’ನಗರದಲ್ಲಿನ ಮಹಿಳೆಯರಿಗೆ ಸಂಘಗಳನ್ನು ಕಟ್ಟಿಕೊಳ್ಳುವಂತೆ ಹೇಳಿ, ಅವರಿಗೆ ಸಾಲ ನೀಡಿ, ನಂತರ ಸಾಲ ವಸೂಲಾತಿಗೆ ಏಜೆಂಟರ ಮೂಲಕ ಮಾನಸಿಕ ಕಿರುಕುಳ, ದೌರ್ಜನ್ಯ ಎಸಗಲಾಗುತ್ತಿದೆ. ಒಬ್ಬ ಮಹಿಳೆ ಸಾಲ ಕಟ್ಟದಿದ್ದಲ್ಲಿ ಇಡೀ ಸಂಘದ ಮಹಿಳೆಯರನ್ನು ಹೊಣೆಗಾರರಾಗಿ ಮಾಡಲಾಗುತ್ತಿದೆ‘ ಎಂದು ಸಂಘದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಆರೋಪಿಸಿದ್ದಾರೆ.