<p><strong>ಕುರುಗೋಡು</strong>: ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮ ಪಂಚಾಯಿತಿಯಲ್ಲಿ ಹೊಳಗುಂದಿ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿದ ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ರಾಮಪ್ಪ ಉಪ್ಪಾರ್ ಮಂಡಿಸಿದ ಪ್ರಸಕ್ತ ಸಾಲಿನ ₹6.75 ಕೋಟಿ ಬಜೆಟ್ಗೆ ಸದಸ್ಯರು ಅನುಮೋದನೆ ನೀಡಿದರು.</p>.<p>ಸರ್ಕಾರದಿಂದ ಬರುವ ಅನುದಾನ, ಮಳಿಗೆ ಬಾಡಿಗೆ, ತೆರಿಗೆ ಸೇರಿದಂತೆ ವಿವಿಧ ಮೂಲಗಳಿಂದ ಬರುವ ಆದಾಯ ಆಧಾರದಲ್ಲಿ ಬಜೆಟ್ ಮಂಡನೆ ಮಾಡಲಾಯಿತು. ಕುಡಿಯುವ ನೀರು ಪೂರೈಕೆ, ಚರಂಡಿ, ರಸ್ತೆ ನಿರ್ಮಾಣ, ಬೀದಿದೀಪ, ಗ್ರಾಮ ಪಂಚಾಯಿತಿ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಲಾಗಿದೆ.</p>.<p>ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಮಳಿಗೆ ಬಾಡಿಗೆ ಪಡೆದ ವ್ಯಕ್ತಿ ₹40 ಸಾವಿರ ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಅವರಿಗೆ ಆರು ಬಾರಿ ನೊಟೀಸ್ ನೀಡಿದರೂ ಯಾವುದೇ ಸಮಜಾಯಿಸಿ ನೀಡಿಲ್ಲ. ಕೂಡಲೇ ಬಾಡಿಗೆ ಪಾವತಿಸಬೇಕು ಅಥವಾ ಪೊಲೀಸ್ ಭದ್ರತೆಯಲ್ಲಿ ಮಳಿಗೆ ತೆರವುಗೊಳಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು.</p>.<p>ವಿಶ್ವ ಡೆವಲಪರ್ಸ್ಗೆ ಸೇರಿದ ಸರ್ವೇ ನಂಬರ್ 426ರ ಒಂದೂವರೆ ಎಕರೆ ಭೂಮಿಯಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಸದಸ್ಯರು ಒಮ್ಮತ ಸೂಚಿಸಿದರು.</p>.<p>ಅಂಗವಿಕಲರ ಸಮುದಾಯ ಭವನ ನಿರ್ಮಾಣ, ಮೂಲ ಸೌಕರ್ಯ, ಕುಡಿಯುವ ನೀರು, ಚರಂಡಿ ಸ್ವಚ್ಛತೆ ವಿಷಯಗಳು ಚರ್ಚೆಗೆ ಗ್ರಾಸವಾದವು. ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅನುಮೋದಿಸಲಾಯಿತು.</p>.<p>ಉಪಾಧ್ಯಕ್ಷೆ ರಾಜಮ್ಮ, ಸದಸ್ಯರಾದ ಎಸ್.ಎಂ. ಅಡಿವೆಯ್ಯ ಸ್ವಾಮಿ, ಗುಡಟ್ಟಿ ಈರಣ್ಣ, ಅನಿಲ್ ಕುಮಾರ್, ಕೆ.ವೀರೇಶ್, ವಿ.ರಮೇಶ್, ಕೆ.ಶಿವಪ್ಪ, ಎಂ.ಸ್ನೇಹಲತಾ, ಎನ್.ಶಿವಮ್ಮ, ಪಾರ್ವತಿ, ದಾನಮ್ಮ, ಲಕ್ಷ್ಮಮ್ಮ , ಸಲೀಂ, ಎನ್.ಹನುಮಂತ, ಕರಿಬಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮ ಪಂಚಾಯಿತಿಯಲ್ಲಿ ಹೊಳಗುಂದಿ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿದ ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ರಾಮಪ್ಪ ಉಪ್ಪಾರ್ ಮಂಡಿಸಿದ ಪ್ರಸಕ್ತ ಸಾಲಿನ ₹6.75 ಕೋಟಿ ಬಜೆಟ್ಗೆ ಸದಸ್ಯರು ಅನುಮೋದನೆ ನೀಡಿದರು.</p>.<p>ಸರ್ಕಾರದಿಂದ ಬರುವ ಅನುದಾನ, ಮಳಿಗೆ ಬಾಡಿಗೆ, ತೆರಿಗೆ ಸೇರಿದಂತೆ ವಿವಿಧ ಮೂಲಗಳಿಂದ ಬರುವ ಆದಾಯ ಆಧಾರದಲ್ಲಿ ಬಜೆಟ್ ಮಂಡನೆ ಮಾಡಲಾಯಿತು. ಕುಡಿಯುವ ನೀರು ಪೂರೈಕೆ, ಚರಂಡಿ, ರಸ್ತೆ ನಿರ್ಮಾಣ, ಬೀದಿದೀಪ, ಗ್ರಾಮ ಪಂಚಾಯಿತಿ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಲಾಗಿದೆ.</p>.<p>ಗ್ರಾಮದ ಬಸ್ ನಿಲ್ದಾಣದ ಪಕ್ಕದಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಮಳಿಗೆ ಬಾಡಿಗೆ ಪಡೆದ ವ್ಯಕ್ತಿ ₹40 ಸಾವಿರ ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಅವರಿಗೆ ಆರು ಬಾರಿ ನೊಟೀಸ್ ನೀಡಿದರೂ ಯಾವುದೇ ಸಮಜಾಯಿಸಿ ನೀಡಿಲ್ಲ. ಕೂಡಲೇ ಬಾಡಿಗೆ ಪಾವತಿಸಬೇಕು ಅಥವಾ ಪೊಲೀಸ್ ಭದ್ರತೆಯಲ್ಲಿ ಮಳಿಗೆ ತೆರವುಗೊಳಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು.</p>.<p>ವಿಶ್ವ ಡೆವಲಪರ್ಸ್ಗೆ ಸೇರಿದ ಸರ್ವೇ ನಂಬರ್ 426ರ ಒಂದೂವರೆ ಎಕರೆ ಭೂಮಿಯಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಸದಸ್ಯರು ಒಮ್ಮತ ಸೂಚಿಸಿದರು.</p>.<p>ಅಂಗವಿಕಲರ ಸಮುದಾಯ ಭವನ ನಿರ್ಮಾಣ, ಮೂಲ ಸೌಕರ್ಯ, ಕುಡಿಯುವ ನೀರು, ಚರಂಡಿ ಸ್ವಚ್ಛತೆ ವಿಷಯಗಳು ಚರ್ಚೆಗೆ ಗ್ರಾಸವಾದವು. ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅನುಮೋದಿಸಲಾಯಿತು.</p>.<p>ಉಪಾಧ್ಯಕ್ಷೆ ರಾಜಮ್ಮ, ಸದಸ್ಯರಾದ ಎಸ್.ಎಂ. ಅಡಿವೆಯ್ಯ ಸ್ವಾಮಿ, ಗುಡಟ್ಟಿ ಈರಣ್ಣ, ಅನಿಲ್ ಕುಮಾರ್, ಕೆ.ವೀರೇಶ್, ವಿ.ರಮೇಶ್, ಕೆ.ಶಿವಪ್ಪ, ಎಂ.ಸ್ನೇಹಲತಾ, ಎನ್.ಶಿವಮ್ಮ, ಪಾರ್ವತಿ, ದಾನಮ್ಮ, ಲಕ್ಷ್ಮಮ್ಮ , ಸಲೀಂ, ಎನ್.ಹನುಮಂತ, ಕರಿಬಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>