<p><strong>ಸಂಡೂರು:</strong> ತಾಲ್ಲೂಕಿನ ಡಿ.ಅಂತಾಪುರ ಕೊರಚರಹಟ್ಟಿಯ ಗ್ರಾಮದಲ್ಲಿನ ಕೆಲ ವ್ಯಕ್ತಿಗಳು ಆಂಧ್ರ ಮೂಲದ ಶಿವಾರೆಡ್ಡಿ ಎನ್ನುವ ವ್ಯಕ್ತಿಗೆ ನಕಲಿ ಬಂಗಾರವನ್ನು ಅಸಲಿ ಬಂಗಾರ ಎಂದು ನಂಬಿಸಿ ₹ 10 ಲಕ್ಷ ಹಣ ವಂಚಿಸಿ ಪರಾರಿಯಾದ ಘಟನೆ ಶನಿವಾರ ನಡೆದಿದೆ.</p>.<p>ಘಟನೆಯ ವಿವರ: ಕೊರಚರಹಟ್ಟಿ ಗ್ರಾಮದ ಆರೋಪಿ ತಿರುಪತಿ, ಇತನ ಸಹಚರರು ಸೇರಿ ಶಿವಾರೆಡ್ಡಿ ಅವರಿಗೆ ನಮ್ಮ ಬಳಿ 1 ಕೆಜಿ ಅಸಲಿ ಬಂಗಾರವಿದ್ದು ₹ 40 ಲಕ್ಷಕ್ಕೆ ಮಾರಾಟ ಮಾಡಲಾಗುವುದು ಎಂದು ದೂರವಾಣಿ ಕರೆಯ ಮೂಲಕ ತಿಳಿಸಿದ್ದಾರೆ. </p>.<p>ಶಿವಾರೆಡ್ಡಿ ಅವರು ಇವರ ಮಾತನ್ನು ನಂಬಿಕೊಂಡು ₹ 10 ಲಕ್ಷ ಹಣ ಸಮೇತ ತೋರಣಗಲ್ಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ಆರೋಪಿ ತಿರುಪತಿ ಆತನ ಸಹಚರರು 125 ಗ್ರಾಂ ನಕಲಿ ಬಂಗಾರವನ್ನು ಶಿವಾರೆಡ್ಡಿಗೆ ಮಾರಾಟ ಮಾಡಿ ₹ 10 ಲಕ್ಷ ಪಡೆದು ಎಲ್ಲರು ತಕ್ಷಣ ಪರಾರಿಯಾಗಿದ್ದಾರೆ.</p>.<p>ಶಿವಾರೆಡ್ಡಿಯವರು ಬಂಗಾರವನ್ನು ಪರಿಶೀಲಿಸಿದಾಗ ಅದು ನಕಲಿ ಬಂಗಾರ ಎಂದು ತಿಳಿದು ಬಂದಿದೆ. ಅವರು ವಂಚನೆಯ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p>ತೋರಣಗಲ್ಲು ಠಾಣೆಯ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ತಿರುಪತಿಯನ್ನು ಸೋಮವಾರ ಬಂಧಿಸಿ ಆತನಿಂದ ₹ 10 ಲಕ್ಷ ಹಣವನ್ನು ವಶಪಡಿಸಿಕೊಂಡು ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ವಂಚನೆಗೆ ಒಳಗಾದ ಶಿವಾರೆಡ್ಡಿಯವರಿಗೆ ಹಣವನ್ನು ಮರಳಿಸಿದ್ದಾರೆ.</p>.<p>‘ನಕಲಿ ಬಂಗಾರ ಮಾರಾಟ ಮಾಡಿದ ಇನ್ನುಳಿದ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದ್ದು, ಸಾರ್ವಜನಿಕರು ಇಂತಹ ವಂಚಕರಿಂದ ಎಚ್ಚರದಿಂದ ಇರಬೇಕು. ಮೋಸದ ಜಾಲಕ್ಕೆ ಒಳಗಾಗಬಾರದು ಎಂದು ತೋರಣಗಲ್ಲು ಠಾಣೆಯ ಪಿಎಸ್ಐ ಯು.ಡಾಕೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ತಾಲ್ಲೂಕಿನ ಡಿ.ಅಂತಾಪುರ ಕೊರಚರಹಟ್ಟಿಯ ಗ್ರಾಮದಲ್ಲಿನ ಕೆಲ ವ್ಯಕ್ತಿಗಳು ಆಂಧ್ರ ಮೂಲದ ಶಿವಾರೆಡ್ಡಿ ಎನ್ನುವ ವ್ಯಕ್ತಿಗೆ ನಕಲಿ ಬಂಗಾರವನ್ನು ಅಸಲಿ ಬಂಗಾರ ಎಂದು ನಂಬಿಸಿ ₹ 10 ಲಕ್ಷ ಹಣ ವಂಚಿಸಿ ಪರಾರಿಯಾದ ಘಟನೆ ಶನಿವಾರ ನಡೆದಿದೆ.</p>.<p>ಘಟನೆಯ ವಿವರ: ಕೊರಚರಹಟ್ಟಿ ಗ್ರಾಮದ ಆರೋಪಿ ತಿರುಪತಿ, ಇತನ ಸಹಚರರು ಸೇರಿ ಶಿವಾರೆಡ್ಡಿ ಅವರಿಗೆ ನಮ್ಮ ಬಳಿ 1 ಕೆಜಿ ಅಸಲಿ ಬಂಗಾರವಿದ್ದು ₹ 40 ಲಕ್ಷಕ್ಕೆ ಮಾರಾಟ ಮಾಡಲಾಗುವುದು ಎಂದು ದೂರವಾಣಿ ಕರೆಯ ಮೂಲಕ ತಿಳಿಸಿದ್ದಾರೆ. </p>.<p>ಶಿವಾರೆಡ್ಡಿ ಅವರು ಇವರ ಮಾತನ್ನು ನಂಬಿಕೊಂಡು ₹ 10 ಲಕ್ಷ ಹಣ ಸಮೇತ ತೋರಣಗಲ್ಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ಆರೋಪಿ ತಿರುಪತಿ ಆತನ ಸಹಚರರು 125 ಗ್ರಾಂ ನಕಲಿ ಬಂಗಾರವನ್ನು ಶಿವಾರೆಡ್ಡಿಗೆ ಮಾರಾಟ ಮಾಡಿ ₹ 10 ಲಕ್ಷ ಪಡೆದು ಎಲ್ಲರು ತಕ್ಷಣ ಪರಾರಿಯಾಗಿದ್ದಾರೆ.</p>.<p>ಶಿವಾರೆಡ್ಡಿಯವರು ಬಂಗಾರವನ್ನು ಪರಿಶೀಲಿಸಿದಾಗ ಅದು ನಕಲಿ ಬಂಗಾರ ಎಂದು ತಿಳಿದು ಬಂದಿದೆ. ಅವರು ವಂಚನೆಯ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<p>ತೋರಣಗಲ್ಲು ಠಾಣೆಯ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ತಿರುಪತಿಯನ್ನು ಸೋಮವಾರ ಬಂಧಿಸಿ ಆತನಿಂದ ₹ 10 ಲಕ್ಷ ಹಣವನ್ನು ವಶಪಡಿಸಿಕೊಂಡು ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ವಂಚನೆಗೆ ಒಳಗಾದ ಶಿವಾರೆಡ್ಡಿಯವರಿಗೆ ಹಣವನ್ನು ಮರಳಿಸಿದ್ದಾರೆ.</p>.<p>‘ನಕಲಿ ಬಂಗಾರ ಮಾರಾಟ ಮಾಡಿದ ಇನ್ನುಳಿದ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದ್ದು, ಸಾರ್ವಜನಿಕರು ಇಂತಹ ವಂಚಕರಿಂದ ಎಚ್ಚರದಿಂದ ಇರಬೇಕು. ಮೋಸದ ಜಾಲಕ್ಕೆ ಒಳಗಾಗಬಾರದು ಎಂದು ತೋರಣಗಲ್ಲು ಠಾಣೆಯ ಪಿಎಸ್ಐ ಯು.ಡಾಕೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>