ಹಗರಿಬೊಮ್ಮನಳ್ಳಿ: ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಅನಂತನಾಥ ಜೈನ ಮಂದಿರದ ರಜತ ಮಹೋತ್ಸವ ಕಾರ್ಯಕ್ರಮ ಮೇ 14 ಮತ್ತು 15ರಂದು ಹಮ್ಮಿಕೊಳ್ಳಲಾಗಿದೆ ಎಂದು ಜೈನ ಸಮಾಜದ ಅಧ್ಯಕ್ಷ ಕಾಂತಿಲಾಲ್ ಜೈನ್ ತಿಳಿಸಿದ್ದಾರೆ.
ಕಾರ್ಯಕ್ರಮವು ವಿಜಯ ಹೀರಾಚಂದ್ ಸುರೀಶ್ವರಜಿ ಮಹಾಗುರುಗಳ ಸಾನ್ನಿಧ್ಯದಲ್ಲಿ ಶೋಭಾಯಾತ್ರೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಶಾಸಕ ಕೆ.ನೇಮರಾಜನಾಯ್ಕ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 15ರಂದು ಜೈನಮಂದಿರ ಕಳಸ ಧ್ವಜಾರೋಹಣ ಕಾರ್ಯಕ್ರಮದಲ್ಲಿ ನಂದಿಪುರದ ಮಹೇಶ್ವರ ಸ್ವಾಮೀಜಿ, ಹಾಲಸಿದ್ಧೇಶ್ವರ ಸ್ವಾಮೀಜಿ ಭಾಗವಹಿಸುವರು.