<p><strong>ಬಳ್ಳಾರಿ</strong>: ಶಾಲೆ ಆರಂಭವಾದ ಎರಡನೇ ದಿನವೇ ಮಕ್ಕಳಿಗೆ ‘ಶಾಕ್’ ಕೊಟ್ಟ ಪ್ರಸಂಗ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ನಡೆದಿದೆ. ಆಡಳಿತ ಮಂಡಳಿ ಮಾಡಿಕೊಂಡಿರುವ ಎಡವಟ್ಟಿನಿಂದ ಮಕ್ಕಳು ಬೀದಿಗೆ ಬಿದ್ದಿದ್ದು, ರಸ್ತೆ ಬದಿಯ ಮರದ ಕೆಳಗೆ ಪಾಠ ಕೇಳುವಂತಾಗಿದೆ.</p><p>ಶಾಲಾ ಆಡಳಿತ ಮಂಡಳಿಯು ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲ ಪಡೆದು ಮರುಪಾವತಿ ಮಾಡದಿದ್ದರಿಂದ ಶಾಲೆಗೆ ಬೀಗ ಹಾಕಲಾಗಿದೆ. ಶಾಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಸುಮಾರು 400 ಮಕ್ಕಳು ಓದುತ್ತಿದ್ದಾರೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ (ಬಿಇಒ) ಗುರಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ಮಕ್ಕಳು ಬೀದಿ ಬದಿಯಲ್ಲಿ ಕುಳಿತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲಾ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸೋಮವಾರದಿಂದ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಡಿಡಿಪಿಐ ಅಂದಾನಪ್ಪ ವಡಿಗೇರಿ ಭರವಸೆ ನೀಡಿದರು.</p><p>‘ಆಡಳಿತ ಮಂಡಳಿಯವರು ಶಾಲೆಯ ಮೇಲೆ ಸಾಲ ಪಡೆದಿದ್ದಾರೆ. ಆಂಧ್ರ ಮೂಲದ ಖಾಸಗಿ ಹಣಕಾಸು ಸಂಸ್ಥೆ ಸಾಲ ಕೊಟ್ಟಿದೆ. ಸಾಲ ಸರಿಯಾಗಿ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ನ್ಯಾಯಲಯದಿಂದ ಆದೇಶ ತಂದು ಬೀಗ ಹಾಕಲಾಗಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಶಾಲೆ ಆರಂಭವಾದ ಎರಡನೇ ದಿನವೇ ಮಕ್ಕಳಿಗೆ ‘ಶಾಕ್’ ಕೊಟ್ಟ ಪ್ರಸಂಗ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ನಡೆದಿದೆ. ಆಡಳಿತ ಮಂಡಳಿ ಮಾಡಿಕೊಂಡಿರುವ ಎಡವಟ್ಟಿನಿಂದ ಮಕ್ಕಳು ಬೀದಿಗೆ ಬಿದ್ದಿದ್ದು, ರಸ್ತೆ ಬದಿಯ ಮರದ ಕೆಳಗೆ ಪಾಠ ಕೇಳುವಂತಾಗಿದೆ.</p><p>ಶಾಲಾ ಆಡಳಿತ ಮಂಡಳಿಯು ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲ ಪಡೆದು ಮರುಪಾವತಿ ಮಾಡದಿದ್ದರಿಂದ ಶಾಲೆಗೆ ಬೀಗ ಹಾಕಲಾಗಿದೆ. ಶಾಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಸುಮಾರು 400 ಮಕ್ಕಳು ಓದುತ್ತಿದ್ದಾರೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ (ಬಿಇಒ) ಗುರಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p><p>ಮಕ್ಕಳು ಬೀದಿ ಬದಿಯಲ್ಲಿ ಕುಳಿತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲಾ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸೋಮವಾರದಿಂದ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಡಿಡಿಪಿಐ ಅಂದಾನಪ್ಪ ವಡಿಗೇರಿ ಭರವಸೆ ನೀಡಿದರು.</p><p>‘ಆಡಳಿತ ಮಂಡಳಿಯವರು ಶಾಲೆಯ ಮೇಲೆ ಸಾಲ ಪಡೆದಿದ್ದಾರೆ. ಆಂಧ್ರ ಮೂಲದ ಖಾಸಗಿ ಹಣಕಾಸು ಸಂಸ್ಥೆ ಸಾಲ ಕೊಟ್ಟಿದೆ. ಸಾಲ ಸರಿಯಾಗಿ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ನ್ಯಾಯಲಯದಿಂದ ಆದೇಶ ತಂದು ಬೀಗ ಹಾಕಲಾಗಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>