ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದ ಮತದಾನ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀದೇವಿ ಎಂಬುವವರು ರಕ್ತದೊತ್ತಡ ಕಡಿಮೆಯಾಗಿ ಪ್ರಜ್ಞಾಹೀನರಾದರು. ತಕ್ಷಣವೇ ಎಚ್ಚೆತ್ತ ಮತಗಟ್ಟೆ ಸಿಬ್ಬಂದಿ ಅವರನ್ನು ಆಂಬ್ಯುಲೆನ್ಸ್ ಮೂಲಕ ವಿಮ್ಸ್ಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದರು. ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಅಬ್ದುಲ್ಲಾ, ಸಿದ್ದಮ್ಮನಹಳ್ಳಿ ವೈದ್ಯಾಧಿಕಾರಿ ಡಾ. ದಿವ್ಯಾ ಅವರು ನಿಗಾ ವಹಿಸಿ ಆರೈಕೆ ಮಾಡಿದರು.