<p><strong>ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ):</strong> ಪಟ್ಟಣದ 20ನೇ ವಾರ್ಡಿನ ದೇವಿನಗರ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ಬುಧವಾರ ಮುಂಜಾನೆ ಕಾರೊಂದು ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. </p><p>ಮೃತರನ್ನು ನಿಟ್ಟೂರಿನ ಪ್ರಸಾದ್ ರಾವ್ (75) ಸಿರುಗುಪ್ಪ ನಿವಾಸಿಗಳಾದ ವಿಜಯ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ. </p><p>ತೀವ್ರವಾಗಿ ಗಾಯಗೊಂಡ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರರಾವ್ (45) ಇವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ಗೆ ದಾಖಲಿಸಲಾಗಿದೆ.</p><p>ನಿಟ್ಟೂರು ಗ್ರಾಮದವರಾದ, ಸದ್ಯ ಸಿರುಗುಪ್ಪ ನಗರದಲ್ಲಿ ವಾಸವಾಗಿರುವ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸು ಬರುವಾಗ ದೇವಿನಗರದ ಬಳಿ ಅಪಘಾತವಾಗಿದೆ. </p><p>ದಟ್ಟ ಮಂಜಿನ ಪರಿಣಾಮ ರಸ್ತೆ ಕಾಣದೇ, ಈ ಅವಘಢ ಸಂಭವಿಸಿದೆ ಎಂದು ಹೇಳಲಾಗಿದೆ. </p><p>ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ (ಬಳ್ಳಾರಿ ಜಿಲ್ಲೆ):</strong> ಪಟ್ಟಣದ 20ನೇ ವಾರ್ಡಿನ ದೇವಿನಗರ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ಬುಧವಾರ ಮುಂಜಾನೆ ಕಾರೊಂದು ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. </p><p>ಮೃತರನ್ನು ನಿಟ್ಟೂರಿನ ಪ್ರಸಾದ್ ರಾವ್ (75) ಸಿರುಗುಪ್ಪ ನಿವಾಸಿಗಳಾದ ವಿಜಯ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ. </p><p>ತೀವ್ರವಾಗಿ ಗಾಯಗೊಂಡ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರರಾವ್ (45) ಇವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ಗೆ ದಾಖಲಿಸಲಾಗಿದೆ.</p><p>ನಿಟ್ಟೂರು ಗ್ರಾಮದವರಾದ, ಸದ್ಯ ಸಿರುಗುಪ್ಪ ನಗರದಲ್ಲಿ ವಾಸವಾಗಿರುವ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸು ಬರುವಾಗ ದೇವಿನಗರದ ಬಳಿ ಅಪಘಾತವಾಗಿದೆ. </p><p>ದಟ್ಟ ಮಂಜಿನ ಪರಿಣಾಮ ರಸ್ತೆ ಕಾಣದೇ, ಈ ಅವಘಢ ಸಂಭವಿಸಿದೆ ಎಂದು ಹೇಳಲಾಗಿದೆ. </p><p>ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>