<p><strong>ಹೊಸಪೇಟೆ (ವಿಜಯನಗರ):</strong> ಇಲ್ಲಿನ ಕೊಟ್ಟೂರುಸ್ವಾಮಿ ಮಠ ಬಳಿಯ ಮೇನ್ ಬಜಾರ್ನಲ್ಲಿ ಶುಕ್ರವಾರ ಸರ್ವಧರ್ಮ ರಥೋತ್ಸವ ವಿಶಿಷ್ಟವಾಗಿ ನೆರವೇರಿತು.</p>.<p>ಭಗವದ್ಗೀತೆ, ಬೈಬಲ್, ಕುರ್ಆನ್, ಸಿದ್ಧಾಂತ ಶಿಖಾಮನಿ ಸೇರಿ ವಿಶ್ವದ ಎಲ್ಲಾ ಧರ್ಮಗಳ ಗ್ರಂಥಗಳನ್ನು ತೇರಿನಲ್ಲಿ ಉತ್ಸವಮೂರ್ತಿ ಇಡುವ ಸ್ಥಳದಲ್ಲಿ ಇಟ್ಟು ಪೂಜಿಸಿ, ಉತ್ಸವ ನಡೆಸಲಾಯಿತು.</p>.<p>ಕೊಟ್ಟೂರು ಸ್ವಾಮಿಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಸಂಗನಬಸವ ಸ್ವಾಮೀಜಿ ಅವರು 9 ವರ್ಷಗಳ ಹಿಂದೆ ಸರ್ವಧರ್ಮ ರಥೋತ್ಸವವನ್ನು ಆರಂಭಿಸಿದ್ದರು.</p>.<p>‘ಈ ಮೂಲಕ ಮಠ ಯಾವುದೇ ಜಾತಿ, ಧರ್ಮ, ಜನಾಂಗಗಳಿಗೆ ಸೀಮಿತವಾಗಿಲ್ಲ, ಮಠವೆಂದರೆ ಸರ್ವ ಜನಾಂಗದ ಶಾಂತಿಯ ತಾಣ ಎಂಬ ಸಂದೇಶವನ್ನು ಸಾರಿದ್ದರು. 4 ವರ್ಷಗಳ ಹಿಂದೆ ಲಿಂಗೈಕ್ಯರಾದ, ಅವರು ಹುಟ್ಟುಹಾಕಿದ ಪರಂಪರೆಯನ್ನು ಇಂದಿನ ಗುರು ಕೊಟ್ಟೂರು ಬಸವಲಿಂಗ ಸ್ವಾಮೀಜಿ ಮುಂದುವರಿಸಿದ್ದಾರೆ.</p>.<p>ಮೇನ್ ಬಜಾರಿಗೆ ಹೊಂದಿಕೊಂಡಿರುವ ಮಠದ ಹೆಬ್ಬಾಗಿಲಿನಿಂದ ಆರಂಭವಾದ ರಥೋತ್ಸವ ಪಾದಗಟ್ಟಿ ಆಂಜನೇಯ ದೇವಸ್ಥಾನದವರೆಗೆ ಜರುಗಿತು. ರಥೋತ್ಸವದಲ್ಲಿ ಹಿಂದೂಗಳು, ಮುಸ್ಲಿಮರು, ಕ್ರೈಸ್ತರು, ಜೈನರು, ಬೌದ್ಧರು ಸೇರಿ ವಿವಿಧ ಹಲವಾರು ಸಮುದಾಯದವರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಇಲ್ಲಿನ ಕೊಟ್ಟೂರುಸ್ವಾಮಿ ಮಠ ಬಳಿಯ ಮೇನ್ ಬಜಾರ್ನಲ್ಲಿ ಶುಕ್ರವಾರ ಸರ್ವಧರ್ಮ ರಥೋತ್ಸವ ವಿಶಿಷ್ಟವಾಗಿ ನೆರವೇರಿತು.</p>.<p>ಭಗವದ್ಗೀತೆ, ಬೈಬಲ್, ಕುರ್ಆನ್, ಸಿದ್ಧಾಂತ ಶಿಖಾಮನಿ ಸೇರಿ ವಿಶ್ವದ ಎಲ್ಲಾ ಧರ್ಮಗಳ ಗ್ರಂಥಗಳನ್ನು ತೇರಿನಲ್ಲಿ ಉತ್ಸವಮೂರ್ತಿ ಇಡುವ ಸ್ಥಳದಲ್ಲಿ ಇಟ್ಟು ಪೂಜಿಸಿ, ಉತ್ಸವ ನಡೆಸಲಾಯಿತು.</p>.<p>ಕೊಟ್ಟೂರು ಸ್ವಾಮಿಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಸಂಗನಬಸವ ಸ್ವಾಮೀಜಿ ಅವರು 9 ವರ್ಷಗಳ ಹಿಂದೆ ಸರ್ವಧರ್ಮ ರಥೋತ್ಸವವನ್ನು ಆರಂಭಿಸಿದ್ದರು.</p>.<p>‘ಈ ಮೂಲಕ ಮಠ ಯಾವುದೇ ಜಾತಿ, ಧರ್ಮ, ಜನಾಂಗಗಳಿಗೆ ಸೀಮಿತವಾಗಿಲ್ಲ, ಮಠವೆಂದರೆ ಸರ್ವ ಜನಾಂಗದ ಶಾಂತಿಯ ತಾಣ ಎಂಬ ಸಂದೇಶವನ್ನು ಸಾರಿದ್ದರು. 4 ವರ್ಷಗಳ ಹಿಂದೆ ಲಿಂಗೈಕ್ಯರಾದ, ಅವರು ಹುಟ್ಟುಹಾಕಿದ ಪರಂಪರೆಯನ್ನು ಇಂದಿನ ಗುರು ಕೊಟ್ಟೂರು ಬಸವಲಿಂಗ ಸ್ವಾಮೀಜಿ ಮುಂದುವರಿಸಿದ್ದಾರೆ.</p>.<p>ಮೇನ್ ಬಜಾರಿಗೆ ಹೊಂದಿಕೊಂಡಿರುವ ಮಠದ ಹೆಬ್ಬಾಗಿಲಿನಿಂದ ಆರಂಭವಾದ ರಥೋತ್ಸವ ಪಾದಗಟ್ಟಿ ಆಂಜನೇಯ ದೇವಸ್ಥಾನದವರೆಗೆ ಜರುಗಿತು. ರಥೋತ್ಸವದಲ್ಲಿ ಹಿಂದೂಗಳು, ಮುಸ್ಲಿಮರು, ಕ್ರೈಸ್ತರು, ಜೈನರು, ಬೌದ್ಧರು ಸೇರಿ ವಿವಿಧ ಹಲವಾರು ಸಮುದಾಯದವರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>