ಕಾಲೇಜು ಪ್ರಾರಂಭಗೊಂಡು 10 ವರ್ಷಕಳೆದಿದೆ. ಈವರೆಗೂ ಸರ್ಕಾರ ಉಪನ್ಯಾಸಕರನ್ನು ನೇಮಿಸಿಲ್ಲ. ಪರಿಣಾಮ ಅತಿಥಿ ಉಪನ್ಯಾಸಕರನ್ನು ಅವಲಂಭಿಸಬೇಕಾದ ಅನಿವಾರ್ಯತೆ ಇದೆ. ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗವಿದ್ದು 120 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಸೌಲಭ್ಯಗಳ ಕೊರತೆಯ ಪರಿಣಾಮ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಈ ವರ್ಷ ಕೇವಲ 52 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.
ಕುರುಗೋಡು ಸಮೀಪದ ಸಿರಿಗೇರಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿನಲ್ಲಿ ಶೌಚಾಲಯ ನಿರುಪಯುಕ್ತವಾಗಿರುವುದು
ಕುರುಗೋಡು ಸಮೀಪದ ಸಿರಿಗೇರಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿ ಆವರಣದಲ್ಲಿ ಮದ್ಯದಬಾಟಲಿ ಬಿದ್ದಿರುವುದು
ನನ್ನ ಅವಧಿಯಲ್ಲಿ ಕಾಲೇಜಿಗೆ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಖುದ್ದು ಭೇಟಿ ನೀಡಿ ಕಾಲೇಜಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಸಮಸ್ಯೆ ಪರಿಹರಿಸಲಾಗುವುದು
–ಬಿ.ಎಂ. ನಾಗರಾಜ, ಶಾಸಕ
ಪೀಠೋಪಕರಣ ಖರೀದಿಗೆ ₹2 ಲಕ್ಷ ಅನುದಾನ ಸಿಕ್ಕಿದೆ. ತಾ.ಪಂ. ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸಿಗುತ್ತಿದೆ. ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು.
–ಎಚ್.ಜಿ. ವಿಶ್ವನಾಥ ಗೌಡ, ಪ್ರಭಾರ ಪ್ರಿನ್ಸಿಪಾಲ್
ಸರ್ಕಾರಿ ಪದವಿಪೂರ್ವ ಕಾಲೇಜು ಸೌಲಭ್ಯಗಳ ಕೊರತೆ ಪರಿಣಾಮ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಂಬಂಧಿಸಿದವರು ಮೂಲ ಸೌಕರ್ಯ ಒದಗಿಸಲು ಮುಂದಾಗಬೇಕು