<p>ಸಂಡೂರು: ‘ಸಮಾಜದಲ್ಲಿನ ಎಲ್ಲ ಕುಟುಂಬಗಳ ಸ್ಥಿತಿಗತಿ ತಿಳಿಯಲು ಜನಗಣತಿ ಅವಶ್ಯವಾಗಿದೆ’ ಎಂದು ಸಹಾಯಕ ಆಯುಕ್ತ ರಾಜೇಶ್ ಹೇಳಿದರು.</p>.<p>ತಾಲ್ಲೂಕಿನ ವಡ್ಡು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ 2027 ಜನಗಣತಿ–ಸ್ವಯಂ ಗಣತಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಸ್ವಯಂ ಗಣತಿ ಮಾಡಿಕೊಳ್ಳುವ ಮೂಲಕ ಜನಗಣತಿಯಲ್ಲಿ ನೇರವಾಗಿ ಭಾಗಿಯಾಗಬಹುದು. ಇದರಿಂದ ಸಾರ್ವಜನಿಕರು ನಿಖರ ಮಾಹಿತಿ ನೀಡಿದಂತಾಗುತ್ತದೆ. ಸಮಯ ಉಳಿತಾಯವಾಗುತ್ತದೆ. ಇತರರಿಗೂ ಈ ಬಗ್ಗೆ ಪ್ರೇರೇಪಿಸುವ ಮೂಲಕ ಜನಗಣತಿಯ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು’ ಎಂದರು.</p>.<p>ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನಬಸಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ್, ಸಹಾಯಕ ನಿರ್ದೇಶಕ ಮಹೇಶ್ ಕುಮಾರ್, ಯೋಜನಾಧಿಕಾರಿ ಹನುಮಗೌಡ, ಸಂಜೀವಿನಿ ಯೋಜನೆ ಕಾರ್ಯಕ್ರಮ ವ್ಯವಸ್ಥಾಪಕ ಸೋಮಶೇಖರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-25-766932706</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಡೂರು: ‘ಸಮಾಜದಲ್ಲಿನ ಎಲ್ಲ ಕುಟುಂಬಗಳ ಸ್ಥಿತಿಗತಿ ತಿಳಿಯಲು ಜನಗಣತಿ ಅವಶ್ಯವಾಗಿದೆ’ ಎಂದು ಸಹಾಯಕ ಆಯುಕ್ತ ರಾಜೇಶ್ ಹೇಳಿದರು.</p>.<p>ತಾಲ್ಲೂಕಿನ ವಡ್ಡು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ 2027 ಜನಗಣತಿ–ಸ್ವಯಂ ಗಣತಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಸ್ವಯಂ ಗಣತಿ ಮಾಡಿಕೊಳ್ಳುವ ಮೂಲಕ ಜನಗಣತಿಯಲ್ಲಿ ನೇರವಾಗಿ ಭಾಗಿಯಾಗಬಹುದು. ಇದರಿಂದ ಸಾರ್ವಜನಿಕರು ನಿಖರ ಮಾಹಿತಿ ನೀಡಿದಂತಾಗುತ್ತದೆ. ಸಮಯ ಉಳಿತಾಯವಾಗುತ್ತದೆ. ಇತರರಿಗೂ ಈ ಬಗ್ಗೆ ಪ್ರೇರೇಪಿಸುವ ಮೂಲಕ ಜನಗಣತಿಯ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು’ ಎಂದರು.</p>.<p>ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನಬಸಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ್, ಸಹಾಯಕ ನಿರ್ದೇಶಕ ಮಹೇಶ್ ಕುಮಾರ್, ಯೋಜನಾಧಿಕಾರಿ ಹನುಮಗೌಡ, ಸಂಜೀವಿನಿ ಯೋಜನೆ ಕಾರ್ಯಕ್ರಮ ವ್ಯವಸ್ಥಾಪಕ ಸೋಮಶೇಖರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-25-766932706</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>