, ವಸತಿ ಸೌಲಭ್ಯ ನೀಡಿಲ್ಲ. ಆದರೆ ಅದೇ ಸ್ಥಾನದಲ್ಲಿರುವ ಅಧಿಕಾರಿಗಳು ಮಾತ್ರ ಮುಂಬಡ್ತಿ ಹೊಂದುತ್ತಿದ್ದಾರೆಯೇ ವಿನಃ ಪೌರಕಾರ್ಮಿಕರಿಗೆ ಮಾತ್ರ ಸೌಲಭ್ಯ ನೀಡಲಾಗುತ್ತಿಲ್ಲ’ ಎಂದು ಸಭೆಗೆ ತಿಳಿಸಿದರು.</p>.<p>ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಪ್ರತಿಕ್ರಿಯಿಸಿ, ‘ನಗರದಲ್ಲಿ ಪಾಲಿಕೆ ಒಡೆತನದ ಎಲ್ಲಾ ಜಾಗಗಳನ್ನು ಒತ್ತುವರಿ ಮಾಡಲಾಗುತ್ತಿದೆ. ಆದರೂ ಅವರಿಗೆ ನಿವೇಶನ ಸೌಲಭ್ಯ ಒದಗಿಸಲಾಗುತ್ತಿಲ್ಲ. ನಗರದಲ್ಲಿ ಖಾಲಿ ಜಾಗಗಳ ಮಾಹಿತಿಯನ್ನು ಕೂಡಲೇ ನೀಡಬೇಕು. ಜಿಲ್ಲೆಯ ವಿವಿಧ ನಗರ ಸ್ಥಳೀಯ-ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸೂರು ಕಲ್ಪಿಸುವ ಆದ್ಯತೆ ಅಧಿಕಾರಿಗಳದ್ದಾಗಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಮತ್ತು ಇತರ ಅಧಿಕಾರಿಗಳು ಇದ್ದರು.</p>.<h2>10 ತಿಂಗಳಿಂದ ವೇತನ ಇಲ್ಲ</h2><p> ‘ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 4 ಪೌರಕಾರ್ಮಿಕರಿಂದ ಕೆಲಸ ಮಾಡಿಸಿಕೊಂಡು ಕಳೆದ 10 ತಿಂಗಳಿಂದ ವೇತನ ಪಾವತಿ ನೀಡಿಲ್ಲ. ಬೆಳಗಿನ ಉಪಹಾರ ಸಹ ನೀಡಿಲ್ಲ ಮತ್ತು ಅವರಿಂದ ಹಣ ವಸೂಲಿ ಮಾಡಲಾಗಿದೆ’ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕಂದಕೂರು ರಾಮುಡು ಸಭೆಯ ಗಮನಕ್ಕೆ ತಂದರು. </p><p>ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿ ‘ಪೌರಕಾರ್ಮಿಕರು ಸಫಾಯಿ ಕರ್ಮಚಾರಿಗಳು ಲೋಡರ್ಸ್ ಕ್ಲೀನರ್ಸ್ ವಾಹನ ಚಾಲಕರಿಗೆ ನಿಗದಿತ ವೇಳೆಯೊಳಗೆ ವೇತನ ಪಾವತಿಸಿ ವೇತನ ಸ್ಲಿಪ್ ನೀಡಬೇಕು. ಪಿಎಫ್ ಮತ್ತು ಇಎಸ್ಐ ವಂತಿಕೆ ಸರಿಯಾಗಿ ಪಾವತಿಯಾಗುತ್ತಿರುವ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಮಾಸ್ಟರ್ ಆರೋಗ್ಯ ತಪಾಸಣೆ ಕಾಲ ಕಾಲಕ್ಕೆ ಮಾಡಿಸಬೇಕು’ ಎಂದು ತಿಳಿಸಿದರು. </p><p>‘ಮುಂದಿನ ಸಭೆಯಲ್ಲಿ ಸಮಿತಿಯ ಸದಸ್ಯರಾದ ವಿವಿಧ ಇಲಾಖೆಗಳ ಮುಖ್ಯಸ್ಥರೇ ಸಭೆಗೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಸೂಚನೆ ನೀಡಿದರು.</p>