<p><strong>ಬಳ್ಳಾರಿ:</strong> ಎರಡು ದಿನಗಳ ‘ಸಂಗಂ ಸಾಹಿತ್ಯ ಪುರಸ್ಕಾರ’ ಪ್ರದಾನ ಸಮಾರಂಭ ಇಂದಿನಿಂದ ಆರಂಭವಾಗಲಿದೆ. ಭಾನುವಾರ ಪ್ರಶಸ್ತಿ ವಿಜೇತರ ಘೋಷಣೆಯಾಗಲಿದೆ. </p>.<p>ಬಳ್ಳಾರಿಯ ಜ್ಞಾನಾಮೃತ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಕ್ತ ವರ್ಷದ ಪುರಸ್ಕೃತರ ಹೆಸರನ್ನು ಘೋಷಿಸಲಾಗುತ್ತದೆ. ಇದರ ಜೊತೆಗೆ ‘ಕನ್ನಡ ಸಮಕಾಲೀನ ಸಾಹಿತ್ಯ ಸ್ವರೂಪ ಹಾಗೂ ಸಂವೇದನೆ - ಮಾತುಕತೆ’ ವಿಚಾರ ಸಂಕಿರಣ ಆಯೋಜಿಸಲಾಗಿದೆ.</p>.<p>ಬಳ್ಳಾರಿಯ ಸಂಗಂ ಟ್ರಸ್ಟ್, ಸಾಹಿತ್ಯದ ಚಟುವಟಿಕೆಗಳಿಗಾಗಿ ಸ್ಥಾಪಿತವಾಗಿದ್ದು, ಸಮಕಾಲೀನ ಸೃಜನಶೀಲ ಪ್ರತಿಭೆಗಳನ್ನು ಗುರುತಿಸುತ್ತಾ ಸಾಗಿದೆ. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಿ, ವಿಚಾರ ಸಂಕಿರಣಗಳನ್ನು ನಡೆಸುತ್ತಾ ಈ ಸಂಸ್ಥೆ ಸಾಹಿತ್ಯ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಜೀವಂತವಾಗಿರಿಸಿದೆ.</p>.<p>2022-24ವರೆಗೆ ಪ್ರಕಟಗೊಂಡ ಕಾದಂಬರಿ ಪ್ರಕಾರಕ್ಕೆ ‘ಸಂಗಂ ಸಾಹಿತ್ಯ ಪುರಸ್ಕಾರ’ ನೀಡಲು ತೀರ್ಮಾನಿಸಲಾಗಿದೆ. ಪ್ರಸ್ತುತ ಪ್ರಶಸ್ತಿ ಸುತ್ತಿನ ಐದು ಕಾದಂಬರಿಕಾರರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯಾಸಕ್ತರೆಲ್ಲರೂ ಭಾಗವಹಿಸಬೇಕಾಗಿ ಸಂಸ್ಥೆ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಎರಡು ದಿನಗಳ ‘ಸಂಗಂ ಸಾಹಿತ್ಯ ಪುರಸ್ಕಾರ’ ಪ್ರದಾನ ಸಮಾರಂಭ ಇಂದಿನಿಂದ ಆರಂಭವಾಗಲಿದೆ. ಭಾನುವಾರ ಪ್ರಶಸ್ತಿ ವಿಜೇತರ ಘೋಷಣೆಯಾಗಲಿದೆ. </p>.<p>ಬಳ್ಳಾರಿಯ ಜ್ಞಾನಾಮೃತ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಕ್ತ ವರ್ಷದ ಪುರಸ್ಕೃತರ ಹೆಸರನ್ನು ಘೋಷಿಸಲಾಗುತ್ತದೆ. ಇದರ ಜೊತೆಗೆ ‘ಕನ್ನಡ ಸಮಕಾಲೀನ ಸಾಹಿತ್ಯ ಸ್ವರೂಪ ಹಾಗೂ ಸಂವೇದನೆ - ಮಾತುಕತೆ’ ವಿಚಾರ ಸಂಕಿರಣ ಆಯೋಜಿಸಲಾಗಿದೆ.</p>.<p>ಬಳ್ಳಾರಿಯ ಸಂಗಂ ಟ್ರಸ್ಟ್, ಸಾಹಿತ್ಯದ ಚಟುವಟಿಕೆಗಳಿಗಾಗಿ ಸ್ಥಾಪಿತವಾಗಿದ್ದು, ಸಮಕಾಲೀನ ಸೃಜನಶೀಲ ಪ್ರತಿಭೆಗಳನ್ನು ಗುರುತಿಸುತ್ತಾ ಸಾಗಿದೆ. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಿ, ವಿಚಾರ ಸಂಕಿರಣಗಳನ್ನು ನಡೆಸುತ್ತಾ ಈ ಸಂಸ್ಥೆ ಸಾಹಿತ್ಯ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಜೀವಂತವಾಗಿರಿಸಿದೆ.</p>.<p>2022-24ವರೆಗೆ ಪ್ರಕಟಗೊಂಡ ಕಾದಂಬರಿ ಪ್ರಕಾರಕ್ಕೆ ‘ಸಂಗಂ ಸಾಹಿತ್ಯ ಪುರಸ್ಕಾರ’ ನೀಡಲು ತೀರ್ಮಾನಿಸಲಾಗಿದೆ. ಪ್ರಸ್ತುತ ಪ್ರಶಸ್ತಿ ಸುತ್ತಿನ ಐದು ಕಾದಂಬರಿಕಾರರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯಾಸಕ್ತರೆಲ್ಲರೂ ಭಾಗವಹಿಸಬೇಕಾಗಿ ಸಂಸ್ಥೆ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>