<p><strong>ಸಂಡೂರು: ‘</strong>ಕಟ್ಟಡ ಕಾರ್ಮಿಕರ ವಸತಿ ನಿರ್ಮಾಣಕ್ಕೆ ₹5ಲಕ್ಷ ಸಹಾಯ ಧನ, ವಿದ್ಯಾರ್ಥಿ ವೇತನ, ಹೆರಿಗೆ, ಮದುವೆ ಸೇರಿದಂತೆ ಇತರೆ ಸೌಲಭ್ಯಗಳಿಗೆ ಸರ್ಕಾರವು ಶೀಘ್ರವಾಗಿ ಸೂಕ್ತ ಸಹಾಯ ಧನವನ್ನು ಸಕಾಲಕ್ಕೆ ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕ ಸಂಘದ ಸಂಡೂರು ತಾಲ್ಲೂಕು ಅಧ್ಯಕ್ಷ ವಿ.ದೇವಣ್ಣ ಮಾತನಾಡಿದರು.</p>.<p>ತಾಲ್ಲೂಕಿನ ಹೊಸದರೋಜಿ ಗ್ರಾಮದಲ್ಲಿ ಬುಧವಾರ ಕರ್ನಾಟಕ ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕ ಸಂಘದ ಸಂಡೂರು ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ತಾಲ್ಲೂಕು ಸಮಾವೇಶದ ಕರ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ನೈಜ ಕಟ್ಟಡ ಕಾರ್ಮಿಕರಿಗೆ ಹೊಸ ನೊಂದಾವಣಿಗಾಗಿ ಸೂಕ್ತ ಕ್ರಮವಹಿಸಬೇಕು. ಬಡ ಕಾರ್ಮಿಕರು ತಮ್ಮ ಸುಂದರ ಬದುಕನ್ನು ಕಟ್ಟಿಕೊಳ್ಳಲು 1996 ರ ಸರ್ಕಾರದ ಕಾರ್ಮಿಕ ಕಾನೂನುಗಳನ್ನು ಸಮಪರ್ಕವಾಗಿ ಜಾರಿಗೊಳಿಸಿಬೇಕು. ಮುಂದಿನ ದಿನಗಳಲ್ಲಿ ಕಾರ್ಮಿಕರ ಸಾಮಾವೇಶವನ್ನು ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ಸಂಘದ ಮುಖಂಡರಾದ ಶಂಕಣ್ಣ, ಹಾಲಸ್ವಾಮಿ, ತಿಮ್ಮಪ್ಪ, ಸಣ್ಣರಂಗಸ್ವಾಮಿ, ವಿವಿಧ ಗ್ರಾಮಗಳ ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು: ‘</strong>ಕಟ್ಟಡ ಕಾರ್ಮಿಕರ ವಸತಿ ನಿರ್ಮಾಣಕ್ಕೆ ₹5ಲಕ್ಷ ಸಹಾಯ ಧನ, ವಿದ್ಯಾರ್ಥಿ ವೇತನ, ಹೆರಿಗೆ, ಮದುವೆ ಸೇರಿದಂತೆ ಇತರೆ ಸೌಲಭ್ಯಗಳಿಗೆ ಸರ್ಕಾರವು ಶೀಘ್ರವಾಗಿ ಸೂಕ್ತ ಸಹಾಯ ಧನವನ್ನು ಸಕಾಲಕ್ಕೆ ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕ ಸಂಘದ ಸಂಡೂರು ತಾಲ್ಲೂಕು ಅಧ್ಯಕ್ಷ ವಿ.ದೇವಣ್ಣ ಮಾತನಾಡಿದರು.</p>.<p>ತಾಲ್ಲೂಕಿನ ಹೊಸದರೋಜಿ ಗ್ರಾಮದಲ್ಲಿ ಬುಧವಾರ ಕರ್ನಾಟಕ ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕ ಸಂಘದ ಸಂಡೂರು ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ತಾಲ್ಲೂಕು ಸಮಾವೇಶದ ಕರ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ನೈಜ ಕಟ್ಟಡ ಕಾರ್ಮಿಕರಿಗೆ ಹೊಸ ನೊಂದಾವಣಿಗಾಗಿ ಸೂಕ್ತ ಕ್ರಮವಹಿಸಬೇಕು. ಬಡ ಕಾರ್ಮಿಕರು ತಮ್ಮ ಸುಂದರ ಬದುಕನ್ನು ಕಟ್ಟಿಕೊಳ್ಳಲು 1996 ರ ಸರ್ಕಾರದ ಕಾರ್ಮಿಕ ಕಾನೂನುಗಳನ್ನು ಸಮಪರ್ಕವಾಗಿ ಜಾರಿಗೊಳಿಸಿಬೇಕು. ಮುಂದಿನ ದಿನಗಳಲ್ಲಿ ಕಾರ್ಮಿಕರ ಸಾಮಾವೇಶವನ್ನು ಹಮ್ಮಿಕೊಳ್ಳಲಾಗುವುದು’ ಎಂದರು.</p>.<p>ಸಂಘದ ಮುಖಂಡರಾದ ಶಂಕಣ್ಣ, ಹಾಲಸ್ವಾಮಿ, ತಿಮ್ಮಪ್ಪ, ಸಣ್ಣರಂಗಸ್ವಾಮಿ, ವಿವಿಧ ಗ್ರಾಮಗಳ ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>