<p><strong>ಸಂಡೂರು</strong>: ‘ಉತ್ತಮ ಆರೋಗ್ಯಕರ, ಸ್ವಚ್ಚ ಸಮಾಜ ನಿರ್ಮಾಣಕ್ಕಾಗಿ ಸಮಾಜದಲ್ಲಿನ ಎಲ್ಲ ಜನರ ಸಹಕಾರ ಬಹಳ ಮುಖ್ಯವಾಗಿದೆ’ ಎಂದು ಬಲ್ಡೋಟ ಸಮೂಹ ಗಣಿ ಕಂಪನಿಯ ವ್ಯವಸ್ಥಾಪಕ ರವಿ ಬಿಸುಗುಪ್ಪಿ ಹೇಳಿದರು.</p>.<p>ತಾಲ್ಲೂಕಿನ ವೆಂಕಟಗಿರಿ ಗ್ರಾಮದಲ್ಲಿ ಬಲ್ಡೋಟ ಸಮೂಹ ಗಣಿ ಕಂಪನಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ನಗರ, ಗ್ರಾಮೀಣ ಪ್ರದೇಶದಲ್ಲಿನ ಸಾರ್ವಜನಿಕರು ತಮ್ಮ ಮನೆಗಳ ಸುತ್ತಲೂ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದರು.</p>.<p>ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಶಾಲೆ, ರಸ್ತೆ, ಸೇರಿದಂತೆ ಇತರೆ ಪ್ರಮುಖ ಸ್ಥಳಗಳಲ್ಲಿ ಸಸಿ ನೆಡಲಾಯಿತು.</p>.<p>ಕಂಪನಿಯ ಅಧಿಕಾರಿಗಳಾದ ದೇಬೆಶ್ಗೋ ಬಿಂದಾ ದಾಸ್, ಎ.ಲತೀಫ್, ಮಹೇಶ್ ಮಾನಕೇರಿ, ಅಶೋಕ ದೇಶಪಾಂಡೆ, ಅನಂತ ರಾಘವ್, ಬಸವಪ್ರಭು, ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು</strong>: ‘ಉತ್ತಮ ಆರೋಗ್ಯಕರ, ಸ್ವಚ್ಚ ಸಮಾಜ ನಿರ್ಮಾಣಕ್ಕಾಗಿ ಸಮಾಜದಲ್ಲಿನ ಎಲ್ಲ ಜನರ ಸಹಕಾರ ಬಹಳ ಮುಖ್ಯವಾಗಿದೆ’ ಎಂದು ಬಲ್ಡೋಟ ಸಮೂಹ ಗಣಿ ಕಂಪನಿಯ ವ್ಯವಸ್ಥಾಪಕ ರವಿ ಬಿಸುಗುಪ್ಪಿ ಹೇಳಿದರು.</p>.<p>ತಾಲ್ಲೂಕಿನ ವೆಂಕಟಗಿರಿ ಗ್ರಾಮದಲ್ಲಿ ಬಲ್ಡೋಟ ಸಮೂಹ ಗಣಿ ಕಂಪನಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ನಗರ, ಗ್ರಾಮೀಣ ಪ್ರದೇಶದಲ್ಲಿನ ಸಾರ್ವಜನಿಕರು ತಮ್ಮ ಮನೆಗಳ ಸುತ್ತಲೂ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದರು.</p>.<p>ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಶಾಲೆ, ರಸ್ತೆ, ಸೇರಿದಂತೆ ಇತರೆ ಪ್ರಮುಖ ಸ್ಥಳಗಳಲ್ಲಿ ಸಸಿ ನೆಡಲಾಯಿತು.</p>.<p>ಕಂಪನಿಯ ಅಧಿಕಾರಿಗಳಾದ ದೇಬೆಶ್ಗೋ ಬಿಂದಾ ದಾಸ್, ಎ.ಲತೀಫ್, ಮಹೇಶ್ ಮಾನಕೇರಿ, ಅಶೋಕ ದೇಶಪಾಂಡೆ, ಅನಂತ ರಾಘವ್, ಬಸವಪ್ರಭು, ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>