<p><strong>ಬಳ್ಳಾರಿ</strong>: ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ <br>ಬಜೆಟ್ನಲ್ಲಿ ಘೋಷಿಸಿದಂತೆ ₹1,500 ಕೋಟಿ ಅನುದಾನದಲ್ಲಿ ಕೇವಲ ₹57 ಕೋಟಿ ಬಿಡುಗಡೆ ಮಾಡಿ ಅಹಿಂದ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರ ವಂಚಿಸಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ ಆರೋಪಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ‘ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಅವರು , ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡದೆ ನಿರ್ಲಕ್ಷಿಸಿದ್ದಾರೆ’ ಎಂದು ಆರೋಪಿಸಿದರು. </p>.<p>‘ಸ್ವ-ಉದ್ಯೋಗ ಯೋಜನೆ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗುತ್ತಿದ್ದ ಉಚಿತ ಬೋರ್ವೆಲ್ ಕಾರ್ಯಕ್ರಮಗಳು ಬಹುತೇಕ ಸ್ಥಗಿತಗೊಂಡಿವೆ. ಗ್ಯಾರೆಂಟಿ ಯೋಜನೆಯ ಅನುಷ್ಠಾನಕ್ಕಾಗಿ ಹಿಂದುಳಿದ ಸಮುದಾಯಗಳ ಹಣವೆಲ್ಲವೂ ವರ್ಗಾವಣೆಯಾಗುತ್ತಿದೆ’ ಎಂದು ಆರೋಪಿಸಿದರು. </p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ, ಕೆ.ಎಸ್.ದಿವಾಕರ್ ಮತ್ತು ಹನುಮೇಶ್ ಉಪ್ಪಾರ, ಸಿದ್ದೇಶ, ರಾಣಿತೋಟ ವೀರೇಶ್, ರಾಮಾಂಜನಿ, ರಾಮಚಂದ್ರಯ್ಯ, ಸುಮಾರೆಡ್ಡಿ, ಪುಷ್ಪ, ಸುಗುಣ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ <br>ಬಜೆಟ್ನಲ್ಲಿ ಘೋಷಿಸಿದಂತೆ ₹1,500 ಕೋಟಿ ಅನುದಾನದಲ್ಲಿ ಕೇವಲ ₹57 ಕೋಟಿ ಬಿಡುಗಡೆ ಮಾಡಿ ಅಹಿಂದ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರ ವಂಚಿಸಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ ಆರೋಪಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ‘ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಅವರು , ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡದೆ ನಿರ್ಲಕ್ಷಿಸಿದ್ದಾರೆ’ ಎಂದು ಆರೋಪಿಸಿದರು. </p>.<p>‘ಸ್ವ-ಉದ್ಯೋಗ ಯೋಜನೆ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗುತ್ತಿದ್ದ ಉಚಿತ ಬೋರ್ವೆಲ್ ಕಾರ್ಯಕ್ರಮಗಳು ಬಹುತೇಕ ಸ್ಥಗಿತಗೊಂಡಿವೆ. ಗ್ಯಾರೆಂಟಿ ಯೋಜನೆಯ ಅನುಷ್ಠಾನಕ್ಕಾಗಿ ಹಿಂದುಳಿದ ಸಮುದಾಯಗಳ ಹಣವೆಲ್ಲವೂ ವರ್ಗಾವಣೆಯಾಗುತ್ತಿದೆ’ ಎಂದು ಆರೋಪಿಸಿದರು. </p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ, ಕೆ.ಎಸ್.ದಿವಾಕರ್ ಮತ್ತು ಹನುಮೇಶ್ ಉಪ್ಪಾರ, ಸಿದ್ದೇಶ, ರಾಣಿತೋಟ ವೀರೇಶ್, ರಾಮಾಂಜನಿ, ರಾಮಚಂದ್ರಯ್ಯ, ಸುಮಾರೆಡ್ಡಿ, ಪುಷ್ಪ, ಸುಗುಣ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>