<p><strong>ಸಂಡೂರು:</strong> ‘ಸಮಾಜದಲ್ಲಿನ ಎಲ್ಲ ಜನರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ, ಕ್ರಾಂತಿಯು ಅವಶ್ಯಕ. ಸಮಾಜವಾದಿಗಳು ಮಾತ್ರ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುತ್ತಾರೆ. ಸಮ ಸಮಾಜದ ನಿರ್ಮಾಣಕ್ಕಾಗಿ ವೈಜ್ಞಾನಿಕ ಮನಸ್ಥಿತಿ ಅಗತ್ಯ’ ಎಂದು ನಟ ಚೇತನ್ ಅಹಿಂಸಾ ಹೇಳಿದರು.</p>.<p>ತಾಲ್ಲೂಕಿನ ತಾಳೂರು ಗ್ರಾಮದಲ್ಲಿ ಬೆಂಕ್ಯಮ್ಮ ದೇವಿ ಸೇವಾ ಟ್ರಸ್ಟ್, ವಿವಿಧ ದಲಿತ ಸಂಘಟನೆಗಳ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಆಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಸಮಾಜದಲ್ಲಿ ಪುರುಷ ಪ್ರಧಾನ ವ್ಯವಸ್ಥೆಯಿಂದ ಅಸಮಾನತೆ ಉಂಟಾಗಿದೆ. ಅಸಮಾನತೆಯ ವ್ಯವಸ್ಥೆಯನ್ನು ನಾವುಗಳು ತಿದ್ದಬೇಕು. ಅಸಮಾನತೆ, ಅನ್ಯಾಯವನ್ನು ನಿರಂತರವಾಗಿ ಪ್ರಶ್ನೆ ಮಾಡಬೇಕು. ಆಳುವ ಶಕ್ತಿಗಳು ಮನಸ್ಸು ಮಾಡಿದರೆ ಮಾತ್ರ ನಾವು ಅಭಿವೃದ್ಧಿಯಾಗಲು ಸಾಧ್ಯ. ಜನರು ರಾಜಕೀಯ ಗಟ್ಟಿತನವನ್ನು ಬೆಳಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ನೂತನ ಗ್ರಾಮ ಘಟಕದ ನಾಮಫಲಕವನ್ನು ಗಣ್ಯರು ಉದ್ಘಾಟಿಸಿದರು.<br /> ಗ್ರಾಮ ಪಂಚಾತಿಯಿ ಅಧ್ಯಕ್ಷೆ ಷಣ್ಮುಕಮ್ಮ, ಉಪಾಧ್ಯಕ್ಷೆ ಎಚ್.ಕನಪ್ಪ, ಮುಖಂಡರಾದ ಯಂಕಮ್ಮ, ಸುಗ್ಗೇನಹಳ್ಳಿ ರಮೇಶ್, ನಿಂಗಪ್ಪ, ಶಂಕರ್, ಈರಣ್ಣ, ಹನುಮಂತಪ್ಪ, ಶಂಕರ್, ಕಸ್ತೂರಿ ಮಂಜುನಾಥ್, ಸಾರ್ವಜನಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ‘ಸಮಾಜದಲ್ಲಿನ ಎಲ್ಲ ಜನರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ, ಕ್ರಾಂತಿಯು ಅವಶ್ಯಕ. ಸಮಾಜವಾದಿಗಳು ಮಾತ್ರ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುತ್ತಾರೆ. ಸಮ ಸಮಾಜದ ನಿರ್ಮಾಣಕ್ಕಾಗಿ ವೈಜ್ಞಾನಿಕ ಮನಸ್ಥಿತಿ ಅಗತ್ಯ’ ಎಂದು ನಟ ಚೇತನ್ ಅಹಿಂಸಾ ಹೇಳಿದರು.</p>.<p>ತಾಲ್ಲೂಕಿನ ತಾಳೂರು ಗ್ರಾಮದಲ್ಲಿ ಬೆಂಕ್ಯಮ್ಮ ದೇವಿ ಸೇವಾ ಟ್ರಸ್ಟ್, ವಿವಿಧ ದಲಿತ ಸಂಘಟನೆಗಳ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಆಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಸಮಾಜದಲ್ಲಿ ಪುರುಷ ಪ್ರಧಾನ ವ್ಯವಸ್ಥೆಯಿಂದ ಅಸಮಾನತೆ ಉಂಟಾಗಿದೆ. ಅಸಮಾನತೆಯ ವ್ಯವಸ್ಥೆಯನ್ನು ನಾವುಗಳು ತಿದ್ದಬೇಕು. ಅಸಮಾನತೆ, ಅನ್ಯಾಯವನ್ನು ನಿರಂತರವಾಗಿ ಪ್ರಶ್ನೆ ಮಾಡಬೇಕು. ಆಳುವ ಶಕ್ತಿಗಳು ಮನಸ್ಸು ಮಾಡಿದರೆ ಮಾತ್ರ ನಾವು ಅಭಿವೃದ್ಧಿಯಾಗಲು ಸಾಧ್ಯ. ಜನರು ರಾಜಕೀಯ ಗಟ್ಟಿತನವನ್ನು ಬೆಳಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ನೂತನ ಗ್ರಾಮ ಘಟಕದ ನಾಮಫಲಕವನ್ನು ಗಣ್ಯರು ಉದ್ಘಾಟಿಸಿದರು.<br /> ಗ್ರಾಮ ಪಂಚಾತಿಯಿ ಅಧ್ಯಕ್ಷೆ ಷಣ್ಮುಕಮ್ಮ, ಉಪಾಧ್ಯಕ್ಷೆ ಎಚ್.ಕನಪ್ಪ, ಮುಖಂಡರಾದ ಯಂಕಮ್ಮ, ಸುಗ್ಗೇನಹಳ್ಳಿ ರಮೇಶ್, ನಿಂಗಪ್ಪ, ಶಂಕರ್, ಈರಣ್ಣ, ಹನುಮಂತಪ್ಪ, ಶಂಕರ್, ಕಸ್ತೂರಿ ಮಂಜುನಾಥ್, ಸಾರ್ವಜನಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>