<p><strong>ಬಳ್ಳಾರಿ: </strong>ಪತ್ರಕರ್ತೆ ಗೌರಿಲಂಕೇಶ್ ಮತ್ತು ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆಯನ್ನು ವಿರೋಧಿಸಿ ಸೆ.5ರಂದು ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ ನಡೆಯಲಿದೆ ಎಂದು ಎನ್.ಡಿ.ವೆಂಕಮ್ಮ ತಿಳಿಸಿದರು.</p>.<p>ಗೌರಿ ಲಂಕೇಶ್ ಬಳಗ ಮತ್ತು ಗೌರಿ ಸ್ಮಾರಕ ಟ್ರಸ್ಟ್ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶದ ಅಂಗವಾಗಿ ಅಂದುಬೆಳಿಗ್ಗೆ 8ಕ್ಕೆ ಗೌರಿ ಸಮಾಧಿ ಬಳಿ ಶ್ರದ್ಧಾಂಜಲಿ, 10.30ಕ್ಕೆ ಆನಂದ್ ರಾವ್ ವೃತ್ತ ಸಮೀಪದ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ಮತ್ತು ಮಧ್ಯಾಹ್ನ 2.30ಕ್ಕೆ ಸಮಾವೇಶ ನಡೆಯಲಿದೆ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ. ವಿಚಾರವಾದಿಗಳ ಕೊಲೆ, ಮಾನವ ಹಕ್ಕುಗಳ ಹೋರಾಟಗಾರರನ್ನು ಬಂಧಿಸಿ ದನಿಯನ್ನು ಹತ್ತಿಕ್ಕಲಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>’ಶಾಸಕ ಜಿಗ್ನೇಶ್ ಮೇವಾನಿ, ಲೇಖಕರಾದ ಚಂದ್ರಶೇಖರ್ ಕಂಬಾರ್, ರಹಮತ್ ತರಕೇರೆ, ಬರಗೂರು ರಾಮಚಂದ್ರಪ್ಪ ಸಮಾವೇಶದಲ್ಲಿ ಭಾಗವಹಿಸಿ, ಉಗ್ರ ಹಿಂದೂವಾದ ಪ್ರತಿಪಾದನೆಯ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದೂ ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದಾರೆ’ ಎಂದರು.</p>.<p>ಮುಖಂಡರಾದಎ.ಕೆ.ಮಂಜಪ್ಪ, ಗೌರಿ ಬಳಗದ ಚೆನ್ನಮ್ಮ, ವಸಂತ್, ಮಲ್ಲಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಪತ್ರಕರ್ತೆ ಗೌರಿಲಂಕೇಶ್ ಮತ್ತು ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆಯನ್ನು ವಿರೋಧಿಸಿ ಸೆ.5ರಂದು ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ ನಡೆಯಲಿದೆ ಎಂದು ಎನ್.ಡಿ.ವೆಂಕಮ್ಮ ತಿಳಿಸಿದರು.</p>.<p>ಗೌರಿ ಲಂಕೇಶ್ ಬಳಗ ಮತ್ತು ಗೌರಿ ಸ್ಮಾರಕ ಟ್ರಸ್ಟ್ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶದ ಅಂಗವಾಗಿ ಅಂದುಬೆಳಿಗ್ಗೆ 8ಕ್ಕೆ ಗೌರಿ ಸಮಾಧಿ ಬಳಿ ಶ್ರದ್ಧಾಂಜಲಿ, 10.30ಕ್ಕೆ ಆನಂದ್ ರಾವ್ ವೃತ್ತ ಸಮೀಪದ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ಮತ್ತು ಮಧ್ಯಾಹ್ನ 2.30ಕ್ಕೆ ಸಮಾವೇಶ ನಡೆಯಲಿದೆ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ. ವಿಚಾರವಾದಿಗಳ ಕೊಲೆ, ಮಾನವ ಹಕ್ಕುಗಳ ಹೋರಾಟಗಾರರನ್ನು ಬಂಧಿಸಿ ದನಿಯನ್ನು ಹತ್ತಿಕ್ಕಲಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>’ಶಾಸಕ ಜಿಗ್ನೇಶ್ ಮೇವಾನಿ, ಲೇಖಕರಾದ ಚಂದ್ರಶೇಖರ್ ಕಂಬಾರ್, ರಹಮತ್ ತರಕೇರೆ, ಬರಗೂರು ರಾಮಚಂದ್ರಪ್ಪ ಸಮಾವೇಶದಲ್ಲಿ ಭಾಗವಹಿಸಿ, ಉಗ್ರ ಹಿಂದೂವಾದ ಪ್ರತಿಪಾದನೆಯ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದೂ ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದಾರೆ’ ಎಂದರು.</p>.<p>ಮುಖಂಡರಾದಎ.ಕೆ.ಮಂಜಪ್ಪ, ಗೌರಿ ಬಳಗದ ಚೆನ್ನಮ್ಮ, ವಸಂತ್, ಮಲ್ಲಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>