<p><strong>ಬಳ್ಳಾರಿ:</strong> ಕಾಂಗ್ರೆಸ್ ಸಂಸದ ಇ. ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅವರ ಪತ್ನಿ ಅನ್ನಪೂರ್ಣ ಗೆಲುವು ಸಾಧಿಸಿದ್ದಾರೆ.</p><p>ಬಿಜೆಪಿಯ ಬಂಗಾರು ಹನುಮಂತ ಅವರಿಂದ ಆರಂಭಿಕ ಸುತ್ತುಗಳಲ್ಲಿ ನಿಕಟ ಪೈಪೋಟಿ ಎದುರಿಸಿದ್ದ ಅನ್ನಪೂರ್ಣ, ಅಂತಿಮವಾಗಿ 9,645 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.</p><p>ಸಂಡೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಪೂರ್ಣಗೊಂಡಿದ್ದು, ಅನ್ನಪೂರ್ಣ ಅವರಿಗೆ ಒಟ್ಟು 93,616 ಮತಗಳು ಲಭಿಸಿವೆ. ಬಂಗಾರು ಹನುಮಂತ ಅವರು 83,967 ಮತಗಳನ್ನು ಪಡೆದಿದ್ದಾರೆ.</p><p>ಸೋಲು ತಿಳಿಯುತ್ತಲೇ ಮತ ಎಣಿಕೆ ಕೇಂದ್ರದಿಂದ ಹೊರನಡೆದ ಹನುಮಂತ ಅವರು, 'ಇದು ಧರ್ಮ ಯುದ್ಧ. ಅಧರ್ಮ ಗೆದ್ದಿದೆ. ಸೋಲಿನ ಹೊಣೆ ನಾನೇ ಹೊರುವೆ' ಎಂದಿದ್ದಾರೆ.</p><p>'ಈ ಕ್ಷೇತ್ರ ಗೆಲ್ಲುವ ಭರವಸೆಯನ್ನು ವರಿಷ್ಠರಿಗೆ ನೀಡಿದ್ದೆ. ಗೆಲ್ಲಲು ಸಾಧ್ಯವಾಗದೇ ಇರುವುದಕ್ಕೆ ಎಲ್ಲರ ಕ್ಷಮೆ ಕೇಳುವೆ. ಪಕ್ಷದ ವರಿಷ್ಠರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವೆ' ಎಂದು ಹೇಳಿದ್ದಾರೆ.</p><p>'ಮುಸ್ಲಿಂ, ಕುರುಬ ಸಮುದಾಯದ ವೋಟುಗಳು ನಮಗೆ ಬಂದಿಲ್ಲ. ಶಿವರಾಜ ತಂಗಡಗಿ ಉಸ್ತುವಾರಿ ವಹಿಸಿದ್ದ ಭಾಗದಲ್ಲಿ ಹಣದ ಹೊಳೆ ಹರಿದಿದೆ' ಎಂದು ಆರೋಪಿಸಿದ್ದಾರೆ.</p><p>'ಮುಖ್ಯಮಂತ್ರಿ ಮೂರು ದಿನ ಉಳಿದು ಕೆಲಸ ಮಾಡಿದರು. ಹಣ ಖರ್ಚು ಮಾಡಿ ಕಾಂಗ್ರೆಸ್ ಗೆದ್ದಿದೆ. ಗ್ಯಾರೆಂಟಿ ಹಣ ಬಿಡುಗಡೆಯೂ ಚುನಾವಣೆಯಲ್ಲಿ ಕೆಲಸ ಮಾಡಿದೆ' ಎಂದು ದೂರಿದ್ದಾರೆ.</p><p>ಈ ಕ್ಷೇತ್ರದಲ್ಲಿ ನವೆಂಬರ್ 13ರಂದು ಮತದಾನ ನಡೆದಿತ್ತು.</p>.Sandur Election Results | ಸಂಡೂರಿನಲ್ಲಿ ಸೋಲು; ಅಧರ್ಮ ಗೆದ್ದಿದೆ ಎಂದ ಹನುಮಂತ.Sandur Election Results 2024: ಸಂಡೂರಿನಲ್ಲಿ ಕಾಂಗ್ರೆಸ್ಗೆ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕಾಂಗ್ರೆಸ್ ಸಂಸದ ಇ. ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅವರ ಪತ್ನಿ ಅನ್ನಪೂರ್ಣ ಗೆಲುವು ಸಾಧಿಸಿದ್ದಾರೆ.</p><p>ಬಿಜೆಪಿಯ ಬಂಗಾರು ಹನುಮಂತ ಅವರಿಂದ ಆರಂಭಿಕ ಸುತ್ತುಗಳಲ್ಲಿ ನಿಕಟ ಪೈಪೋಟಿ ಎದುರಿಸಿದ್ದ ಅನ್ನಪೂರ್ಣ, ಅಂತಿಮವಾಗಿ 9,645 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.</p><p>ಸಂಡೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಪೂರ್ಣಗೊಂಡಿದ್ದು, ಅನ್ನಪೂರ್ಣ ಅವರಿಗೆ ಒಟ್ಟು 93,616 ಮತಗಳು ಲಭಿಸಿವೆ. ಬಂಗಾರು ಹನುಮಂತ ಅವರು 83,967 ಮತಗಳನ್ನು ಪಡೆದಿದ್ದಾರೆ.</p><p>ಸೋಲು ತಿಳಿಯುತ್ತಲೇ ಮತ ಎಣಿಕೆ ಕೇಂದ್ರದಿಂದ ಹೊರನಡೆದ ಹನುಮಂತ ಅವರು, 'ಇದು ಧರ್ಮ ಯುದ್ಧ. ಅಧರ್ಮ ಗೆದ್ದಿದೆ. ಸೋಲಿನ ಹೊಣೆ ನಾನೇ ಹೊರುವೆ' ಎಂದಿದ್ದಾರೆ.</p><p>'ಈ ಕ್ಷೇತ್ರ ಗೆಲ್ಲುವ ಭರವಸೆಯನ್ನು ವರಿಷ್ಠರಿಗೆ ನೀಡಿದ್ದೆ. ಗೆಲ್ಲಲು ಸಾಧ್ಯವಾಗದೇ ಇರುವುದಕ್ಕೆ ಎಲ್ಲರ ಕ್ಷಮೆ ಕೇಳುವೆ. ಪಕ್ಷದ ವರಿಷ್ಠರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವೆ' ಎಂದು ಹೇಳಿದ್ದಾರೆ.</p><p>'ಮುಸ್ಲಿಂ, ಕುರುಬ ಸಮುದಾಯದ ವೋಟುಗಳು ನಮಗೆ ಬಂದಿಲ್ಲ. ಶಿವರಾಜ ತಂಗಡಗಿ ಉಸ್ತುವಾರಿ ವಹಿಸಿದ್ದ ಭಾಗದಲ್ಲಿ ಹಣದ ಹೊಳೆ ಹರಿದಿದೆ' ಎಂದು ಆರೋಪಿಸಿದ್ದಾರೆ.</p><p>'ಮುಖ್ಯಮಂತ್ರಿ ಮೂರು ದಿನ ಉಳಿದು ಕೆಲಸ ಮಾಡಿದರು. ಹಣ ಖರ್ಚು ಮಾಡಿ ಕಾಂಗ್ರೆಸ್ ಗೆದ್ದಿದೆ. ಗ್ಯಾರೆಂಟಿ ಹಣ ಬಿಡುಗಡೆಯೂ ಚುನಾವಣೆಯಲ್ಲಿ ಕೆಲಸ ಮಾಡಿದೆ' ಎಂದು ದೂರಿದ್ದಾರೆ.</p><p>ಈ ಕ್ಷೇತ್ರದಲ್ಲಿ ನವೆಂಬರ್ 13ರಂದು ಮತದಾನ ನಡೆದಿತ್ತು.</p>.Sandur Election Results | ಸಂಡೂರಿನಲ್ಲಿ ಸೋಲು; ಅಧರ್ಮ ಗೆದ್ದಿದೆ ಎಂದ ಹನುಮಂತ.Sandur Election Results 2024: ಸಂಡೂರಿನಲ್ಲಿ ಕಾಂಗ್ರೆಸ್ಗೆ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>