<p><strong>ಸಂಡೂರು:</strong> 'ಗ್ರಾಮೀಣ ಪ್ರದೇಶದ ರೈತರು ಕೃಷಿ ಚಟುವಟಿಕೆಯಲ್ಲಿ ಹೆಚ್ಚಿನ ಆದಾಯಗಳಿಸಲು ನರೇಗಾ ಯೋಜನೆಡಿಯಲ್ಲಿ ಬದು ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣಕ್ಕೆ ಮುಂದಾಗಬೇಕು' ಎಂದು ಬಳ್ಳಾರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೇರ್ ಹೇಳಿದರು.</p>.<p>ತಾಲ್ಲೂಕಿನ ಮೆಟ್ರಿಕಿ, ವಿಠಲಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ನರೇಗಾ ಯೋಜನೆಡಿಯಲ್ಲಿ ಅನುಷ್ಠಾನ ಗೊಳ್ಳುತ್ತಿರುವ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿದರು.</p>.<p>'ಕೂಲಿ ಕಾರ್ಮಿಕರು ಮಣ್ಣು ಮತ್ತು ಜಲ ಸಂರಕ್ಷಣಾ ಕಾಮಗಾರಿಗಳಾದ ಸಮಗ್ರ ಕೆರೆ,ಕುಂಟೆಗಳ ಸಮಗ್ರವಾಗಿ ಅಭಿವೃದ್ಧಿಪಡಿಸಲು ಹೆಚ್ವಿನ ಆದ್ಯತೆ ನೀಡಬೇಕು. ರೈತರು ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿವಹಿಸಬೇಕು.</p>.<p>‘60 ವರ್ಷ ಮೇಲ್ಪಟ್ಟ ಕೂಲಿ ಕಾರ್ಮಿಕರಿಗೆ ಕಾಮಗಾರಿ ಅಳತೆಯಲ್ಲಿ ಶೇಕಡ 50ರಷ್ಟು ರಿಯಾಯಿತಿ ಇದ್ದು ಹೆಚ್ಚಿನ ರೀತಿಯಲ್ಲಿ ಕೆಲಸ ನೀಡಲು ಅಧಿಕಾರಿಗಳು ಸೂಕ್ತಕ್ರಮವಹಿಸಬೇಕು' ಎಂದರು.</p>.<p>ಸಂಡೂರು ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ವಸಂತ್ ರಾಜ್, ಅಧಿಕಾರಿ ಮಹೇಶ್ ಕುಮಾರ್, ಪಿಡಿಒಗಳಾದ ಹನುಮಂತಪ್ಪ, ರಂಗಸ್ವಾಮಿ, ಕಾರ್ಯದರ್ಶಿ ಗಳಾದ ಬಸವರಾಜ್, ಹುಚ್ಚಪ್ಪ, ತಾಂತ್ರಿಕ ಸಂಯೋಜಕ ಯಂಕಪ್ಪ, ಸಿಬ್ಬಂದಿ ಮಂಜುನಾಥ, ಸುಭಾಸ್ ಚಂದ್ರ, ವಿವಿಧ ಗ್ರಾಮಗಳ ಕಾರ್ಮಿಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-25-1607802152</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> 'ಗ್ರಾಮೀಣ ಪ್ರದೇಶದ ರೈತರು ಕೃಷಿ ಚಟುವಟಿಕೆಯಲ್ಲಿ ಹೆಚ್ಚಿನ ಆದಾಯಗಳಿಸಲು ನರೇಗಾ ಯೋಜನೆಡಿಯಲ್ಲಿ ಬದು ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣಕ್ಕೆ ಮುಂದಾಗಬೇಕು' ಎಂದು ಬಳ್ಳಾರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೇರ್ ಹೇಳಿದರು.</p>.<p>ತಾಲ್ಲೂಕಿನ ಮೆಟ್ರಿಕಿ, ವಿಠಲಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ನರೇಗಾ ಯೋಜನೆಡಿಯಲ್ಲಿ ಅನುಷ್ಠಾನ ಗೊಳ್ಳುತ್ತಿರುವ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿದರು.</p>.<p>'ಕೂಲಿ ಕಾರ್ಮಿಕರು ಮಣ್ಣು ಮತ್ತು ಜಲ ಸಂರಕ್ಷಣಾ ಕಾಮಗಾರಿಗಳಾದ ಸಮಗ್ರ ಕೆರೆ,ಕುಂಟೆಗಳ ಸಮಗ್ರವಾಗಿ ಅಭಿವೃದ್ಧಿಪಡಿಸಲು ಹೆಚ್ವಿನ ಆದ್ಯತೆ ನೀಡಬೇಕು. ರೈತರು ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿವಹಿಸಬೇಕು.</p>.<p>‘60 ವರ್ಷ ಮೇಲ್ಪಟ್ಟ ಕೂಲಿ ಕಾರ್ಮಿಕರಿಗೆ ಕಾಮಗಾರಿ ಅಳತೆಯಲ್ಲಿ ಶೇಕಡ 50ರಷ್ಟು ರಿಯಾಯಿತಿ ಇದ್ದು ಹೆಚ್ಚಿನ ರೀತಿಯಲ್ಲಿ ಕೆಲಸ ನೀಡಲು ಅಧಿಕಾರಿಗಳು ಸೂಕ್ತಕ್ರಮವಹಿಸಬೇಕು' ಎಂದರು.</p>.<p>ಸಂಡೂರು ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ವಸಂತ್ ರಾಜ್, ಅಧಿಕಾರಿ ಮಹೇಶ್ ಕುಮಾರ್, ಪಿಡಿಒಗಳಾದ ಹನುಮಂತಪ್ಪ, ರಂಗಸ್ವಾಮಿ, ಕಾರ್ಯದರ್ಶಿ ಗಳಾದ ಬಸವರಾಜ್, ಹುಚ್ಚಪ್ಪ, ತಾಂತ್ರಿಕ ಸಂಯೋಜಕ ಯಂಕಪ್ಪ, ಸಿಬ್ಬಂದಿ ಮಂಜುನಾಥ, ಸುಭಾಸ್ ಚಂದ್ರ, ವಿವಿಧ ಗ್ರಾಮಗಳ ಕಾರ್ಮಿಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-25-1607802152</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>