<p><strong>ಬಳ್ಳಾರಿ:</strong> ಬೇಡ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿ ಜನಗಣತಿಯಲ್ಲಿ ಪರಿಗಣಿಸಬಾರದು ಎಂದು ಒತ್ತಾಯಿಸಿ ನಗರದ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಎಸ್ಸಿ, ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಗುರುವಾರ ಪ್ರತಿಭಟನೆ ನಡೆಯಿತು.</p>.<p>ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ‘ಬೇಡ ಜಂಗಮರು ಸಮಾಜದಲ್ಲಿ ಮೇಲ್ಜಾತಿಯವರೆಂದು ಗುರುತಿಸಿಕೊಂಡಿದ್ದಾರೆ. ಅವರು ದೇವಸ್ಥಾನದಲ್ಲಿ ಪೂಜೆ ಮಾಡುತ್ತಾ, ಅತ್ಯಂತ ಉನ್ನತ ಸ್ಥಾನದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಜನಾಂಗ ವೀರಶೈವ ಜಂಗಮ ಸಮುದಾಯದವರು ಎಂದು ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>‘ದಲಿತರ ಜಾತಿಗಣತಿಯಲ್ಲಿ ತಮ್ಮ ಸಮುದಾಯವನ್ನು ಸಮೀಕ್ಷೆಗೆ ಒಳಪಡಿಸಿ ಎಂದು ಗಣಿತಿದಾರರನ್ನು ಒತ್ತಾಯಿಸುವುದು ಮತ್ತು ಅವರ ಕರ್ತವ್ಯಕ್ಕೆ ಅಡಚಣೆಯುಂಟು ಮಾಡುವ ಕೆಲಸಗಳಿಗೆ ಜಂಗಮರು ಮುಂದಾಗಿದ್ದಾರೆ. ವೀರಶೈವ ಜಂಗಮರನ್ನು ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಜನಗಣತಿಯಲ್ಲಿ ಪರಿಗಣಿಸಬಾರದು’ ಎಂದು ಒತ್ತಾಯಿಸಿದರು.</p>.<p>ಈ ಹಿಂದೆ ಕರ್ನಾಟಕದಲ್ಲಿ ವೀರಶೈವ ಜಂಗಮರು ತಮ್ಮನ್ನು ‘ಬೇಡ ಜಂಗಮರು’ ಎಂದು ಕರೆದುಕೊಳ್ಳುತ್ತಾ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಈ ವೀರಶೈವ ಜಂಗಮರು ‘ಬೇಡ ಜಂಗಮ’ ಎಂದು ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದದ್ದನ್ನು ವಿರೋಧಿಸಿ ಆನೇಕ ಪ್ರತಿಭಟನೆಗಳು ನಡೆದ ಬಳಿಕ ಪ್ರವರ್ಗವಾರು ಪಟ್ಟಿಯನ್ನು ಹೊರಡಿಸಿತು. ಸರ್ಕಾರ ಈ ಆದೇಶವನ್ನು ಹೊರಡಿಸಿದ ನಂತರವೂ ವೀರಶೈವ ಜಂಗಮ ಸಮುದಾಯದವರು ವಾಮಮಾರ್ಗಗಳ ಮೂಲಕ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಯತ್ನಿಸುತ್ತಿದ್ದಾರೆ ಮತ್ತು ಪಡೆಯುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾರಿಗೆ ಸೇರುವ ‘ಬುಡ್ಗ ಜಂಗಮ’ರಾದ ನಮಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘಟನೆಯ ಪದಾಧಿಕಾರಿಗಳಾದ ಗಂಗಾಧರ, ಗೂಳೆಪ್ಪ, ಕೊಂಡಪ್ಪ, ನಾಗೇಶ್ ಬಾಬು, ಅಜ್ಜಪ್ಪ, ರಾಮಾಂಜಿನಿ ಸೇರಿ ಬುಡ್ಗಜಂಗಮ ಸಮುದಾಯದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಬೇಡ ಜಂಗಮ ಸಮುದಾಯವನ್ನು ಪರಿಶಿಷ್ಟ ಜಾತಿ ಜನಗಣತಿಯಲ್ಲಿ ಪರಿಗಣಿಸಬಾರದು ಎಂದು ಒತ್ತಾಯಿಸಿ ನಗರದ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಎಸ್ಸಿ, ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಗುರುವಾರ ಪ್ರತಿಭಟನೆ ನಡೆಯಿತು.</p>.<p>ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ‘ಬೇಡ ಜಂಗಮರು ಸಮಾಜದಲ್ಲಿ ಮೇಲ್ಜಾತಿಯವರೆಂದು ಗುರುತಿಸಿಕೊಂಡಿದ್ದಾರೆ. ಅವರು ದೇವಸ್ಥಾನದಲ್ಲಿ ಪೂಜೆ ಮಾಡುತ್ತಾ, ಅತ್ಯಂತ ಉನ್ನತ ಸ್ಥಾನದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಜನಾಂಗ ವೀರಶೈವ ಜಂಗಮ ಸಮುದಾಯದವರು ಎಂದು ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>‘ದಲಿತರ ಜಾತಿಗಣತಿಯಲ್ಲಿ ತಮ್ಮ ಸಮುದಾಯವನ್ನು ಸಮೀಕ್ಷೆಗೆ ಒಳಪಡಿಸಿ ಎಂದು ಗಣಿತಿದಾರರನ್ನು ಒತ್ತಾಯಿಸುವುದು ಮತ್ತು ಅವರ ಕರ್ತವ್ಯಕ್ಕೆ ಅಡಚಣೆಯುಂಟು ಮಾಡುವ ಕೆಲಸಗಳಿಗೆ ಜಂಗಮರು ಮುಂದಾಗಿದ್ದಾರೆ. ವೀರಶೈವ ಜಂಗಮರನ್ನು ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಜನಗಣತಿಯಲ್ಲಿ ಪರಿಗಣಿಸಬಾರದು’ ಎಂದು ಒತ್ತಾಯಿಸಿದರು.</p>.<p>ಈ ಹಿಂದೆ ಕರ್ನಾಟಕದಲ್ಲಿ ವೀರಶೈವ ಜಂಗಮರು ತಮ್ಮನ್ನು ‘ಬೇಡ ಜಂಗಮರು’ ಎಂದು ಕರೆದುಕೊಳ್ಳುತ್ತಾ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಈ ವೀರಶೈವ ಜಂಗಮರು ‘ಬೇಡ ಜಂಗಮ’ ಎಂದು ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದದ್ದನ್ನು ವಿರೋಧಿಸಿ ಆನೇಕ ಪ್ರತಿಭಟನೆಗಳು ನಡೆದ ಬಳಿಕ ಪ್ರವರ್ಗವಾರು ಪಟ್ಟಿಯನ್ನು ಹೊರಡಿಸಿತು. ಸರ್ಕಾರ ಈ ಆದೇಶವನ್ನು ಹೊರಡಿಸಿದ ನಂತರವೂ ವೀರಶೈವ ಜಂಗಮ ಸಮುದಾಯದವರು ವಾಮಮಾರ್ಗಗಳ ಮೂಲಕ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರಗಳನ್ನು ಪಡೆಯಲು ಯತ್ನಿಸುತ್ತಿದ್ದಾರೆ ಮತ್ತು ಪಡೆಯುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾರಿಗೆ ಸೇರುವ ‘ಬುಡ್ಗ ಜಂಗಮ’ರಾದ ನಮಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘಟನೆಯ ಪದಾಧಿಕಾರಿಗಳಾದ ಗಂಗಾಧರ, ಗೂಳೆಪ್ಪ, ಕೊಂಡಪ್ಪ, ನಾಗೇಶ್ ಬಾಬು, ಅಜ್ಜಪ್ಪ, ರಾಮಾಂಜಿನಿ ಸೇರಿ ಬುಡ್ಗಜಂಗಮ ಸಮುದಾಯದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>