‘ಒಂದೇ ಬಸ್ಗೆ ನೂರಾರು ಜನ ಮುಗಿ ಬೀಳುತ್ತಿರುವುದರಿಂದ ವಿದ್ಯಾರ್ಥಿನಿಯರು, ಮಹಿಳೆಯರು, ಹಿರಿಯ ನಾಗರಿಕರು ಬಸ್ ಹತ್ತಲು ತೊಂದರೆ ಅನುಭವಿಸುತ್ತಿದ್ದಾರೆ. ಬಸ್ ಸಿಗದ ಕಾರಣ ಅನೇಕ ವಿದ್ಯಾರ್ಥಿಗಳು ಕಿರುಪರೀಕ್ಷೆ, ಪರೀಕ್ಷೆ ತಪ್ಪಿಸಿಕೊಂಡಿರುವ ನಿದರ್ಶನಗಳಿವೆ. ಅನೇಕರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗಳಿಗೆ ಹೋಗಲು ಆಗುತ್ತಿಲ್ಲ. ಹಾಗಾಗಿ ಇನ್ನೆರಡು ಬಸ್ಸುಗಳನ್ನು ಓಡಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.