<p>ಸಂಡೂರು: ತಾಲ್ಲೂಕಿನ ಮೆಟ್ರಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಲಕ್ಕಲಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸರಕು ವಾಹನದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪಡಿತರ ಅಕ್ಕಿ ಸಮೇತ ವಾಹನವನ್ನು ವಶಪಡಿಸಿಕೊಂಡಿದ್ದಾರೆ.</p>.<p>ತೋರಣಗಲ್ಲು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಪಡಿತರ ಅಕ್ಕಿಯನ್ನು ಸಾರ್ವಜನಿಕರಿಂದ ಅಕ್ರಮವಾಗಿ ಸಂಗ್ರಹಿಸಿ ಸರಕು ವಾಹನದಲ್ಲಿ ಸಾಗಾಣಿಕೆ ಮಾಡುವ ವೇಳೆ ಸಂಡೂರಿನ ಆಹಾರ ಇಲಾಖೆಯ ಅಧಿಕಾರಿಗಳು ಖಚಿತ ಮಾಹಿತಿಯಿಂದ ದಾಳಿ ನಡೆಸಿದ್ದಾರೆ.</p>.<p>₹ 34,000 ಮೌಲ್ಯದ ಒಟ್ಟು 30 ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಹಾರ ಇಲಾಖೆಯ ನಿರೀಕ್ಷಕ ಪ್ರದೀಪ್ ಕುಮಾರ್ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಈಚೆಗೆ ಪ್ರಕರಣ ದಾಖಲಾಗಿದೆ.</p>.<p>₹ 20 ಸಾವಿರ ಮೌಲ್ಯದ ಪಡಿತರ ಅಕ್ಕಿ ವಶ</p>.<p>ತೆಕ್ಕಲಕೋಟೆ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ದ್ವಿಚಕ್ರ ವಾಹನಗಳಲ್ಲಿ ಸಾಗಿಸುತ್ತಿದ್ದವರನ್ನು ಪೊಲೀಸರು ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ವಶಪಡಿಸಿಕೊಂಡ ಘಟನೆ ಸೋಮವಾರ ನಡೆದಿದೆ.</p>.<p>ಪಡಿತರ ಅಕ್ಕಿಯನ್ನು ತೆಕ್ಕಲಕೋಟೆಯಿಂದ ಸಿರುಗುಪ್ಪ ಕಡೆಗೆ ಹೋಗುವ ಮಾರ್ಗದಲ್ಲಿ ಮೂರು ದ್ವಿಚಕ್ರ ವಾಹನಗಳಲ್ಲಿ ಸಾಗಿಸುತ್ತಿದ್ದ 50 ಕೆಜಿ ತೂಕದ 16 ಮೂಟೆಗಳಲ್ಲಿದ್ದ ಒಟ್ಟು ₹ 20 ಸಾವಿರ ಮೌಲ್ಯದ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.</p>.<p>ಸಿರುಗುಪ್ಪ ಆಹಾರ ನಿರೀಕ್ಷಕ ಮಹಾ ರುದ್ರಗೌಡ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂರು ದ್ವಿಚಕ್ರ ವಾಹನ ಹಾಗೂ ಸವಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-25-46021041</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಡೂರು: ತಾಲ್ಲೂಕಿನ ಮೆಟ್ರಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಲಕ್ಕಲಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸರಕು ವಾಹನದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪಡಿತರ ಅಕ್ಕಿ ಸಮೇತ ವಾಹನವನ್ನು ವಶಪಡಿಸಿಕೊಂಡಿದ್ದಾರೆ.</p>.<p>ತೋರಣಗಲ್ಲು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಪಡಿತರ ಅಕ್ಕಿಯನ್ನು ಸಾರ್ವಜನಿಕರಿಂದ ಅಕ್ರಮವಾಗಿ ಸಂಗ್ರಹಿಸಿ ಸರಕು ವಾಹನದಲ್ಲಿ ಸಾಗಾಣಿಕೆ ಮಾಡುವ ವೇಳೆ ಸಂಡೂರಿನ ಆಹಾರ ಇಲಾಖೆಯ ಅಧಿಕಾರಿಗಳು ಖಚಿತ ಮಾಹಿತಿಯಿಂದ ದಾಳಿ ನಡೆಸಿದ್ದಾರೆ.</p>.<p>₹ 34,000 ಮೌಲ್ಯದ ಒಟ್ಟು 30 ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಹಾರ ಇಲಾಖೆಯ ನಿರೀಕ್ಷಕ ಪ್ರದೀಪ್ ಕುಮಾರ್ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಈಚೆಗೆ ಪ್ರಕರಣ ದಾಖಲಾಗಿದೆ.</p>.<p>₹ 20 ಸಾವಿರ ಮೌಲ್ಯದ ಪಡಿತರ ಅಕ್ಕಿ ವಶ</p>.<p>ತೆಕ್ಕಲಕೋಟೆ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ದ್ವಿಚಕ್ರ ವಾಹನಗಳಲ್ಲಿ ಸಾಗಿಸುತ್ತಿದ್ದವರನ್ನು ಪೊಲೀಸರು ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ವಶಪಡಿಸಿಕೊಂಡ ಘಟನೆ ಸೋಮವಾರ ನಡೆದಿದೆ.</p>.<p>ಪಡಿತರ ಅಕ್ಕಿಯನ್ನು ತೆಕ್ಕಲಕೋಟೆಯಿಂದ ಸಿರುಗುಪ್ಪ ಕಡೆಗೆ ಹೋಗುವ ಮಾರ್ಗದಲ್ಲಿ ಮೂರು ದ್ವಿಚಕ್ರ ವಾಹನಗಳಲ್ಲಿ ಸಾಗಿಸುತ್ತಿದ್ದ 50 ಕೆಜಿ ತೂಕದ 16 ಮೂಟೆಗಳಲ್ಲಿದ್ದ ಒಟ್ಟು ₹ 20 ಸಾವಿರ ಮೌಲ್ಯದ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.</p>.<p>ಸಿರುಗುಪ್ಪ ಆಹಾರ ನಿರೀಕ್ಷಕ ಮಹಾ ರುದ್ರಗೌಡ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂರು ದ್ವಿಚಕ್ರ ವಾಹನ ಹಾಗೂ ಸವಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-25-46021041</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>