<p>ಸಿರುಗುಪ್ಪ: ‘2027ರ ಜನಗಣತಿ ಸಂಪೂರ್ಣ ಡಿಜಿಟಲ್ ಆಧಾರಿತ ಪ್ರಕ್ರಿಯೆಯಾಗಿದೆ. ಗಣತಿದಾರರಿಗೆ ಮೂರು ಹಂತದಲ್ಲಿ ತರಬೇತಿ ನೀಡಲಾಗುವುದು. ದೋಷ-ಮುಕ್ತ ಹಾಗೂ ಪಾರದರ್ಶಕ ಮಾಹಿತಿ ಸಂಗ್ರಹಣೆಗೆ ತರಬೇತಿ ಸಹಕಾರಿ’ ಎಂದು ತಹಶೀಲ್ದಾರ್ ಗೌಸಿಯ ಬೇಗಂ ಹೇಳಿದರು.</p>.<p>ನಗರದ ವಿವೇಕಾನಂದ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ನಗರಸಭೆ, ಪಟ್ಟಣ ಪಂಚಾಯಿತಿ ವತಿಯಿಂದ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ಭಾನುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಸಾರ್ವಜನಿಕರಿಗೆ ಆನ್ಲೈನ್ ಮೂಲಕ ಮಾಹಿತಿ ಸಲ್ಲಿಸಲು ‘ಸ್ವಯಂ-ಗಣತಿ’ ವ್ಯವಸ್ಥೆ ನೀಡಲಾಗುತ್ತಿದೆ.</p>.<p>ತಾಲ್ಲೂಕು ಆಡಳಿತದಿಂದ ಗ್ರಾಮೀಣ ಭಾಗದಲ್ಲಿ 469 ಗಣತಿದಾರರು, 68 ಮೇಲ್ವೀಚಾರಕರು, 10 ತರಬೇತಿದಾರರು. ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 90 ಗಣತಿದಾರರು, 15 ಮೇಲ್ವಿಚಾರಕರು, 2 ತರಬೇತಿದಾರರು, 16 ಕಾಯ್ದಿದಿರಿಸಿದ ಗಣತಿದಾರರು. ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 45 ಗಣತಿದಾರರು, 2 ತರಬೇತಿದಾರರನ್ನು ನೇಮಿಸಲಾಗಿದೆ’ ಎಂದರು.</p>.<p>ಜಿಲ್ಲಾ ಡಿಎಸ್ಒ ಅಧಿಕಾರಿ ಪತ್ರಿಬಸಪ್ಪ, ಜಿಲ್ಲಾ ಜನಗಣತಿ ನೋಡಲ್ ಅಧಿಕಾರಿ ಶ್ರೀನಾಥ್, ಬಿಇಒ ಎಚ್.ಗುರಪ್ಪ, ಬಿಸಿಎಂ ಸಹಾಯಕ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಪೌರಾಯುಕ್ತ ಗಂಗಾಧರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪರಶುರಾಮ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಚಂದ್ರಕಾಂತ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-25-252425774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರುಗುಪ್ಪ: ‘2027ರ ಜನಗಣತಿ ಸಂಪೂರ್ಣ ಡಿಜಿಟಲ್ ಆಧಾರಿತ ಪ್ರಕ್ರಿಯೆಯಾಗಿದೆ. ಗಣತಿದಾರರಿಗೆ ಮೂರು ಹಂತದಲ್ಲಿ ತರಬೇತಿ ನೀಡಲಾಗುವುದು. ದೋಷ-ಮುಕ್ತ ಹಾಗೂ ಪಾರದರ್ಶಕ ಮಾಹಿತಿ ಸಂಗ್ರಹಣೆಗೆ ತರಬೇತಿ ಸಹಕಾರಿ’ ಎಂದು ತಹಶೀಲ್ದಾರ್ ಗೌಸಿಯ ಬೇಗಂ ಹೇಳಿದರು.</p>.<p>ನಗರದ ವಿವೇಕಾನಂದ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತ, ನಗರಸಭೆ, ಪಟ್ಟಣ ಪಂಚಾಯಿತಿ ವತಿಯಿಂದ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ಭಾನುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಸಾರ್ವಜನಿಕರಿಗೆ ಆನ್ಲೈನ್ ಮೂಲಕ ಮಾಹಿತಿ ಸಲ್ಲಿಸಲು ‘ಸ್ವಯಂ-ಗಣತಿ’ ವ್ಯವಸ್ಥೆ ನೀಡಲಾಗುತ್ತಿದೆ.</p>.<p>ತಾಲ್ಲೂಕು ಆಡಳಿತದಿಂದ ಗ್ರಾಮೀಣ ಭಾಗದಲ್ಲಿ 469 ಗಣತಿದಾರರು, 68 ಮೇಲ್ವೀಚಾರಕರು, 10 ತರಬೇತಿದಾರರು. ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 90 ಗಣತಿದಾರರು, 15 ಮೇಲ್ವಿಚಾರಕರು, 2 ತರಬೇತಿದಾರರು, 16 ಕಾಯ್ದಿದಿರಿಸಿದ ಗಣತಿದಾರರು. ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 45 ಗಣತಿದಾರರು, 2 ತರಬೇತಿದಾರರನ್ನು ನೇಮಿಸಲಾಗಿದೆ’ ಎಂದರು.</p>.<p>ಜಿಲ್ಲಾ ಡಿಎಸ್ಒ ಅಧಿಕಾರಿ ಪತ್ರಿಬಸಪ್ಪ, ಜಿಲ್ಲಾ ಜನಗಣತಿ ನೋಡಲ್ ಅಧಿಕಾರಿ ಶ್ರೀನಾಥ್, ಬಿಇಒ ಎಚ್.ಗುರಪ್ಪ, ಬಿಸಿಎಂ ಸಹಾಯಕ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಪೌರಾಯುಕ್ತ ಗಂಗಾಧರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪರಶುರಾಮ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಚಂದ್ರಕಾಂತ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-25-252425774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>